August 15, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪುತ್ತೂರುಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ದೈವದೇವರ ಅವಹೇಳನ ಆರೋಪ: ಕಲಾವಿದರ ವಿರುದ್ಧ ದೂರು

ಬೆಳ್ತಂಗಡಿ: ಟಿವಿ ಚಾನೆಲ್‌ವೊಂದರ ಕಾರ್ಯಕ್ರಮದಲ್ಲಿ ತುಳುನಾಡಿನ ದೈವಗಳ ಬಗ್ಗೆ ಮತ್ತು ಹಿಂದೂ ಧರ್ಮದ ಸಂಸ್ಕೃತಿಯ ಬಗ್ಗೆ ತೀರಾ ಕೆಳಮಟ್ಟದಲ್ಲಿ ಅಪಹಾಸ್ಯ ಮಾಡಿ ದೈವದೇವರ ಅವಹೇಳನ ಮಾಡಿದ್ದಾರೆಂದು ಆರೋಪಿಸಿ ಕಲಾವಿದರ ವಿರುದ್ಧ ಪುತ್ತೂರು ನಗರ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ.

ಬೆಳಂದೂರು ಗ್ರಾಮದ ಧನ್ಯಕುಮಾರ್ ಟಿ ಅವರು ದೂರು ನೀಡಿದವರು. ನಾನು ನನ್ನ ಮೊಬೈಲ್ ವೀಕ್ಷಿಸುತ್ತಿರುವಾಗ ಒಂದು ವಿಡಿಯೋ ಕಂಡು ಬಂದಿದ್ದು, ಅದರಲ್ಲಿ ಖಾಸಗಿ ಟಿವಿ ಚಾನೆಲ್ ಕಾರ್ಯಕ್ರಮದಲ್ಲಿ ಕಾಳಮ್ಮನ ವಿಚಾರವಾಗಿ ಪ್ರಸ್ತಾಪಿಸಿ ತುಳುನಾಡ ದೈವಗಳ ಬಗ್ಗೆ ಮತ್ತು ಹಿಂದೂ ಧರ್ಮದ ಸಂಸ್ಕೃತಿಯ ಬಗ್ಗೆ ತೀರಾ ಕೆಳಮಟ್ಟದಲ್ಲಿ ಅಪಹಾಸ್ಯ ಮಾಡಿ ದೈವದೇವರ ಅವಹೇಳನ ಮಾಡಿದ್ದು, ಇದನ್ನು ನೋಡಿ ನನ್ನ ಮನಸ್ಸಿಗೆ ತೀವ್ರ ಘಾಸಿಯಾಗಿದ್ದು, ನನ್ನ ಧಾರ್ಮಿಕ ಭಾವನೆಗೆ ಧಕ್ಕೆಯಾಗಿರುತ್ತದೆ. ಆದರಿಂದ ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡಿದವರನ್ನು ವಿಚಾರಣೆಗೆ ಒಳಪಡಿಸಿ ಸೂಕ್ತ ಕಾನುನು ಕ್ರಮ ಕೈಗೊಳ್ಳುವಂತೆ ಅವರು ದೂರಿನಲ್ಲಿ ತಿಳಿಸಿದ್ದಾರೆ.ಪೊಲೀಸರು ದೂರು ಅರ್ಜಿಯನ್ನು ಸ್ವೀಕರಿಸಿ, ಈ ಕುರಿತು ದೂರು ಅರ್ಜಿಯಲ್ಲಿ ನಮೂದಿಸಿದ ವಿಚಾರದ ಬಗ್ಗೆ ಕೂಲಂಕೂಷವಾಗಿ ಪ್ರಾಥಮಿಕ ತನಿಖೆಯನ್ನು ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿಂಬರಹ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Related posts

ನಡ: ಸ್ಟಾರ್ ಲೈನ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ” ಫಿಟ್ ಫೆಸ್ಟ್ 2024 “

Suddi Udaya

ಮಚ್ಚಿನ ಮೊರಾರ್ಜಿ ಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ

Suddi Udaya

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್ ಹೆಚ್.ಎಸ್ ಆಯ್ಕೆ

Suddi Udaya

ಗೇರುಕಟ್ಟೆ ಶ್ರೀ ನಾಗಬ್ರಹ್ಮ ಸ್ವಾಮಿ ಸೇವಾ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

Suddi Udaya

ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಮ್ಯಾನ್ಯುವಲ್ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ಚಾರಣಕ್ಕೆ ಆನ್‌ಲೈನ್ ಟಿಕೆಟ್‌ ಬುಕ್ಕಿಂಗ್ ಸ್ಥಗಿತ

Suddi Udaya
error: Content is protected !!