August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂಥ : ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

ತಣ್ಣೀರುಪಂಥ: ಗ್ರಾಮ ಪಂಚಾಯತ್ ತಣ್ಣೀರುಪಂಥ ಅರಿವು ಕೇಂದ್ರ ಗ್ರಂಥಾಲಯ ತಣ್ಣೀರುಪಂತ ಇಲ್ಲಿ,”ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ” ಸರಕಾರದ ಆದೇಶದಂತೆ ಮೇ 04 ರಿಂದ ಮೇ11 ವರೆಗೆ ನಡೆದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಮೇ 12 ರಂದು ನಡೆಯಿತು.

ಕಾರ್ಯಕ್ರಮಕ್ಕೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಮ್ಮಯ್ಯ ಜೆ.ಹೆಚ್ , ಕಾರ್ಯದರ್ಶಿ ಆನಂದ್, ಸಂಪನ್ಮೂಲ ವ್ಯಕ್ತಿಯಾಗಿ ಪ್ರವೀಣ್ ಹಾಗೂ ಪಂಚಾಯಿತಿ ಸಿಬ್ಬಂದಿ ವರ್ಗ ಪಾಲ್ಗೊಂಡರು.

ನಂತರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರು ಶಿಬಿರದಲ್ಲಿ ಭಾಗವಹಿಸಿದ ಮಕ್ಕಳಿಗೆ ಅಭಿನಂದನೆ ಹೇಳಿ ಶಿಬಿರದ ಪ್ರಯೋಜನವನ್ನು ಮಕ್ಕಳಿಗೆ ತಿಳಿಸಿ ನಿಮ್ಮ ಮುಂದಿನ ಜೀವನದಲ್ಲಿ ಉತ್ತಮ ವಿದ್ಯಾರ್ಥಿಗಳಾಗಿ ಹೊರ ಹೊಮ್ಮಲು ಈ ಶಿಬಿರವು ನಿಮಗೆ ಮಾರ್ಗದರ್ಶನವಾಗಲಿ ಎಂದು ಶುಭ ಹಾರೈಸಿದರು. ಶಿಬಿರದಲ್ಲಿ ಭಾಗವಹಿಸಿದ ಮಕ್ಕಳು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿ ತಮ್ಮ ತಮ್ಮ ಪ್ರತಿಭೆಯನ್ನು ಹಾಡು ನಾಟಕ ನೃತ್ಯದ ಮೂಲಕ ವ್ಯಕ್ತಪಡಿಸಿದರು.
ಶಿಬಿರದಲ್ಲಿ ಭಾಗವಹಿಸಿದ 25 ಮಕ್ಕಳಿಗೆ ಪ್ರಮಾಣ ಪತ್ರ, ಪೆನ್ನು, ಪುಸ್ತಕ, ರಬ್ಬರ್, ಪೆನ್ಸಿಲ್, ಕಂಪಾಸ್ ಬಾಕ್ಸ್ ನೀಡಿ ಅಭಿನಂದಿಸಲಾಯಿತು . ಶಿಬಿರದಲ್ಲಿ ಭಾಗವಹಿಸಿದ ಮಕ್ಕಳಿಗೆ ನೇತ್ರಾವತಿ ಹೋಟೆಲ್ ಮಾಲೀಕರು ಹಣ್ಣು ಹಂಪಲು ನೀಡಿದರು.

Related posts

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಬೆಳ್ತಂಗಡಿ ಶ್ರೀದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್ ಸಂಸ್ಥೆಯಲ್ಲಿ ಮನ್ಸೂನ್ ಆಫರ್ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಕೊಕ್ಕಡ: ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಶಿಬಾಜೆ ಸುರಕ್ಷಿತಾರಣ್ಯದ ಪಡಂತಾಜೆ ರಸ್ತೆ ಬದಿ 6 ತಿಂಗಳ ಪ್ರಾಯದ ಚಿರತೆ ಮರಿಯ ಶವ ಪತ್ತೆ

Suddi Udaya

ರಬ್ಬರ್ ಬೆಳೆಗಾರರ ಸಮಸ್ಯೆ: ಕೇಂದ್ರ ಸರಕಾರಕ್ಕೆ ಹಕ್ಕೊತ್ತಾಯ ವರದಿ ಸಲ್ಲಿಕೆ

Suddi Udaya

ಬೆಳ್ತಂಗಡಿ: ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ವಿಜಯೇಂದ್ರ ಟಿ.ಎಚ್ ರವರಿಗೆ ಬೀಳ್ಕೊಡುಗೆ

Suddi Udaya
error: Content is protected !!