26.3 C
ಪುತ್ತೂರು, ಬೆಳ್ತಂಗಡಿ
June 30, 2026
ಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ಸಾಂಪ್ರದಾಯಿಕ ದಿನಾಚರಣೆ

ಕಕ್ಯಪದವು : ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ನಡೆಸುತ್ತಿರುವ ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜಿನಲ್ಲಿ ಮೇ 14ರಂದು ವಿದ್ಯಾರ್ಥಿಗಳಿಗಾಗಿ ಸಾಂಪ್ರದಾಯಿಕ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮವು ದೀಪ ಬೆಳಗಿಸುವುದರ ಮೂಲಕ ಆರಂಭವಾಯಿತು. ವಿದ್ಯಾರ್ಥಿಗಳಲ್ಲಿ ಭಾರತೀಯ ಸಂಸ್ಕೃತಿ, ಸಂಪ್ರದಾಯ, ಐಕ್ಯತೆ ಹಾಗೂ ಸೃಜನಾತ್ಮಕತೆಯನ್ನು ಬೆಳೆಸುವ ಉದ್ದೇಶದಿಂದ ಅಂತಿಮ ವಿಭಾಗದ “ಪವರ್ ಸ್ಟ್ರೈಕರ್ಸ್” ವಿದ್ಯಾರ್ಥಿ ತಂಡವು ವಿವಿಧ ಚಟುವಟಿಕೆಗಳನ್ನು ನಡೆಸಿಕೊಟ್ಟು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಪು ಧರಿಸಿ ಭಾರತೀಯ ಪರಂಪರೆಯ ವೈಭವವನ್ನು ಅನಾವರಣಗೊಳಿಸಿದರು. ವಿವಿಧ ಮನರಂಜನಾ ಚಟುವಟಿಕೆಗಳು ಹಾಗೂ ಆಟಗಳು ವಿದ್ಯಾರ್ಥಿಗಳಲ್ಲಿ ಉತ್ಸಾಹ ಮತ್ತು ಸಂಭ್ರಮವನ್ನು ಹೆಚ್ಚಿಸಿತು.

ವಿದ್ಯಾರ್ಥಿಗಳು ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿ ದಿನಾಚರಣೆಯನ್ನು ನೆನಪಿನ ಕ್ಷಣವನ್ನಾಗಿ ಮಾಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ, ಸಂಯೋಜಕರಾದ ಯಶವಂತ್ ಜಿ ನಾಯಕ್ ವಿಭಾಗದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ದಿನಾಚರಣೆಯನ್ನು ಇನ್ನಷ್ಟು ವಿಶೇಷಗೊಳಿಸಿದರು.
ಪ್ರಥಮ ಬಿ.ಕಾಂ ವಿದ್ಯಾರ್ಥಿನಿ ರಫೀದಾ ಸ್ವಾಗತಿಸಿ,ಅಪೇಕ್ಷಾ ದ್ವಿತೀಯ ಬಿ.ಕಾಂ ವಂದಿಸಿದರು. ಸುಪ್ರಿಯಾ ತೃತೀಯ ಬಿಕಾಂ ಕಾರ್ಯಕ್ರಮ ನಿರೂಪಿಸಿದರು.

Related posts

ನಾಲ್ಕೂರು: ಹೃದಯಾಘಾತದಿಂದ ಜಗದೀಶ್ ಪೂಜಾರಿ ಕುದ್ರೋಟ್ಟು ನಿಧನ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಉಜಿರೆ: ಬೈಕ್ ಗೆ ಅನಿಲ ಸಾಗಿಸುತ್ತಿದ್ದ ಟ್ಯಾಂಕ‌ರ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ : ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

Suddi Udaya

ಫೆ.27: ವೇಣೂರು ಬಜಿರೆಯಲ್ಲಿ ‘ಹಿಂದೂ ರಾಷ್ಟ್ರ’ ಸ್ಥಾಪನೆಗಾಗಿ ಜಾಗೃತಿ ಸಭೆ

Suddi Udaya
error: Content is protected !!