August 15, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪುತ್ತೂರುಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ದೈವದೇವರ ಅವಹೇಳನ ಆರೋಪ: ಕಲಾವಿದರ ವಿರುದ್ಧ ದೂರು

ಬೆಳ್ತಂಗಡಿ: ಟಿವಿ ಚಾನೆಲ್‌ವೊಂದರ ಕಾರ್ಯಕ್ರಮದಲ್ಲಿ ತುಳುನಾಡಿನ ದೈವಗಳ ಬಗ್ಗೆ ಮತ್ತು ಹಿಂದೂ ಧರ್ಮದ ಸಂಸ್ಕೃತಿಯ ಬಗ್ಗೆ ತೀರಾ ಕೆಳಮಟ್ಟದಲ್ಲಿ ಅಪಹಾಸ್ಯ ಮಾಡಿ ದೈವದೇವರ ಅವಹೇಳನ ಮಾಡಿದ್ದಾರೆಂದು ಆರೋಪಿಸಿ ಕಲಾವಿದರ ವಿರುದ್ಧ ಪುತ್ತೂರು ನಗರ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ.

ಬೆಳಂದೂರು ಗ್ರಾಮದ ಧನ್ಯಕುಮಾರ್ ಟಿ ಅವರು ದೂರು ನೀಡಿದವರು. ನಾನು ನನ್ನ ಮೊಬೈಲ್ ವೀಕ್ಷಿಸುತ್ತಿರುವಾಗ ಒಂದು ವಿಡಿಯೋ ಕಂಡು ಬಂದಿದ್ದು, ಅದರಲ್ಲಿ ಖಾಸಗಿ ಟಿವಿ ಚಾನೆಲ್ ಕಾರ್ಯಕ್ರಮದಲ್ಲಿ ಕಾಳಮ್ಮನ ವಿಚಾರವಾಗಿ ಪ್ರಸ್ತಾಪಿಸಿ ತುಳುನಾಡ ದೈವಗಳ ಬಗ್ಗೆ ಮತ್ತು ಹಿಂದೂ ಧರ್ಮದ ಸಂಸ್ಕೃತಿಯ ಬಗ್ಗೆ ತೀರಾ ಕೆಳಮಟ್ಟದಲ್ಲಿ ಅಪಹಾಸ್ಯ ಮಾಡಿ ದೈವದೇವರ ಅವಹೇಳನ ಮಾಡಿದ್ದು, ಇದನ್ನು ನೋಡಿ ನನ್ನ ಮನಸ್ಸಿಗೆ ತೀವ್ರ ಘಾಸಿಯಾಗಿದ್ದು, ನನ್ನ ಧಾರ್ಮಿಕ ಭಾವನೆಗೆ ಧಕ್ಕೆಯಾಗಿರುತ್ತದೆ. ಆದರಿಂದ ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡಿದವರನ್ನು ವಿಚಾರಣೆಗೆ ಒಳಪಡಿಸಿ ಸೂಕ್ತ ಕಾನುನು ಕ್ರಮ ಕೈಗೊಳ್ಳುವಂತೆ ಅವರು ದೂರಿನಲ್ಲಿ ತಿಳಿಸಿದ್ದಾರೆ.ಪೊಲೀಸರು ದೂರು ಅರ್ಜಿಯನ್ನು ಸ್ವೀಕರಿಸಿ, ಈ ಕುರಿತು ದೂರು ಅರ್ಜಿಯಲ್ಲಿ ನಮೂದಿಸಿದ ವಿಚಾರದ ಬಗ್ಗೆ ಕೂಲಂಕೂಷವಾಗಿ ಪ್ರಾಥಮಿಕ ತನಿಖೆಯನ್ನು ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿಂಬರಹ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Related posts

ಸುಬ್ರಹ್ಮಣ್ಯ ಸದಾನಂದ ಆಸ್ಪತ್ರೆ ಆವರಣದಲ್ಲಿ ವನ ಮಹೋತ್ಸವ

Suddi Udaya

ಕಕ್ಯಪದವು : ಎಲ್ ಸಿ ಆರ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಉಚಿತ ಐಬಿಪಿಎಸ್ ಪರೀಕ್ಷಾ ತರಬೇತಿಗೆ ಅಧೀಕೃತ ಚಾಲನೆ:

Suddi Udaya

ಜು.6 : ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿಗೆ ಬಂದಾರಿನ ಚಂದ್ರಹಾಸ ಕುಂಬಾರ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಂಡೋಸ್ಕೋಪಿಕ್ ಸ್ಪೈನಲ್ ಸರ್ಜರಿ

Suddi Udaya

ನೆರಿಯ : ಪೆಟ್ರೋನೆಟ್ ಪೈಪ್ ಲೈನ್ ನಿಂದ ಪೆಟ್ರೋಲ್ ಕಳ್ಳತನ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya
error: Content is protected !!