August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ವತಿಯಿಂದ ನೂತನ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ಬೆಳ್ತಂಗಡಿ: ಖಿಳರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ಇದರ ವತಿಯಿಂದ ನೂತನ ಸ್ಮಾರ್ಟ್ ಕ್ಲಾಸ್ ಹಾಗೂ ಮದರಸ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮವು ಖಿಳರ್ ಜುಮ್ಮಾ ಮಸೀದಿ ಆಡಳಿತ ಸಮಿತಿ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅಧ್ಯಕ್ಷತೆಯಲ್ಲಿ ಮೇ 13ರಂದು ನಡೆಯಿತು.

ದಾರುಸ್ಸಲಾಂ ಇದರ ಚೇರ್‌ಮನ್ ಝೈನುಲ್ ಆಬಿದ್ ಜೆಫ್ರಿ ತಂಙಳ್ ನೂತನ ಮದರಸ ಕೊಠಡಿಯನ್ನು ಉದ್ಘಾಟಿಸಿದರು. ಖತೀಬ್ ಹನೀಫ್ ಫೈಝಿ ಅವರು ಸ್ಮಾರ್ಟ್ ಕ್ಲಾಸ್ ಅನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಖಾದರ್ ನಾವೂರು ಅವರು, ಇಂದಿನ ಮಕ್ಕಳು ದಾರಿ ತಪ್ಪಲು ಪೋಷಕರು ಮತ್ತು ಮಕ್ಕಳ ನಡುವಿನ ದಿನನಿತ್ಯದ ಸಂಬಂಧ ಹಾಗೂ ಸಂವಹನದ ಕೊರತೆಯೂ ಪ್ರಮುಖ ಕಾರಣವಾಗಿದೆ ಎಂದು ಅಭಿಪ್ರಾಯಪಟ್ಟರು. ಮಕ್ಕಳ ಶಿಕ್ಷಣ ಮತ್ತು ಸಂಸ್ಕಾರಕ್ಕೆ ಪೋಷಕರು ಹೆಚ್ಚಿನ ಗಮನ ನೀಡಬೇಕೆಂದು ಅವರು ಕರೆ ನೀಡಿದರು.

ಹಯಾತುಲ್ ಇಸ್ಲಾಂ ಮದರಸದ ಅಧ್ಯಕ್ಷ ಬಿ. ಶೇಕುಂಞ್ಞ, ನಝೀರ್ ಬಿ.ಎ., ಬಿ.ಎಚ್ ರಝಕ್, ಫೈಝಲ್ ಐ.ಜೆ., ಹನೀಫ್ ವರ್ಷಾ, ಮಹಮ್ಮದ್ ಕುದ್ರಡ್ಕ ಹಾಗೂ ಹೈದರ್ ಬಿ.ಕೆ. ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯ ಅಬೂಬಕ್ಕರ್ ಸಿದ್ದೀಕ್ ಅಝ್ಹರಿ ಸ್ವಾಗತಿಸಿದರು. ಉಪಾಧ್ಯಾಯ ಅಬ್ದುಲ್ ರಹಮಾನ್ ಮದನಿ ವಂದಿಸಿದರು. ಶರೀಫ್ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು.

Related posts

ಭಾರತದ ಉಪರಾಷ್ಟ್ರಪತಿ ಜಗದೀಪ್ ಧನ್ ಕರ್ ಅವರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳಿಗೆ ದೇವರ ದರ್ಶನಕ್ಕಾಗಿ ಆರಾಮದಾಯಕ ಸರತಿ ಸಾಲಿನ ನೂತನ ಸಂಕೀರ್ಣ “ಶ್ರೀ ಸಾನ್ನಿಧ್ಯ ಮತ್ತು ಜ್ಞಾನದೀಪ ಶಿಕ್ಷಣ ಕಾರ್ಯಕ್ರಮಗಳ ಉದ್ಘಾಟನೆ

Suddi Udaya

ಮುಂಡಾಜೆಯಲ್ಲಿ ಕೂಲಿ ಕೆಲಸಕ್ಕೆ ಹೋದ ಮಹಿಳೆ ಕುಸಿದು ಬಿದ್ದು ಮೃತ್ಯು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ ಆಚರಣೆ

Suddi Udaya

ಬೆಳಕು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮೂಡಾಯಿಬೆಟ್ಟು ಸರಕಾರಿ ಶಾಲೆಗೆ ಉಚಿತ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ವಿವೇಕ ಜಾಗ್ರತ ಬಳಗದ ವತಿಯಿಂದ ಆದ್ಯಾತ್ಮಿಕ ಚಿಂತನ ವಿಚಾರ ಕಾರ್ಯಕ್ರಮ

Suddi Udaya

ಎತ್ತರದ ಸ್ಥಾನಲ್ಲಿ ಕೂರುವಂತೆ ಮಾಡುತ್ತೇನೆ
ಶಾಸಕ ಹರೀಶ್ ಪೂಂಜರಿಗೆ ದೈವದ ಅಭಯ

Suddi Udaya
error: Content is protected !!