August 14, 2026
ಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ಸಾಂಪ್ರದಾಯಿಕ ದಿನಾಚರಣೆ

ಕಕ್ಯಪದವು : ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ನಡೆಸುತ್ತಿರುವ ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜಿನಲ್ಲಿ ಮೇ 14ರಂದು ವಿದ್ಯಾರ್ಥಿಗಳಿಗಾಗಿ ಸಾಂಪ್ರದಾಯಿಕ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮವು ದೀಪ ಬೆಳಗಿಸುವುದರ ಮೂಲಕ ಆರಂಭವಾಯಿತು. ವಿದ್ಯಾರ್ಥಿಗಳಲ್ಲಿ ಭಾರತೀಯ ಸಂಸ್ಕೃತಿ, ಸಂಪ್ರದಾಯ, ಐಕ್ಯತೆ ಹಾಗೂ ಸೃಜನಾತ್ಮಕತೆಯನ್ನು ಬೆಳೆಸುವ ಉದ್ದೇಶದಿಂದ ಅಂತಿಮ ವಿಭಾಗದ “ಪವರ್ ಸ್ಟ್ರೈಕರ್ಸ್” ವಿದ್ಯಾರ್ಥಿ ತಂಡವು ವಿವಿಧ ಚಟುವಟಿಕೆಗಳನ್ನು ನಡೆಸಿಕೊಟ್ಟು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಪು ಧರಿಸಿ ಭಾರತೀಯ ಪರಂಪರೆಯ ವೈಭವವನ್ನು ಅನಾವರಣಗೊಳಿಸಿದರು. ವಿವಿಧ ಮನರಂಜನಾ ಚಟುವಟಿಕೆಗಳು ಹಾಗೂ ಆಟಗಳು ವಿದ್ಯಾರ್ಥಿಗಳಲ್ಲಿ ಉತ್ಸಾಹ ಮತ್ತು ಸಂಭ್ರಮವನ್ನು ಹೆಚ್ಚಿಸಿತು.

ವಿದ್ಯಾರ್ಥಿಗಳು ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿ ದಿನಾಚರಣೆಯನ್ನು ನೆನಪಿನ ಕ್ಷಣವನ್ನಾಗಿ ಮಾಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ, ಸಂಯೋಜಕರಾದ ಯಶವಂತ್ ಜಿ ನಾಯಕ್ ವಿಭಾಗದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ದಿನಾಚರಣೆಯನ್ನು ಇನ್ನಷ್ಟು ವಿಶೇಷಗೊಳಿಸಿದರು.
ಪ್ರಥಮ ಬಿ.ಕಾಂ ವಿದ್ಯಾರ್ಥಿನಿ ರಫೀದಾ ಸ್ವಾಗತಿಸಿ,ಅಪೇಕ್ಷಾ ದ್ವಿತೀಯ ಬಿ.ಕಾಂ ವಂದಿಸಿದರು. ಸುಪ್ರಿಯಾ ತೃತೀಯ ಬಿಕಾಂ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ಪರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಮತಯಾಚನೆ

Suddi Udaya

ಮುಂಡಾಜೆ ಗ್ರಾ. ಪಂ. ಮಾಜಿ ಸದಸ್ಯ, ಪ್ರಗತಿಪರ ಕೃಷಿಕ, ಯಕ್ಷಗಾನ, ತಾಳಮದ್ದಳೆ ಹವ್ಯಾಸಿ ಕಲಾವಿದ ವಾಮದೇವ ಆಠವಳೆ ನಿಧನ

Suddi Udaya

ಗ್ರಾಮಾಭಿವೃದ್ಧಿ ಯೋಜನೆಯ ಸಹಭಾಗಿತ್ವದೊಂದಿಗೆ ಭಾರತೀಯ ಜೀವ ವಿಮಾ ನಿಗಮದಿಂದ 333 ವಿಮಾ ಗ್ರಾಮಗಳ ಘೋಷಣೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸೈಬರ್ ಶೀಲ್ಡ್ ವಿದ್ಯಾರ್ಥಿ ಜಾಗೃತಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ – ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಇದರ ಆಶ್ರಯದಲ್ಲಿ : ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ ಉದ್ಘಾಟನೆ

Suddi Udaya

ಮಡಂತ್ಯರು ವಲಯದಲ್ಲಿ ನೂತನವಾಗಿ ಆಯ್ಕೆಯಾದ ಒಕ್ಕೂಟದ ಪದಾಧಿಕಾರಿಗಳಿಗೆ ತರಬೇತಿ ಕಾರ್ಯಗಾರ

Suddi Udaya
error: Content is protected !!