23.6 C
ಪುತ್ತೂರು, ಬೆಳ್ತಂಗಡಿ
June 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 17: ಬೆಳ್ತಂಗಡಿ ರೋಟರಿ ಸಂಸ್ಥೆಯಿಂದ “ಕನ್ನಡ ಸಾಹಿತ್ಯ ಸಂಭ್ರಮ ಮತ್ತು ಬಹುಭಾಷಾ ಕವಿ ಗೋಷ್ಠಿ” ಸಮ್ಮೇಳನ

ಬೆಳ್ತಂಗಡಿ: ಬೆಳ್ತಂಗಡಿ ರೋಟರಿ ಸಂಸ್ಥೆ ಒಂದು ಅಂತರಾಷ್ಟ್ರೀಯ ಸೇವಾ ಸಂಸ್ಥೆ. ಆದರೆ ಅದರ ಸದಸ್ಯರಲ್ಲಿ ಅನೇಕ ಉತ್ತಮ ವಾಗ್ಮಿಗಳು, ಲೇಖಕರು, ಸಾಹಿತಿಗಳು ಇದ್ದಾರೆ. ಪ್ರಸಕ್ತ ಸಾಲಿನ ಅಧ್ಯಕ್ಷ ರೋ. ಡಾ ಪ್ರಕಾಶ ಪ್ರಭು ಹಾಗೂ ಕಾರ್ಯದರ್ಶಿ ಡಾ ಎಂ ಎಂ ದಯಾಕರರು, ಹಾಗೂ ಸದಸ್ಯ ರೋ. ಸೋಮಶೇಖರ ಶೆಟ್ಟಿಯವರು ಉತ್ತಮ ಲೇಖಕರು ಮತ್ತು ಸಾಹಿತಿಗಳು, ಡಾ ಪ್ರದೀಪ, ಪ್ರತಾಪ ಸಿಂಹ ನಾಯಕ್, ಧನಂಜಯ್ ರಾವ್ ಮುಂತಾದ ಅನೇಕ ಸದಸ್ಯರು ಉತ್ತಮ ವಾಗ್ಮಿಗಳು. ಹಾಗಾಗಿ ಸಹಜವಾಗಿ ಸಾಹಿತ್ಯದೆಡೆಗೂ ಆಸಕ್ತಿಯನ್ನು ಬೆಳ್ತಂಗಡಿ ರೋಟರಿ ಸಂಸ್ಥೆ ಹೊಂದಿದೆ.

ಈ ವರೇಗೆ 3 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ 450ಕ್ಕೂ ಮಿಕ್ಕಿ ವಿವಿಧ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಮಾಡಿರುವ ಈ ಸಂಸ್ಥೆ, ಈ ವರ್ಷದ ಕೊನೆಯ ಸೇವಾ ಕಾರ್ಯಕ್ರಮವಾಗಿ ಬೆಳ್ತಂಗಡಿಯ ರೋಟರೀ ಕ್ಲಬ್ ನ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಸಾಹಿತ್ಯ ಕ್ಷೇತ್ರವನ್ನು ಆಯ್ದುಕೊಂಡಿದೆ.

ಮೇ 17 ಉಜಿರೆಯ ಅರಳೀ ರಸ್ತೆಯಲ್ಲಿರುವ ರೋಟರೀ ಸೇವಾ ಭವನದಲ್ಲಿ “ಕನ್ನಡ ಸಾಹಿತ್ಯ ಸಂಭ್ರಮ ಮತ್ತು ಬಹುಭಾಷಾ ಕವಿ ಗೋಷ್ಠಿ” ಸಮ್ಮೇಳನ ನಡೆಯಲಿದೆ. ಶರತ್ ಕೃಷ್ಣ ಪಡ್ವೆಟ್ನಾಯರ ಗೌರವ ಅಧ್ಯಕ್ಷತೆಯಲ್ಲಿ, ರೋಟರಿ ಕ್ಲಬ್ ಅಧ್ಯಕ್ಷ ಡಾ. ಪ್ರಕಾಶ ಪ್ರಭು, ಕಾರ್ಯದರ್ಶಿ ಡಾ ಎಂ ಎಂ ದಯಾಕರ ರವರ ನೇತೃತ್ವದಲ್ಲಿ ನಡೆಯಲಿದೆ. ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಯದುಪತಿ ಗೌಡರು ಸಮ್ಮೇಳನ ಅಧ್ಯಕ್ಷರಾಗಿ, ಕರ್ನಾಟಕ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷ ಪ್ರದೀಪ ಕಲ್ಕೂರರು ಉದ್ಘಾಟಕರಾಗಿ, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಕರ್ನಾಟಕ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ ಎಂ ಪಿ ಶ್ರೀನಾಥ , ಊರಿನ ಗಣ್ಯ ವ್ಯಕ್ತಿಗಳಾದ ಸಂಧ್ಯಾ ಗ್ರೂಪ್ಸ ನ ಮಾಲಕ ರಾಜೇಶ ಪೈ, ಎಕ್ಸೆಲ್ ಸಂಸ್ಥೆಯ ಅಧ್ಯಕ್ಷ ಸುಮಂತ ಕುಮಾರ್ ಜೈನ್, ರಬ್ಬರ್ ಸೊಸೈಟಿಯ ಅಧ್ಯಕ್ಷ ಶ್ರೀಧರ ಜಿ ಭಿಡೆ, ವಸಂತ ಶೆಟ್ಟಿ, ಶ್ರದ್ಧಾ ಪ್ರಿಂಟರ್ಸ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಬೆಳಗ್ಗೆ 9:30 ಕ್ಕೆ ಉದ್ಘಾಟನೆ ಮತ್ತು ಪ್ರಬುದ್ಧ ಗೋಷ್ಠಿಗಳು “ಎಕ್ಸೆಲ್ ವಿದ್ಯಾ ಸಂಸ್ಥೆ ಸಾಹಿತ್ಯ ವೇದಿಕೆ”ಯ ಮೇಲೆ ಹಾಗೂ ಮಧ್ಯಹ್ನ 1:45 ಕ್ಕೆ ಬಹುಭಾಷಾ ಕವಿ ಗೋಷ್ಠಿ ಹಾಗೂ ಸಮಾರೋಪ ಸಮಾರಂಭ, ಹಿರಿಯ ಸಾಹಿತಿ ದಿವಂಗತ “ಎನ್ ಜಿ ಪಟವರ್ಧನ್ ಕಲಾ ವೇದಿಕೆ”ಯ ಮೇಲೆ ನಡೆಯಲಿರುವುದು. ಬೆಳಗ್ಗೆ ಉದ್ಛಾಟನಾ ಕಾರ್ಯಕ್ರಮದ ಬಳಿಕ ಡಾ. ಹಳೆಮನೆ ರಾಜ ಶೇಖರ್ ರವರಿಂದ “ಹೊಸ ತಲೆ ಮಾರು ಮತ್ತು ಓದಿನ ಅಭಿರುಚಿ”, ಡಾ ದಿವಾ ಕೊಕ್ಕಡ ರವರಿಂದ “ಮನುಜ ಮತ ವಿಶ್ವ ಪಥ”, ಡಾ ರವೀಶ ಪಡಿಮಲೆ ಯವರಿಂದ “ತುಳುನಾಡಿನ ದೈವಾರಾಧನೆ”ಪ್ಪಬುದ್ಧ ಗೋಷ್ಠಿಗಳು ಹಾಗೂ ಡಾ ಪ್ರದೀಪ ಆಟುಕುಕ್ಕೆ ಅವರಿಂದ ಸಂವಹನ ಕಾರ್ಯಕ್ರಮ ನಡೆಯಲಿವೆ. ಮಧ್ಯಾಹ್ನ ಬಹುಭಾಷ ಕವಿಗೋಷ್ಠಿನಡೆಯಲಿರುವುದು. ಬೆಳಗ್ಗೆಯಿಂದ ಸಾಯಂಕಾಲದವರೇಗೆ ನಿರಂತರ ಊಟ ತಿಂಡಿ , ತಂಪು ಪಾನೀಯದ ಉಪಚಾರ ಇರುತ್ತದೆ.

ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗಾಗಿ ವಿಶೇಷ ಸಾಮೂಹಿಕ ಛಾಯಾಚಿತ್ರ ಸ್ಪರ್ಧೆ ಇರುತ್ತದೆ. ಕನಿಷ್ಠ 7 ಜನರು, ಆಕರ್ಷಕ ಸಮವಸ್ತ್ರಧಾರಿಗಳಾಗಿ, ಇಡೀ ದಿನದ ಕಾರ್ಯಕ್ರಮವನ್ನು ಒಟ್ಟಿಗೆ ಕೂತು ವೀಕ್ಷಣೆ ಮಾಡಿ, ಛಾಯಾಚಿತ್ರ ತೆಗೆದು ಅಥವ ರೀಲ್ಸ್ ಮಾಡಿ ಅಧ್ಯಕ್ಷರ ವಾಟ್ಸಪ್ ಗೆ ಕಳುಹಿಸಬೇಕು. ಪ್ರಥಮ ತಂಡಕ್ಕೆ ರೂ 2,000/-, ದ್ವಿತಿಯ ತಂಡಕ್ಕೆ 1,000/-, ತೃತೀಯ ತಂಡಕ್ಕೆ ರೂ 500 ಬಹುಮಾನ ಇರುತ್ತದೆ. ಹೆಚ್ಚಿನ ವಿವರಗಳಿಗೆ ಅಧ್ಯಕ್ಷರ ವಾಟ್ಸಪ್ ಸಂಖ್ಯೆ 9448060206 ಕ್ಕೆ ಕರೆ ಮಾಡಿ ವಿಚಾರಿಸಬಹುದು.

Related posts

ಬೆಳ್ತಂಗಡಿ: ತುಳುನಾಡ್ ಒಕ್ಕೂಟ ಸಂಘಟನೆಯ ಯುವ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಳೆ ತೆಗೆಯುವ ಯಂತ್ರಕ್ಕೆ ಸಿಲುಕಿ ಎದೆಗೆ ಬಡಿದ ರಬ್ಬರ್ ಕಪ್‌ನ ಸರಿಗೆ: ಕಾಯರ್ತಡ್ಕ ನಿವಾಸಿ ಕೊರಗಪ್ಪ ಗೌಡ ಸಾವು

Suddi Udaya

ಚಾರ್ಮಾಡಿ ಗ್ರಾ.ಪಂ. ಅಧ್ಯಕ್ಷರಾಗಿ ಶಾರದಾ ಎ., ಉಪಾಧ್ಯಕ್ಷರಾಗಿ ನೀಲು

Suddi Udaya

ತೀರ್ಥಹಳ್ಳಿ ತುಂಗಾ ನದಿಯಲ್ಲಿ ಈಜಲು ತೆರಳಿದ ಉಪನ್ಯಾಸಕರಿಬ್ಬರು ನೀರುಪಾಲು: ಬೆಳ್ತಂಗಡಿ ತಾಲೂಕಿನ ನೆರಿಯಾ ನಿವಾಸಿ ಪುನೀತ್ ನಾಪತ್ತೆ, ಮುಂದುವರಿದ ಶೋಧಕಾರ್ಯ

Suddi Udaya

ಗೇರುಕಟ್ಟೆ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯಿಂದ ಗೇರುಕಟ್ಟೆ ಶ್ರೀ ಗಣೇಶೋತ್ಸವ ಸಮಿತಿಯ ಸಭಾಂಗಣಕ್ಕೆ 50 ಚಯರ್ ಕೊಡುಗೆ

Suddi Udaya

ಭಾ.ಜ.ಪಾ. ಹಿರಿಯ ನಾಗರೀಕ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ನೇಮಕ

Suddi Udaya
error: Content is protected !!