ಬೆಳ್ತಂಗಡಿ: ಮೂಡುಬಿದಿರೆ ಮೂಡುಮಾರ್ನಾಡು ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಡಾ.ರಾಜಶ್ರೀ ಬಿ. ಅವರು ಮುಖ್ಯ ಶಿಕ್ಷಕಿ ಹುದ್ದೆಯಿಂದ ಬಡ್ತಿ ಹೊಂದಿ ಬೆಳ್ತಂಗಡಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶಿಕ್ಷಣ ಇಲಾಖೆ ಆದೇಶಿಸಿದೆ.
ಬೆಳ್ತಂಗಡಿಯಲ್ಲಿ ಈ ಹಿಂದೆ ಇದ್ದ ಬಿಇಒ ತಾರಕೇಸರಿ ಅವರ ಸೇವಾ ನಿವೃತ್ತಿಯಿಂದ ತೆರವುಗೊಂಡ ಸ್ಥಾನಕ್ಕೆ ಇವರನ್ನು ಸ್ಥಳ ನಿಯುಕ್ತಿಗೊಳಿಸಲಾಗಿದೆ. ಮೂಡಬಿದಿರೆಯಲ್ಲಿ ಕ್ಷೇತ್ರ ಸಂಪನ್ಮೂಲ ಅಧಿಕಾರಿಯಾಗಿ, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ, ಗ್ರಾಮ ಪಂಚಾಯತ್ ಆಡಳಿತಾಧಿಕಾರಿಯಾಗಿ, ಚುನಾವಣಾಧಿಕಾರಿಯಾಗಿ ಹಾಗೂ ಸಹಾಯ ಶಿಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿರುವ ಇವರು ಮೂಲತಃ ಮೂಡಬಿದಿರೆಯವರು. ಸಿದ್ದಕಟ್ಟೆ ಸ.ಪ.ಪೂ.ಕಾಲೇಜಿನಲ್ಲಿ, ಪೆರಿಂಜೆ ಎಸ್ಡಿಎಮ್, ಜೈನ್ ಹೈಸ್ಕೂಲ್ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದಾರೆ.













