August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮದುವೆ ಸಮಾರಂಭದಲ್ಲಿ ಮೊಳಗಿದ ವಿಷ್ಣು ಸಹಸ್ರನಾಮ

ಬೆಳ್ತಂಗಡಿ: ಇಂದಿನ ದಿನಗಳಲ್ಲಿ ಮದುವೆ ಸಮಾರಂಭಗಳಲ್ಲಿ ಪಾಶ್ಚಾತ್ಯ, ಸಿನಿಮಾ ಸಂಸ್ಕೃತಿ, ನೃತ್ಯ ಸಹಿತ ನಾನಾ ಆಡಂಬರಗಳು ಸಾಮಾನ್ಯವಾಗಿದ್ದಾರೆ ಮೇ 14 ರಂದು ನಡೆದ ವಿವಾಹ ಸಮಾರಂಭ ಒಂದರಲ್ಲಿ ಸಾಮೂಹಿಕ ವಿಷ್ಣು ಸಹಸ್ರ ನಾಮವನ್ನು ಪಠಿಸಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಬೆಂಗಳೂರಿನ ಪ್ರಮೀಳಾ ಹಾಗೂ ಅಂತ್ರ ಹರೀಶ್ ರಾವ್ ದಂಪತಿ ಪುತ್ರ ಶ್ರೀಹರಿದಾಸ ಅವರ ವಿವಾಹ ಬೆಂಗಳೂರಿನ ರಶ್ಮಿ ಹಾಗೂ ಶ್ರೀಧರ ಬಿ.ಎಸ್. ಅವರ ಪುತ್ರಿ ಸ್ವಾತಿ ಮನಸ್ವಿನಿಯ ಜತೆ ಜರಗಿತು. ಮಧ್ಯಾಹ್ನ 12.05ರ ಸುಮೂಹೂರ್ತದಲ್ಲಿ ನಡೆದ ವಿವಾಹ ಸಮಾರಂಭದ ಸುಮಾರು 25 ನಿಮಿಷಗಳ ಕಾಲ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ಇಲ್ಲಿನ ಸದಸ್ಯರು ಹಾಗೂ ಭಕ್ತರು ನಾವೂರಿನ ವೈದ್ಯ ಡಾ. ಪ್ರದೀಪ್ ಆಟಿಕುಕ್ಕೆಯವರ ನೇತೃತ್ವದಲ್ಲಿ ಮದುವೆಯಲ್ಲಿ ಪಾಲ್ಗೊಂಡಿದ್ದ 400ಕ್ಕಿಂತಲೂ ಅಧಿಕ ಮಂದಿಯ ಜೊತೆ ವಿಷ್ಣು ಸಹಸ್ರನಾಮವನ್ನು ಏಕಕಾಲದಲ್ಲಿ ಪಠಿಸಿದರು.

ಇಂದಿನ ಆಧುನಿಕ ಯುಗದಲ್ಲಿ ಹಳೆ ಪದ್ಧತಿಗಳು ನೇಪಥ್ಯಕ್ಕೆ ಸರಿಯುತ್ತಿವೆ. ನಮ್ಮ ಪದ್ಧತಿಗಳ ಹಿಂದೆ ಅನೇಕ ವೈಜ್ಞಾನಿಕ ಹಿನ್ನೆಲೆಗಳು ಇದ್ದು, ಇವುಗಳ ಮಹತ್ವ ಅರಿತು ಇದನ್ನು ಮುಂದಿನ ಪೀಳಿಗೆಗೂ ತಲುಪಿಸುವಂತೆ ಮಾಡಬೇಕಾಗಿರುವುದು ಅಗತ್ಯವಾಗಿದೆ ಎಂದು ವರನ ಸೋದರ ಮಾವ ಚಾರ್ಮಾಡಿಯ ಪ್ರಕಾಶ ನಾರಾಯಣ ರಾವ್ ಹೇಳಿದರು.

Related posts

ಕಲ್ಮಂಜ : ವಿ.ಹಿಂ.ಪ. ಬಜರಂಗದಳ ಕಲ್ಮಂಜ ಘಟಕದ ಸಮಿತಿ ಪುನರ್ ರಚನೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಅ.31: ಅಳದಂಗಡಿಯಲ್ಲಿ ಶ್ರೀ ಮಹಾವೀರ ಮೆಡಿಕಲ್ಸ್ ಶುಭಾರಂಭ

Suddi Udaya

ಸುಲ್ಕೇರಿಮೊಗ್ರು ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಇಂದುಗ್ರಾಂ.ಪಂ. ಆಡಳಿತ ಮಂಡಳಿ ಭೇಟಿ

Suddi Udaya

ಕುಂಭಶ್ರೀ ಪಿಯು ಕಾಲೇಜಿನಲ್ಲಿ ಸಿಎ ಓರಿಯಂಟೇಶನ್ 2K25 ವಿಶೇಷ ಕಾರ್ಯಾಗಾರ

Suddi Udaya

ಬಂಗೇರ ಬ್ರಿಗೇಡ್ ಅಧ್ಯಕ್ಷೆ ಬಿನುತಾ ಬಂಗೇರ ನೇತೃತ್ವದಲ್ಲಿ ಕುವೆಟ್ಟು ಗ್ರಾ.ಪಂ ವ್ಯಾಪ್ತಿಯ ಸಮಿತಿ ರಚನೆ-ಅಧ್ಯಕ್ಷರಾಗಿ ಯಶೋಧರ ವರಕಬೆ, ಪ್ರ.ಕಾರ್ಯದರ್ಶಿಯಾಗಿ ದಿವ್ಯ ಪಾಯಿಸ್

Suddi Udaya
error: Content is protected !!