ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನೂತನ “ಮುದ್ದಿಗೆ ಶಾಖೆ”ಯ ಉದ್ಘಾಟನಾ ಸಮಾರಂಭವು ಮೇ 14 ರಂದು ಹತ್ಯಡ್ಕ ಮುದ್ದಿಗೆ ದಿವಾಕರ ತಾಮ್ಹನ್ ಕಾರ್ರವರ ಕಟ್ಟಡದಲ್ಲಿ ನಡೆಯಿತು.

ಉದ್ಘಾಟನೆಯನ್ನು ವಿಧಾನಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ನೆರವೇರಿಸಿದರು.. ಅಧ್ಯಕ್ಷತೆಯನ್ನು ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ದ. ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ , ಅರಸಿನಮಕ್ಕಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಸುಧೀರ್ ಕುಮಾರ್ ಎಮ್.ಎಸ್., ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮಾಜಿ ಅಧ್ಯಕ್ಷರಾದ ಶ್ರೀಕರ ಭಿಡೆ, ಎಂ. ಕೇಶವ ರಾವ್ , ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮಾಜಿ ನಿರ್ದೇಶಕರು ಹೆಚ್. ಸುಂದರ ತುಂಬೆತಡ್ಕ, ಬಾಲಕೃಷ್ಣ ರೈ ಕೃಷಿಕರು, ಮಾಜಿ ತಾಲೂಕು ಪಂಚಾಯತ್ ಸದಸ್ಯ ವಾಮನ ತಾಮ್ಹನ್ಕಾರ್, ದಿವಾಕರ ತಾಮ್ಹನ್ಕಾರ್ ಕಟ್ಟಡ ಮಾಲಕರು, ಹತ್ಯಡ್ಕ ಸಹಕಾರಿ ಸಂಘದ ಉಪಾಧ್ಯಕ್ಷ ರಾಜು ಕೆ. , ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿ. ರವಿಚಂದ್ರ ರಾವ್, ಡಿಸಿಸಿ ಬ್ಯಾಂಕ್ ಪ್ರತಿನಿಧಿ ಸಿರಾಜುದ್ದೀನ್ ಹಾಗೂ ನಿರ್ದೇಶಕರು, ಸಿಬ್ಬಂದಿಗಳು ಭಾಗವಹಿಸಿದ್ದರು.

ನಿರ್ದೇಶಕ ರತೀಶ್ ಬಿ. ಸ್ವಾಗತಿಸಿದರು. ಉಪ ಕಾರ್ಯದರ್ಶಿ ಹರಿಣಾಕ್ಷಿ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕ ಬೇಬಿ ಕಿರಣ್ ವಂದಿಸಿದರು.













