ಶಿಶಿಲ: ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮೇ 14ರಂದು ಪ್ರಾರಂಭಗೊಂಡು ಮೇ 22 ರವರೆಗೆ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಜರಗಲಿದೆ.
ಮೇ 14ರಂದು ಗ್ರಾಮಸ್ಥರಿಂದ ಹಸಿರು ಹೊರೆಕಾಣಿಕೆ ನಡೆಯಿತು. ರಾತ್ರಿ ವಾಸ್ತು ಬಲಿ, ವಾಸ್ತು ರಕ್ಷೋಘ್ನ ಹೋಮ, ವಾಸ್ತು ಪೂಜೆ, ಕಿಲಮರಿತ್ತಾಯ ನೇಮ, ಧ್ವಜಾರೋಹಣ ನಡೆಯಲಿದೆ.
ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆ. ಸುನೀಲ್ ಗೋಖಲೆ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಸೂರಜ್ ನೆಲ್ಲಿತ್ತಾಯ, ಸದಸ್ಯರಾದ ಪಿ. ರಾಮ ಕಾರಂತ (ಅರ್ಚಕರು), ಕೆ. ಶ್ರೀಧರ ರಾವ್ ಕಳೆಂಜ, ಚೆನ್ನಪ್ಪ ನಲ್ಕೆ, ಸುಂದರ ಗೌಡ, ನಾರಾಯಣ ಸುವರ್ಣ, ಪ್ರೇಮ, ರಮೇಶ ಗೌಡ, ವಿಮಲ, ಅರ್ಚಕರು, ಅಭಿವೃದ್ಧಿ ಸಮಿತಿ ಸದಸ್ಯರು, ಸಿಬ್ಬಂದಿ ವರ್ಗ, ಪಾರಂಪರಿಕ ಸೇವಾಕರ್ತರು ಹಾಗೂ ಊರವರು ಉಪಸ್ಥಿತರಿದ್ದರು.













