May 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ವತಿಯಿಂದ ನೂತನ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ಬೆಳ್ತಂಗಡಿ: ಖಿಳರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ಇದರ ವತಿಯಿಂದ ನೂತನ ಸ್ಮಾರ್ಟ್ ಕ್ಲಾಸ್ ಹಾಗೂ ಮದರಸ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮವು ಖಿಳರ್ ಜುಮ್ಮಾ ಮಸೀದಿ ಆಡಳಿತ ಸಮಿತಿ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅಧ್ಯಕ್ಷತೆಯಲ್ಲಿ ಮೇ 13ರಂದು ನಡೆಯಿತು.

ದಾರುಸ್ಸಲಾಂ ಇದರ ಚೇರ್‌ಮನ್ ಝೈನುಲ್ ಆಬಿದ್ ಜೆಫ್ರಿ ತಂಙಳ್ ನೂತನ ಮದರಸ ಕೊಠಡಿಯನ್ನು ಉದ್ಘಾಟಿಸಿದರು. ಖತೀಬ್ ಹನೀಫ್ ಫೈಝಿ ಅವರು ಸ್ಮಾರ್ಟ್ ಕ್ಲಾಸ್ ಅನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಖಾದರ್ ನಾವೂರು ಅವರು, ಇಂದಿನ ಮಕ್ಕಳು ದಾರಿ ತಪ್ಪಲು ಪೋಷಕರು ಮತ್ತು ಮಕ್ಕಳ ನಡುವಿನ ದಿನನಿತ್ಯದ ಸಂಬಂಧ ಹಾಗೂ ಸಂವಹನದ ಕೊರತೆಯೂ ಪ್ರಮುಖ ಕಾರಣವಾಗಿದೆ ಎಂದು ಅಭಿಪ್ರಾಯಪಟ್ಟರು. ಮಕ್ಕಳ ಶಿಕ್ಷಣ ಮತ್ತು ಸಂಸ್ಕಾರಕ್ಕೆ ಪೋಷಕರು ಹೆಚ್ಚಿನ ಗಮನ ನೀಡಬೇಕೆಂದು ಅವರು ಕರೆ ನೀಡಿದರು.

ಹಯಾತುಲ್ ಇಸ್ಲಾಂ ಮದರಸದ ಅಧ್ಯಕ್ಷ ಬಿ. ಶೇಕುಂಞ್ಞ, ನಝೀರ್ ಬಿ.ಎ., ಬಿ.ಎಚ್ ರಝಕ್, ಫೈಝಲ್ ಐ.ಜೆ., ಹನೀಫ್ ವರ್ಷಾ, ಮಹಮ್ಮದ್ ಕುದ್ರಡ್ಕ ಹಾಗೂ ಹೈದರ್ ಬಿ.ಕೆ. ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯ ಅಬೂಬಕ್ಕರ್ ಸಿದ್ದೀಕ್ ಅಝ್ಹರಿ ಸ್ವಾಗತಿಸಿದರು. ಉಪಾಧ್ಯಾಯ ಅಬ್ದುಲ್ ರಹಮಾನ್ ಮದನಿ ವಂದಿಸಿದರು. ಶರೀಫ್ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬೃಹತ್ ಘಂಟೆ ಉದ್ಘಾಟನೆ; ಶಿವನ ನಾಮಸ್ಮರಣೆಯಿಂದ ಸಂಕಷ್ಟಗಳ ನಿವಾರಣೆ: ಡಾ.ಹೆಗ್ಗಡೆ

Suddi Udaya

ಬೆಳ್ತಂಗಡಿ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ- ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ಸಂಭ್ರಮ 2025

Suddi Udaya

ರಾಷ್ಟ್ರೀಯ ಕರಾಟೆ ಪಂದ್ಯಾಟ: ಬೆಳ್ತಂಗಡಿಯ ಶೊರಿನ್ ರಿಯೊ ಕರಾಟೆ ಅಶೋಷಿಯೇಶನ್ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಬೆಳ್ತಂಗಡಿ: ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

Suddi Udaya
error: Content is protected !!