24.1 C
ಪುತ್ತೂರು, ಬೆಳ್ತಂಗಡಿ
June 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಬೇಡಿ: ಅಭಿನಂದನ್ ಹರೀಶ್ ಕುಮಾರ್

ಬೆಳ್ತಂಗಡಿ:ದೇಶದ ಅತ್ಯಂತ ಮಹತ್ವದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ NEET ಪರೀಕ್ಷೆಯಲ್ಲಿ ನಡೆದಿರುವ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ವಿಶ್ವಾಸವನ್ನೇ ಕುಗ್ಗಿಸಿದೆ. ಲಕ್ಷಾಂತರ ವಿದ್ಯಾರ್ಥಿಗಳು ಹಗಲು-ರಾತ್ರಿ ಶ್ರಮಪಟ್ಟು ಪರೀಕ್ಷೆಗೆ ಸಿದ್ಧರಾಗುತ್ತಿರುವಾಗ, ಇಂತಹ ಅಕ್ರಮಗಳು ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳುಮಾಡುವ ಕ್ರೂರ ಕೃತ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಸಮಿತಿ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಈ ಘಟನೆಗೆ ಸಂಪೂರ್ಣ ಹೊಣೆಗಾರರಾಗಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಉಂಟಾಗಿರುವ ಆತಂಕಕ್ಕೆ ತಕ್ಷಣ ಸ್ಪಷ್ಟನೆ ನೀಡಬೇಕು. ದೇಶದ ಯುವಕರ ಕನಸುಗಳ ಮೇಲೆ ರಾಜಕೀಯ ಹಾಗೂ ಭ್ರಷ್ಟಾಚಾರದ ನೆರಳು ಬೀಳುತ್ತಿರುವುದು ಅತ್ಯಂತ ದುಃಖಕರ ಸಂಗತಿ. ಈ ಪ್ರಕರಣದ ಬಗ್ಗೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸುತ್ತೇನೆ.

ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವ ಎಲ್ಲಾ ಆರೋಪಿಗಳನ್ನು ಕಟ್ಟುನಿಟ್ಟಿನ ಕ್ರಮಕ್ಕೆ ಒಳಪಡಿಸಬೇಕು. ಜೊತೆಗೆ, ವಿದ್ಯಾರ್ಥಿಗಳಿಗೆ ನ್ಯಾಯ ಸಿಗುವಂತೆ ಪಾರದರ್ಶಕ ಮತ್ತು ವಿಶ್ವಾಸಾರ್ಹ ಪರೀಕ್ಷಾ ವ್ಯವಸ್ಥೆಯನ್ನು ರೂಪಿಸುವುದು ಕೇಂದ್ರ ಸರ್ಕಾರದ ಕರ್ತವ್ಯವಾಗಿದೆ. ದೇಶದ ಯುವಕರು ಇಂದು ನ್ಯಾಯ ಮತ್ತು ಪಾರದರ್ಶಕತೆಯನ್ನು ಕೇಳುತ್ತಿದ್ದಾರೆ. ಅವರ ಶ್ರಮಕ್ಕೆ ಬೆಲೆ ಸಿಗಬೇಕು, ಅವರ ಭವಿಷ್ಯ ರಾಜಕೀಯ ಹಾಗೂ ಭ್ರಷ್ಟ ವ್ಯವಸ್ಥೆಗಳ ಬಲಿಯಾಗಬಾರದು ಎಂದವರು ತಿಳಿಸಿದ್ದಾರೆ.

Related posts

ರಕ್ಷಿತ್ ಶಿವರಾಂ ಮನವಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸ್ಪಂದನೆ : ಅರಸಿನಮಕ್ಕಿ ಶಾಲೆಗೆ ಶಿಕ್ಷಕರ ನೇಮಕ

Suddi Udaya

ದ.ಕ. ಸಹಕಾರಿ ಹಾಲು ಒಕ್ಕೂಟದಿಂದ ನಂದಿನಿ ಪ್ರಿಮಿಯಮ್ ಪ್ರೊಬಯಾಟಿಕ್ ಮೊಸರು ಬಿಡುಗಡೆ

Suddi Udaya

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ಪ್ರಮೋದ್ ಗೌಡ ದಿಡುಪೆ ಆಯ್ಕೆ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ ನ್ಯಾಚುರೋಪತಿ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

Suddi Udaya

ಮಾಲಾಡಿ ಸರ್ಕಾರಿ ಐಟಿಐ ಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya
error: Content is protected !!