August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸರ್ಕಾರಿ ಇಲಾಖಾ ಸುದ್ದಿ

ಪ.ಜಾತಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೆಳ್ತಂಗಡಿ: 2026-27ನೇ ಸಾಲಿನ ಪ.ಜಾತಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಎಸ್.ಎಸ್.ಪಿ ವಿದ್ಯಾರ್ಥಿ ವೇತನಕ್ಕೆ ನೋಂದಣಿ ಮಾಡಿರಬೇಕು ಹಾಗೂ ಎಸ್.ಎಸ್.ಪಿ ನೋಂದಣಿ ಸಂಖ್ಯೆಯನ್ನು ನಮೂದಿಸಬೇಕು. ಆದುದರಿಂದ ವಿದ್ಯಾರ್ಥಿಗಳು ಇಲಾಖಾ ವೆಬ್‌ಸೈಟ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಿ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಪಡೆದುಕೊಳ್ಳುವುದು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು(ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಬೆಳ್ತಂಗಡಿ ತಾಲೂಕು ಇವರನ್ನು ಸಂಪರ್ಕಿಸುವುವಂತೆ (ದೂರವಾಣಿ ಸಂಖ್ಯೆ:08256-233528) ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಪ.ಜಾತಿ ಮೆಟ್ರಿಕ್ ಪೂರ್ವ ಮತ್ತು ನಂತರದ ವಿದ್ಯಾರ್ಥಿ ನಿಲಯಗಳಿಗೆ : TO APPLY ONLINE: https://swdhmis.karnataka.gov.in

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಪ.ಜಾತಿ ಮೆಟ್ರಿಕ್ ಪೂರ್ವ : 30.06.2026 ಪ.ಜಾತಿ ಮೆಟ್ರಿಕ್ ನಂತರದ : 31.07.2026, ಆದಾಯ ಮಿತಿ : ಪ.ಜಾತಿ/ಪ.ವರ್ಗ : ರೂ.2.50 ಲಕ್ಷ, ಸಮಾಜ ಕಲ್ಯಾಣ ಇಲಾಖೆ ಬೆಳ್ತಂಗಡಿ: 9480843113

ಅರ್ಜಿಸಲ್ಲಿಸಲು ಬೇಕಾಗುವ ದಾಖಲೆಗಳು: 1) ಆಧಾರ್ ಕಾರ್ಡ್ ಪ್ರತಿ. 2)ಜಾತಿ & ಆದಾಯ ಪ್ರಮಾಣ ಪತ್ರದ ಪ್ರತಿ. 3)ಹಿಂದಿನ ವರ್ಷದ ಅಂಕ ಪಟ್ಟಿ / ಎಸ್ ಎಸ್ ಎಲ್ ಸಿ ಅಂಕ ಪಟ್ಟಿ. 4)ಎಸ್.ಎಸ್.ಪಿ ನಂಬರ್ / ಸ್ಯಾಟ್ಸ್ ನಂಬರ್ 5)ಭಾವಚಿತ್ರ.

Related posts

ನಿಡ್ಲೆ: ಆಗ್ರಿಲೀಫ್ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿ. ಹೊಸ ಕಾರ್ಖಾನೆಯ ಉದ್ಘಾಟನೆ

Suddi Udaya

ನೇಹಾ ಹತ್ಯೆ ಖಂಡಿಸಿ ಪ್ರತಿಭಟಿಸಿದ್ದ ಉಜಿರೆಯ ಎಬಿವಿಪಿ ನಾಯಕರ ಮೇಲೆ ಎಫ್‌ಐಆರ್ ದಾಖಲು

Suddi Udaya

ಸಹನಾ ಶ್ರೀ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯಿಂದ ಶೀಘ್ರದಲ್ಲೇ ಸಹನಾ ಶ್ರೀ ಫೌಂಡೇಶನ್ ಪ್ರಾರಂಭ

Suddi Udaya

ಶಿಶಿಲ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ತನ್ನ ತಾಯಿಯನ್ನು ಎತ್ತಿಕೊಂಡು ಬಂದು ಮತಚಲಾಯಿಸಿದ ಮಗ: ಅನಾರೋಗ್ಯದ ನಡುವೆಯೂ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ ರೋಹಿಣಿ

Suddi Udaya

ಪೆರಾಡಿ ಸಂಘದಲ್ಲಿ ಪಶು ಆಹಾರ ಸರಬರಾಜು ಅಭಿಯಾನ

Suddi Udaya
error: Content is protected !!