August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಟಿಯು ಅಂತರ್ ಕಾಲೇಜು ಕ್ರಿಕೆಟ್ ಟೂರ್ನಿ : ಉಜಿರೆಯ ಎಸ್.ಡಿ.ಎಂ ಗೆ ಪ್ರಶಸ್ತಿ

ಉಜಿರೆ : ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಆಯೋಜಿಸಿದ್ದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯಗಳ ಮಂಗಳೂರು ವಿಭಾಗದ ಅಂತರ್ ಕಾಲೇಜುಗಳ ಕ್ರಿಕೆಟ್ ಪಂದ್ಯಾಟವು ನಿಟ್ಟೆಯಲ್ಲಿ ಜರಗಿತು. ಸಕ್ರೀಯವಾಗಿ ಭಾಗವಹಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಪುರುಷರ ಕ್ರಿಕೆಟ್ ತಂಡವು ದ್ವಿತೀಯ ಸ್ಥಾನ ಪಡೆಯುವುದರ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.

ಸೆಮಿಫೈನಲ್ ಹಂತದ ಪಂದ್ಯದಲ್ಲಿ ಉಜಿರೆ ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ ತಂಡವು ಜಿಲ್ಲೆಯ ಕೆನರಾ ಇಂಜಿನಿಯರಿಂಗ್ ಕಾಲೇಜ್ ತಂಡದ ವಿರುದ್ಧ ರೋಚಕ (99/10 – 101/9 ) 1 ವಿಕೆಟ್ ಜಯ ಸಾಧಿಸಿ ಫೈನಲ್ ಪ್ರವೇಶ ಪಡೆಯಿತು. ಬಳಿಕ ಫೈನಲ್ ಹಂತದ ಪಂದ್ಯದಲ್ಲಿ ಸಾಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜು ತಂಡದ ವಿರುದ್ಧ ಸೆಣಸಾಡಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು. ಈ ಮೂಲಕ ಶಿವಮೊಗ್ಗದಲ್ಲಿ ನಡೆಯಲಿರುವ ವಿಟಿಯು ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟಕ್ಕೆ ಉಜಿರೆಯ ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದ ತಂಡವು ಆಯ್ಕೆಗೊಂಡಿದೆ. ಟೂರ್ನಮೆಂಟ್‌ನ ಅತ್ಯುತ್ತಮ ಬೌಲರ್ ಪ್ರಶಸ್ತಿಯನ್ನು ಎಸ್.ಡಿ.ಎಂ ತಂಡದ ಗೌತಮ್ ಆರ್. ಎಂ. ಪಡೆದುಕೊಂಡರು. ತಂಡಕ್ಕೆ ಉಜಿರೆಯ ತಾಂತ್ರಿಕ ಮಹಾವಿದ್ಯಾಲಯ ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರಭಾಕರ್ ತರಬೇತಿಯನ್ನು ನೀಡಿರುತ್ತಾರೆ.

ಪ್ರಶಸ್ತಿ ವಿಜೇತ ತಂಡದಲ್ಲಿ ವಿದ್ಯಾರ್ಥಿಗಳಾದ ಅಯಾನ್ ಖಾನ್ (ನಾಯಕ), ಸಾಹಿಲ್ ಬೋವಿ, ಅಭಯಚಂದ್ರ, ಆರ್ಯನ್ , ಶ್ರೀರಾಮ್ , ಪ್ರಜ್ವಲ್ , ಆಕಾಶ್ , ಶ್ರೇಯಸ್, ಗೌತಮ್ , ಬಸವರಾಜ್ , ಶಿಶಿರ್ , ತ್ರೈಲೋಕ್ಯಾ , ವಿವೇಕ್, ಸಾತ್ವಿಕ್ ಮತ್ತು ವಿಕ್ರಮ್ ಭಾಗವಹಿಸಿರುತ್ತಾರೆ.

Related posts

ನರೇಗಾದಲ್ಲಿ ಗುರಿ ಸಾಧಿಸಿದ ಅರಸಿನಮಕ್ಕಿ ಗ್ರಾ.ಪಂ. ಗೆ ಪ್ರಶಂಸಾ ಪತ್ರ ಮತ್ತು ಸ್ಮರಣಿಕೆ ಗೌರವ

Suddi Udaya

ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ : ಬೆಳ್ತಂಗಡಿಯಲ್ಲೂ ಆಡಳಿತ ಸೌಧದ ಎದುರು ಧರಣಿ- ಕಂದಾಯ ಸೇವೆಯಲ್ಲಿ ವ್ಯತ್ಯಯ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ತರಬೇತಿ ಸಮ್ಮೇಳನದಲ್ಲಿ ಸಮಗ್ರ ಪ್ರಶಸ್ತಿ.

Suddi Udaya

ಎನ್.ಎಂ.ಎಂ.ಎಸ್. ಪರೀಕ್ಷೆ: ಶಿರ್ಲಾಲು ಶಾಲೆಯ ಕೆ.ಪುಣ್ಯಶ್ರೀ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ಪ್ರಾರ್ಥನ ಶೆಟ್ಟಿ ರಾಜ್ಯಕ್ಕೆ ಎರಡನೇ ಸ್ಥಾನ, ವಾಣಿಜ್ಯ ವಿಭಾಗದಲ್ಲಿ ಪ್ರೇರಣ ರಾಮಚಂದ್ರ ಹೆಗಡೆ ರಾಜ್ಯಕ್ಕೆ ತೃತೀಯ ಸ್ಥಾನ

Suddi Udaya

ಗುರುವಾಯನಕೆರೆ: 7 ಮಂದಿ ಸಾಧಕರಿಗೆ ‘ಎಕ್ಸೆಲ್ ಅಕ್ಷರ ಗೌರವ ಪುರಸ್ಕಾರ’ ಪ್ರದಾನ

Suddi Udaya
error: Content is protected !!