ಉಜಿರೆ: ಇಂದಿನ ಮತ್ತು ಮುಂದಿನ ದಿನಗಳಲ್ಲಿ ಕೌಶಲ್ಯಕ್ಕೆ ಹೆಚ್ಚಿನ ಮಹತ್ವ ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ನಡೆದ ಟಿ.ವಿ ಟೆಕ್ನಿಷಿಯನ್ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವು ಉತ್ಸಾಹಭರಿತ ವಾತಾವರಣದಲ್ಲಿ ನೆರವೇರಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶ್ರೀಮತಿ ಕರ್ಪಗಮ್, ಭಾರತೀಯ ರಿಸರ್ವ್ ಬ್ಯಾಂಕ್, ಮುಂಬೈಯ ವಿಭಾಗೀಯ ಮಹಾ ಪ್ರಬಂಧಕರಾದ ಭಾಗವಹಿಸಿ ಮಾತನಾಡಿದರು. ಇಂದಿನ ಹಾಗೂ ಮುಂದಿನ ದಿನಗಳಲ್ಲಿ ಕೌಶಲ್ಯಕ್ಕೆ ಹೆಚ್ಚಿನ ಮಹತ್ವವಿದ್ದು, ತಾಂತ್ರಿಕ ಜ್ಞಾನ ಹೊಂದಿದ ಯುವಕರಿಗೆ ಉತ್ತಮ ಅವಕಾಶಗಳು ಲಭ್ಯವಿವೆ ಎಂದು ಹೇಳಿದರು. ತರಬೇತಿಗಾರರು ತಮ್ಮ ಕೌಶಲ್ಯವನ್ನು ನಿರಂತರವಾಗಿ ನವೀಕರಿಸಿಕೊಂಡು ಪ್ರಾಮಾಣಿಕತೆ ಮತ್ತು ಶಿಸ್ತಿನೊಂದಿಗೆ ಕಾರ್ಯನಿರ್ವಹಿಸಿದರೆ ಜೀವನದಲ್ಲಿ ಯಶಸ್ಸು ಸಾಧಿಸಬಹುದು ಎಂದು ತಿಳಿಸಿದರು. ಬಳಿಕ ತರಬೇತಿಗಾರರಿಗೆ ಪ್ರಮಾಣಪತ್ರಗಳನ್ನು ವಿತರಿಸಿ ಶುಭ ಹಾರೈಸಿದರು.
RUDSETI ಸಂಸ್ಥೆಯ ನಿರ್ದೇಶಕ ಅಜಯ್ ಅತಿಥಿಗಳನ್ನು ಸ್ವಾಗತಿಸಿ, ತರಬೇತಿ ಕಾರ್ಯಕ್ರಮದ ಸಂಕ್ಷಿಪ್ತ ಅವಲೋಕನವನ್ನು ನೀಡಿದರು ಹಾಗೂ ತರಬೇತಿಯ ಮಹತ್ವವನ್ನು ವಿವರಿಸಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕಿ ಶ್ರೀಮತಿ ಮಧುರಿ ಉಪಸ್ಥಿತರಿದ್ದರು.
ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಪಿ.ವಿ. ಕಾರ್ಯಕ್ರಮ ನಿರ್ವಹಿಸಿದರು. ಹಿರಿಯ ಉಪನ್ಯಾಸಕ ಕೆ. ಕರುಣಾಕರ ಜೈನ್ ಧನ್ಯವಾದವಿತ್ತರು.
ಕಾರ್ಯಕ್ರಮದಲ್ಲಿ ಪ್ರಭಾ ಹಾಗೂ ಪೂಜಾ ಪ್ರಾರ್ಥನೆ ನೆರವೇರಿಸಿದರು. ತರಬೇತಿಗಾರರಾದ ಬಸಯ್ಯ ಮತ್ತು ಸಾಂಡ್ರ ಡಿ’ಸೋಜಾ ತಮ್ಮ ತರಬೇತಿ ಅನುಭವಗಳನ್ನು ಹಂಚಿಕೊಂಡು ಸಂಸ್ಥೆಯತ್ತ ಕೃತಜ್ಞತೆ ಸಲ್ಲಿಸಿದರು.













