23.6 C
ಪುತ್ತೂರು, ಬೆಳ್ತಂಗಡಿ
June 30, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪುತ್ತೂರುಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ದೈವದೇವರ ಅವಹೇಳನ ಆರೋಪ: ಕಲಾವಿದರ ವಿರುದ್ಧ ದೂರು

ಬೆಳ್ತಂಗಡಿ: ಟಿವಿ ಚಾನೆಲ್‌ವೊಂದರ ಕಾರ್ಯಕ್ರಮದಲ್ಲಿ ತುಳುನಾಡಿನ ದೈವಗಳ ಬಗ್ಗೆ ಮತ್ತು ಹಿಂದೂ ಧರ್ಮದ ಸಂಸ್ಕೃತಿಯ ಬಗ್ಗೆ ತೀರಾ ಕೆಳಮಟ್ಟದಲ್ಲಿ ಅಪಹಾಸ್ಯ ಮಾಡಿ ದೈವದೇವರ ಅವಹೇಳನ ಮಾಡಿದ್ದಾರೆಂದು ಆರೋಪಿಸಿ ಕಲಾವಿದರ ವಿರುದ್ಧ ಪುತ್ತೂರು ನಗರ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ.

ಬೆಳಂದೂರು ಗ್ರಾಮದ ಧನ್ಯಕುಮಾರ್ ಟಿ ಅವರು ದೂರು ನೀಡಿದವರು. ನಾನು ನನ್ನ ಮೊಬೈಲ್ ವೀಕ್ಷಿಸುತ್ತಿರುವಾಗ ಒಂದು ವಿಡಿಯೋ ಕಂಡು ಬಂದಿದ್ದು, ಅದರಲ್ಲಿ ಖಾಸಗಿ ಟಿವಿ ಚಾನೆಲ್ ಕಾರ್ಯಕ್ರಮದಲ್ಲಿ ಕಾಳಮ್ಮನ ವಿಚಾರವಾಗಿ ಪ್ರಸ್ತಾಪಿಸಿ ತುಳುನಾಡ ದೈವಗಳ ಬಗ್ಗೆ ಮತ್ತು ಹಿಂದೂ ಧರ್ಮದ ಸಂಸ್ಕೃತಿಯ ಬಗ್ಗೆ ತೀರಾ ಕೆಳಮಟ್ಟದಲ್ಲಿ ಅಪಹಾಸ್ಯ ಮಾಡಿ ದೈವದೇವರ ಅವಹೇಳನ ಮಾಡಿದ್ದು, ಇದನ್ನು ನೋಡಿ ನನ್ನ ಮನಸ್ಸಿಗೆ ತೀವ್ರ ಘಾಸಿಯಾಗಿದ್ದು, ನನ್ನ ಧಾರ್ಮಿಕ ಭಾವನೆಗೆ ಧಕ್ಕೆಯಾಗಿರುತ್ತದೆ. ಆದರಿಂದ ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡಿದವರನ್ನು ವಿಚಾರಣೆಗೆ ಒಳಪಡಿಸಿ ಸೂಕ್ತ ಕಾನುನು ಕ್ರಮ ಕೈಗೊಳ್ಳುವಂತೆ ಅವರು ದೂರಿನಲ್ಲಿ ತಿಳಿಸಿದ್ದಾರೆ.ಪೊಲೀಸರು ದೂರು ಅರ್ಜಿಯನ್ನು ಸ್ವೀಕರಿಸಿ, ಈ ಕುರಿತು ದೂರು ಅರ್ಜಿಯಲ್ಲಿ ನಮೂದಿಸಿದ ವಿಚಾರದ ಬಗ್ಗೆ ಕೂಲಂಕೂಷವಾಗಿ ಪ್ರಾಥಮಿಕ ತನಿಖೆಯನ್ನು ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿಂಬರಹ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Related posts

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ನ 27: ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ ಅಕ್ಷರೋತ್ಸವ-ರಾಷ್ಟ್ರ ಮಟ್ಟದ ಕವಿಗೋಷ್ಠಿಗೆ ಕವನಗಳ ಆಹ್ವಾನ

Suddi Udaya

ಉಜಿರೆ ಪಂಚಗವ್ಯ ಚಿಕಿತ್ಸಾ ಶಿಬಿರ

Suddi Udaya

ವೇಣೂರಿನ ನಡ್ತಿಕಲ್ ನಿವಾಸಿ ಕೆ. ಬಿ. ಅಬ್ದುಲ್ ಖಾದರ್ ನಿಧನ

Suddi Udaya

ಸಾಮಾಜಿಕ ಕ್ಷೇತ್ರದ ಧುರೀಣ ಈಶ್ವರ ಭಟ್ ಕಾಂತಾಜೆ ನಿಧನ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

Suddi Udaya
error: Content is protected !!