23.6 C
ಪುತ್ತೂರು, ಬೆಳ್ತಂಗಡಿ
June 30, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪುತ್ತೂರುಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ದೈವದೇವರ ಅವಹೇಳನ ಆರೋಪ: ಕಲಾವಿದರ ವಿರುದ್ಧ ದೂರು

ಬೆಳ್ತಂಗಡಿ: ಟಿವಿ ಚಾನೆಲ್‌ವೊಂದರ ಕಾರ್ಯಕ್ರಮದಲ್ಲಿ ತುಳುನಾಡಿನ ದೈವಗಳ ಬಗ್ಗೆ ಮತ್ತು ಹಿಂದೂ ಧರ್ಮದ ಸಂಸ್ಕೃತಿಯ ಬಗ್ಗೆ ತೀರಾ ಕೆಳಮಟ್ಟದಲ್ಲಿ ಅಪಹಾಸ್ಯ ಮಾಡಿ ದೈವದೇವರ ಅವಹೇಳನ ಮಾಡಿದ್ದಾರೆಂದು ಆರೋಪಿಸಿ ಕಲಾವಿದರ ವಿರುದ್ಧ ಪುತ್ತೂರು ನಗರ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ.

ಬೆಳಂದೂರು ಗ್ರಾಮದ ಧನ್ಯಕುಮಾರ್ ಟಿ ಅವರು ದೂರು ನೀಡಿದವರು. ನಾನು ನನ್ನ ಮೊಬೈಲ್ ವೀಕ್ಷಿಸುತ್ತಿರುವಾಗ ಒಂದು ವಿಡಿಯೋ ಕಂಡು ಬಂದಿದ್ದು, ಅದರಲ್ಲಿ ಖಾಸಗಿ ಟಿವಿ ಚಾನೆಲ್ ಕಾರ್ಯಕ್ರಮದಲ್ಲಿ ಕಾಳಮ್ಮನ ವಿಚಾರವಾಗಿ ಪ್ರಸ್ತಾಪಿಸಿ ತುಳುನಾಡ ದೈವಗಳ ಬಗ್ಗೆ ಮತ್ತು ಹಿಂದೂ ಧರ್ಮದ ಸಂಸ್ಕೃತಿಯ ಬಗ್ಗೆ ತೀರಾ ಕೆಳಮಟ್ಟದಲ್ಲಿ ಅಪಹಾಸ್ಯ ಮಾಡಿ ದೈವದೇವರ ಅವಹೇಳನ ಮಾಡಿದ್ದು, ಇದನ್ನು ನೋಡಿ ನನ್ನ ಮನಸ್ಸಿಗೆ ತೀವ್ರ ಘಾಸಿಯಾಗಿದ್ದು, ನನ್ನ ಧಾರ್ಮಿಕ ಭಾವನೆಗೆ ಧಕ್ಕೆಯಾಗಿರುತ್ತದೆ. ಆದರಿಂದ ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡಿದವರನ್ನು ವಿಚಾರಣೆಗೆ ಒಳಪಡಿಸಿ ಸೂಕ್ತ ಕಾನುನು ಕ್ರಮ ಕೈಗೊಳ್ಳುವಂತೆ ಅವರು ದೂರಿನಲ್ಲಿ ತಿಳಿಸಿದ್ದಾರೆ.ಪೊಲೀಸರು ದೂರು ಅರ್ಜಿಯನ್ನು ಸ್ವೀಕರಿಸಿ, ಈ ಕುರಿತು ದೂರು ಅರ್ಜಿಯಲ್ಲಿ ನಮೂದಿಸಿದ ವಿಚಾರದ ಬಗ್ಗೆ ಕೂಲಂಕೂಷವಾಗಿ ಪ್ರಾಥಮಿಕ ತನಿಖೆಯನ್ನು ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿಂಬರಹ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Related posts

ಶಿಬಾಜೆ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಶ್ರೀ ದೇವರಿಗೆ ಕಲಶಾಭಿಷೇಕ, ದರ್ಶನ ಬಲಿ, ಬಟ್ಟಲು ಕಾಣಿಕೆ

Suddi Udaya

ಬಳಂಜ: ಶ್ರೀಮಾತ ನಾಲ್ಕೂರು ಸಂಘಟನೆಯಿಂದ ವಾಲಿಬಾಲ್ ಪಂದ್ಯಾವಳಿ, ಸಾಧಕರಿಗೆ ಸನ್ಮಾನ

Suddi Udaya

ಉಜಿರೆ ರುಡ್‌ಸೆಟ್‌ನಲ್ಲಿ ಅಕೌಂಟಿಂಗ್ ಟ್ಯಾಲಿ ತರಬೇತಿ ಸಮಾರೋಪ

Suddi Udaya

ಎ.20: ಸಿಬಿಕೆ ಕಪ್-2025 ಹೊನಲು ಬೆಳಕಿನ ವಾಲಿಬಾಲ್ ಹಾಗೂ ಹಗ್ಗಜಗ್ಗಾಟ ಪಂದ್ಯಾಟ

Suddi Udaya

ಅನಾರು ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಕ್ಯಾಲೆಂಡರ್ ಬಿಡುಗಡೆ

Suddi Udaya

ಮಧುವನಗಿತ್ತಿಯಂತೆ ಅಲಂಕಾರಗೊಂಡ ತೆಂಕಕಾರಂದೂರು ಮತಗಟ್ಟೆ: ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾಯಿಸುತ್ತಿರುವ ಮತದಾರರು

Suddi Udaya
error: Content is protected !!