23.4 C
ಪುತ್ತೂರು, ಬೆಳ್ತಂಗಡಿ
June 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುದ್ದಿ ಉದಯ ಫಲಶ್ರುತಿ: ಸರ್ವೀಸ್ ರಸ್ತೆಯಲ್ಲಿ ನಿರ್ಮಿಸಿದ್ದ ದಾರಿದೀಪಗಳ ಪಿಲ್ಲರ್ ತೆರವು

ಬೆಳ್ತಂಗಡಿ: ತಾಲೂಕಿನಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಭಿವೃದ್ದಿ ಕಾಮಗಾರಿ ನಡೆಯುತ್ತಿದ್ದು ಸರ್ವಿಸ್ ರಸ್ತೆಗಳಲ್ಲಿ ದಾರಿದೀಪಗಳಿಗಾಗಿ ಪಿಲ್ಲರ್ ಗಳನ್ನೂ ಅಳವಡಿಸಿದ್ದ ಕುರಿತು ಸುದ್ದಿ ಉದಯ ಪತ್ರಿಕೆಯಲ್ಲಿ ವರದಿ ಪ್ರಕಟಿಸಿದ ಬೆನ್ನಲ್ಲೇ ಇದೀಗ ಪಿಲ್ಲರ್ ಗಳ ತೆರವು ಕಾರ್ಯ ನಡೆಯುತ್ತಿದೆ.

ರಾಷ್ಟ್ರೀಯ ಹೆದ್ದಾರಿಯ ಅಭಿವೃದ್ದಿ ಕಾಮಗಾರಿ ನಡೆಯುತ್ತಿದ್ದ ಸಂದರ್ಭ ಉಜಿರೆಯಿಂದ ಚಾರ್ಮಾಡಿ ರಸ್ತೆಯ ಅನುಗ್ರಹ ಶಾಲೆಯ ತನಕ ಸರ್ವಿಸ್ ರಸ್ತೆ ಆಗಬೇಕು ಎಂಬ ವಿಚಾರಗಳಲ್ಲಿ ಹಲವು ಚರ್ಚೆಗಳು ನಡೆದು ಕೊನೆಗೂ ಉಜಿರೆ-ಚಾರ್ಮಾಡಿ ರಸ್ತೆಯ ಎಡ ಭಾಗದಲ್ಲಿ ಸರ್ವೀಸ್ ರಸ್ತೆಯ ನಿರ್ಮಾಣದ ದೃಷ್ಟಿಯಿಂದ ಅಭಿವೃದ್ಧಿ ಕಾಮಗಾರಿ ಪ್ರಾರಂಭಗೊಂಡಿದೆ.

ಈ ಸರ್ವಿಸ್ ರಸ್ತೆ ಸ್ಥಳೀಯ ನಾಗರಿಕರಿಗೆ ಹಾಗೂ ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ, ಪ್ರಾರ್ಥನಾ ಮಂದಿರಕ್ಕೆ ಬರುವಂತವರಿಗೆ ಅನುಕೂಲವಾದರೂ ಸಹ ಈ ರಸ್ತೆಯಲ್ಲಿ ದಾರಿದೀಪಗಳ ನಿರ್ಮಾಣಕ್ಕೆ ಎಂದು ಅಳವಡಿಸಿದ ಪಿಲ್ಲರ್‌ಗಳು ಅಪಘಾತಕ್ಕೆ ಎಡೆಮಾಡಿಕೊಡಬಹುದು ಎಂಬ ಮುನ್ಸೂಚನೆಯನ್ನು ಸುದ್ದಿ ಉದಯ ವರದಿಯಲ್ಲಿ ಪ್ರಕಟಿಸಿತ್ತು. ಇದೀಗ ವರದಿಯ ಫಲಶ್ರುತಿಯಾಗಿ ಪಿಲ್ಲರ್ ಗಳ ತೆರವು ಕಾರ್ಯ ನಡೆಯುತ್ತಿದ್ದು, ಈ ರಸ್ತೆಯಲ್ಲಿ ಮುಂಬರುವ ದಿನಗಳಲ್ಲಿ ಸಂಭವಿಸಬಹುದಾಗಿದ್ದ ಅನಾಹುತಗಳನ್ನು ತಪ್ಪಿಸಿದಂತಾಗಿದೆ.

Related posts

ಜ್ಞಾನ ಪೀಠ ಪುರಸ್ಕೃತರು: ಉಪನ್ಯಾಸ ಮಾಲೆ ಕಾರ್ಯಕ್ರಮದ ಉದ್ಘಾಟನೆ

Suddi Udaya

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಮೊಗ್ರು: ಶ್ರೀ ದುರ್ಗಾನುಗ್ರಹ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ ಮಂಜೂರಾದ ರೂ 2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಕರಂಬಾರು: ಮಾನಸಿಕ ಖಿನ್ನತೆಗೆ ಒಳಗಾಗಿ ನಾಗೇಶ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕನ್ಯಾಡಿ ಶ್ರೀಗಳಿಂದ ರವೀಂದ್ರ ಪೂಜಾರಿ ಆರ್ಲರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya
error: Content is protected !!