25.8 C
ಪುತ್ತೂರು, ಬೆಳ್ತಂಗಡಿ
June 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಟಿಯು ಅಂತರ್ ಕಾಲೇಜು ಕ್ರಿಕೆಟ್ ಟೂರ್ನಿ : ಉಜಿರೆಯ ಎಸ್.ಡಿ.ಎಂ ಗೆ ಪ್ರಶಸ್ತಿ

ಉಜಿರೆ : ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಆಯೋಜಿಸಿದ್ದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯಗಳ ಮಂಗಳೂರು ವಿಭಾಗದ ಅಂತರ್ ಕಾಲೇಜುಗಳ ಕ್ರಿಕೆಟ್ ಪಂದ್ಯಾಟವು ನಿಟ್ಟೆಯಲ್ಲಿ ಜರಗಿತು. ಸಕ್ರೀಯವಾಗಿ ಭಾಗವಹಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಪುರುಷರ ಕ್ರಿಕೆಟ್ ತಂಡವು ದ್ವಿತೀಯ ಸ್ಥಾನ ಪಡೆಯುವುದರ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.

ಸೆಮಿಫೈನಲ್ ಹಂತದ ಪಂದ್ಯದಲ್ಲಿ ಉಜಿರೆ ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ ತಂಡವು ಜಿಲ್ಲೆಯ ಕೆನರಾ ಇಂಜಿನಿಯರಿಂಗ್ ಕಾಲೇಜ್ ತಂಡದ ವಿರುದ್ಧ ರೋಚಕ (99/10 – 101/9 ) 1 ವಿಕೆಟ್ ಜಯ ಸಾಧಿಸಿ ಫೈನಲ್ ಪ್ರವೇಶ ಪಡೆಯಿತು. ಬಳಿಕ ಫೈನಲ್ ಹಂತದ ಪಂದ್ಯದಲ್ಲಿ ಸಾಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜು ತಂಡದ ವಿರುದ್ಧ ಸೆಣಸಾಡಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು. ಈ ಮೂಲಕ ಶಿವಮೊಗ್ಗದಲ್ಲಿ ನಡೆಯಲಿರುವ ವಿಟಿಯು ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟಕ್ಕೆ ಉಜಿರೆಯ ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದ ತಂಡವು ಆಯ್ಕೆಗೊಂಡಿದೆ. ಟೂರ್ನಮೆಂಟ್‌ನ ಅತ್ಯುತ್ತಮ ಬೌಲರ್ ಪ್ರಶಸ್ತಿಯನ್ನು ಎಸ್.ಡಿ.ಎಂ ತಂಡದ ಗೌತಮ್ ಆರ್. ಎಂ. ಪಡೆದುಕೊಂಡರು. ತಂಡಕ್ಕೆ ಉಜಿರೆಯ ತಾಂತ್ರಿಕ ಮಹಾವಿದ್ಯಾಲಯ ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರಭಾಕರ್ ತರಬೇತಿಯನ್ನು ನೀಡಿರುತ್ತಾರೆ.

ಪ್ರಶಸ್ತಿ ವಿಜೇತ ತಂಡದಲ್ಲಿ ವಿದ್ಯಾರ್ಥಿಗಳಾದ ಅಯಾನ್ ಖಾನ್ (ನಾಯಕ), ಸಾಹಿಲ್ ಬೋವಿ, ಅಭಯಚಂದ್ರ, ಆರ್ಯನ್ , ಶ್ರೀರಾಮ್ , ಪ್ರಜ್ವಲ್ , ಆಕಾಶ್ , ಶ್ರೇಯಸ್, ಗೌತಮ್ , ಬಸವರಾಜ್ , ಶಿಶಿರ್ , ತ್ರೈಲೋಕ್ಯಾ , ವಿವೇಕ್, ಸಾತ್ವಿಕ್ ಮತ್ತು ವಿಕ್ರಮ್ ಭಾಗವಹಿಸಿರುತ್ತಾರೆ.

Related posts

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ವಿಶೇಷ ಪೂಜೆ

Suddi Udaya

ಬಜಿರೆ ಗ್ರಾಮದ ಬಾಡಾರು ಮನೆಯ ನಾರಾಯಣ ಪೂಜಾರಿ ನಿಧನ

Suddi Udaya

ಖ್ಯಾತ ಹೃದ್ರೋಗ ತಜ್ಞ ಡಾ. ರಾಮಯ್ಯ ಗೌಡ ದಂಪತಿ ಉಜಿರೆಯ ಎಸ್‌ಡಿಎಂ ಆಸ್ಪತ್ರೆಗೆ ಭೇಟಿ

Suddi Udaya

ವೇಣೂರು: ಮಹಾವೀರ ನಗರ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಗಾಂಧಿ ಸಂವಾದ ಶತಮಾನದ ಆಚರಣೆ: ಬೆಳ್ತಂಗಡಿಯಲ್ಲಿ ಪೂರ್ವಭಾವಿ ಸಭೆ

Suddi Udaya

ಕೊಯ್ಯೂರು: ಸ.ಪ್ರೌ. ಶಾಲೆಯಲ್ಲಿ ಶಾಲಾ ಪಾರ್ಲಿಮೆಂಟ್ ಉದ್ಘಾಟನೆ

Suddi Udaya
error: Content is protected !!