August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುದ್ದಿ ಉದಯ ಫಲಶ್ರುತಿ: ಸರ್ವೀಸ್ ರಸ್ತೆಯಲ್ಲಿ ನಿರ್ಮಿಸಿದ್ದ ದಾರಿದೀಪಗಳ ಪಿಲ್ಲರ್ ತೆರವು

ಬೆಳ್ತಂಗಡಿ: ತಾಲೂಕಿನಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಭಿವೃದ್ದಿ ಕಾಮಗಾರಿ ನಡೆಯುತ್ತಿದ್ದು ಸರ್ವಿಸ್ ರಸ್ತೆಗಳಲ್ಲಿ ದಾರಿದೀಪಗಳಿಗಾಗಿ ಪಿಲ್ಲರ್ ಗಳನ್ನೂ ಅಳವಡಿಸಿದ್ದ ಕುರಿತು ಸುದ್ದಿ ಉದಯ ಪತ್ರಿಕೆಯಲ್ಲಿ ವರದಿ ಪ್ರಕಟಿಸಿದ ಬೆನ್ನಲ್ಲೇ ಇದೀಗ ಪಿಲ್ಲರ್ ಗಳ ತೆರವು ಕಾರ್ಯ ನಡೆಯುತ್ತಿದೆ.

ರಾಷ್ಟ್ರೀಯ ಹೆದ್ದಾರಿಯ ಅಭಿವೃದ್ದಿ ಕಾಮಗಾರಿ ನಡೆಯುತ್ತಿದ್ದ ಸಂದರ್ಭ ಉಜಿರೆಯಿಂದ ಚಾರ್ಮಾಡಿ ರಸ್ತೆಯ ಅನುಗ್ರಹ ಶಾಲೆಯ ತನಕ ಸರ್ವಿಸ್ ರಸ್ತೆ ಆಗಬೇಕು ಎಂಬ ವಿಚಾರಗಳಲ್ಲಿ ಹಲವು ಚರ್ಚೆಗಳು ನಡೆದು ಕೊನೆಗೂ ಉಜಿರೆ-ಚಾರ್ಮಾಡಿ ರಸ್ತೆಯ ಎಡ ಭಾಗದಲ್ಲಿ ಸರ್ವೀಸ್ ರಸ್ತೆಯ ನಿರ್ಮಾಣದ ದೃಷ್ಟಿಯಿಂದ ಅಭಿವೃದ್ಧಿ ಕಾಮಗಾರಿ ಪ್ರಾರಂಭಗೊಂಡಿದೆ.

ಈ ಸರ್ವಿಸ್ ರಸ್ತೆ ಸ್ಥಳೀಯ ನಾಗರಿಕರಿಗೆ ಹಾಗೂ ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ, ಪ್ರಾರ್ಥನಾ ಮಂದಿರಕ್ಕೆ ಬರುವಂತವರಿಗೆ ಅನುಕೂಲವಾದರೂ ಸಹ ಈ ರಸ್ತೆಯಲ್ಲಿ ದಾರಿದೀಪಗಳ ನಿರ್ಮಾಣಕ್ಕೆ ಎಂದು ಅಳವಡಿಸಿದ ಪಿಲ್ಲರ್‌ಗಳು ಅಪಘಾತಕ್ಕೆ ಎಡೆಮಾಡಿಕೊಡಬಹುದು ಎಂಬ ಮುನ್ಸೂಚನೆಯನ್ನು ಸುದ್ದಿ ಉದಯ ವರದಿಯಲ್ಲಿ ಪ್ರಕಟಿಸಿತ್ತು. ಇದೀಗ ವರದಿಯ ಫಲಶ್ರುತಿಯಾಗಿ ಪಿಲ್ಲರ್ ಗಳ ತೆರವು ಕಾರ್ಯ ನಡೆಯುತ್ತಿದ್ದು, ಈ ರಸ್ತೆಯಲ್ಲಿ ಮುಂಬರುವ ದಿನಗಳಲ್ಲಿ ಸಂಭವಿಸಬಹುದಾಗಿದ್ದ ಅನಾಹುತಗಳನ್ನು ತಪ್ಪಿಸಿದಂತಾಗಿದೆ.

Related posts

ಬಳಂಜ: ಬಂಟರ ತಾಲೂಕು ಮಟ್ಟದ ವಾಲಿಬಾಲ್ ಹಾಗೂ ದಿ. ಅನಿಲ್ ನಾಯ್ಗ ಟ್ರೋಫಿಯ ಕ್ರೀಡೋತ್ಸವ: ಸನ್ಮಾನ

Suddi Udaya

ಭಾರೀ ಮಳೆಯ ಹಿನ್ನೆಲೆ: ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ

Suddi Udaya

ಅಂತರ್ ರಾಜ್ಯ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಎಸ್.ಡಿ.ಎಂ ಕಾಲೇಜಿಗೆ ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ : ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಟಿ. ಜಯಂತ್ ಹಾಗೂ ಎಂ.ಡಿ ಸಮೀರ್ ವಿರುದ್ಧ ತನಿಖೆ ಕೋರಿ ಕೋರ್ಟ್ ಗೆ ಅರ್ಜಿ

Suddi Udaya

ಬೆಳ್ತಂಗಡಿಯಲ್ಲಿ ಸಮಾನ ಮನಸ್ಕರೊಂದಿಗೆ ಸಂವಾದ

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಒಕ್ಕಲಿಗ ಗೌಡ ಸಮುದಾಯದವರು ಜಾತಿ ಕಾಲಂನಲ್ಲಿ ಒಕ್ಕಲಿಗ , ಉಪಜಾತಿ ಕಾಲಂನಲ್ಲಿ ಗೌಡ ಎಂದು ನಮೂದಿಸುವಂತೆ ತಾಲೂಕು ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು ಹೇಳಿಕೆ

Suddi Udaya
error: Content is protected !!