August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುದ್ದಿ ಉದಯ ಫಲಶ್ರುತಿ: ಸರ್ವೀಸ್ ರಸ್ತೆಯಲ್ಲಿ ನಿರ್ಮಿಸಿದ್ದ ದಾರಿದೀಪಗಳ ಪಿಲ್ಲರ್ ತೆರವು

ಬೆಳ್ತಂಗಡಿ: ತಾಲೂಕಿನಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಭಿವೃದ್ದಿ ಕಾಮಗಾರಿ ನಡೆಯುತ್ತಿದ್ದು ಸರ್ವಿಸ್ ರಸ್ತೆಗಳಲ್ಲಿ ದಾರಿದೀಪಗಳಿಗಾಗಿ ಪಿಲ್ಲರ್ ಗಳನ್ನೂ ಅಳವಡಿಸಿದ್ದ ಕುರಿತು ಸುದ್ದಿ ಉದಯ ಪತ್ರಿಕೆಯಲ್ಲಿ ವರದಿ ಪ್ರಕಟಿಸಿದ ಬೆನ್ನಲ್ಲೇ ಇದೀಗ ಪಿಲ್ಲರ್ ಗಳ ತೆರವು ಕಾರ್ಯ ನಡೆಯುತ್ತಿದೆ.

ರಾಷ್ಟ್ರೀಯ ಹೆದ್ದಾರಿಯ ಅಭಿವೃದ್ದಿ ಕಾಮಗಾರಿ ನಡೆಯುತ್ತಿದ್ದ ಸಂದರ್ಭ ಉಜಿರೆಯಿಂದ ಚಾರ್ಮಾಡಿ ರಸ್ತೆಯ ಅನುಗ್ರಹ ಶಾಲೆಯ ತನಕ ಸರ್ವಿಸ್ ರಸ್ತೆ ಆಗಬೇಕು ಎಂಬ ವಿಚಾರಗಳಲ್ಲಿ ಹಲವು ಚರ್ಚೆಗಳು ನಡೆದು ಕೊನೆಗೂ ಉಜಿರೆ-ಚಾರ್ಮಾಡಿ ರಸ್ತೆಯ ಎಡ ಭಾಗದಲ್ಲಿ ಸರ್ವೀಸ್ ರಸ್ತೆಯ ನಿರ್ಮಾಣದ ದೃಷ್ಟಿಯಿಂದ ಅಭಿವೃದ್ಧಿ ಕಾಮಗಾರಿ ಪ್ರಾರಂಭಗೊಂಡಿದೆ.

ಈ ಸರ್ವಿಸ್ ರಸ್ತೆ ಸ್ಥಳೀಯ ನಾಗರಿಕರಿಗೆ ಹಾಗೂ ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ, ಪ್ರಾರ್ಥನಾ ಮಂದಿರಕ್ಕೆ ಬರುವಂತವರಿಗೆ ಅನುಕೂಲವಾದರೂ ಸಹ ಈ ರಸ್ತೆಯಲ್ಲಿ ದಾರಿದೀಪಗಳ ನಿರ್ಮಾಣಕ್ಕೆ ಎಂದು ಅಳವಡಿಸಿದ ಪಿಲ್ಲರ್‌ಗಳು ಅಪಘಾತಕ್ಕೆ ಎಡೆಮಾಡಿಕೊಡಬಹುದು ಎಂಬ ಮುನ್ಸೂಚನೆಯನ್ನು ಸುದ್ದಿ ಉದಯ ವರದಿಯಲ್ಲಿ ಪ್ರಕಟಿಸಿತ್ತು. ಇದೀಗ ವರದಿಯ ಫಲಶ್ರುತಿಯಾಗಿ ಪಿಲ್ಲರ್ ಗಳ ತೆರವು ಕಾರ್ಯ ನಡೆಯುತ್ತಿದ್ದು, ಈ ರಸ್ತೆಯಲ್ಲಿ ಮುಂಬರುವ ದಿನಗಳಲ್ಲಿ ಸಂಭವಿಸಬಹುದಾಗಿದ್ದ ಅನಾಹುತಗಳನ್ನು ತಪ್ಪಿಸಿದಂತಾಗಿದೆ.

Related posts

ಬೆಳ್ತಂಗಡಿ ತಾಲೂಕಿನ ಮುಖ್ಯ ಪುಸ್ತಕ ಬರಹಗಾರರಿಗೆ ಪುಸ್ತಕ ನಿರ್ವಹಣೆ ಮತ್ತು ಜವಾಬ್ದಾರಿಗಳ ಕುರಿತು ತರಬೇತಿ

Suddi Udaya

ನಾವರ ಪ್ರಗತಿ ಬಂಧು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕೆನರಾ ಬ್ಯಾಂಕಿನ ಡಿಜಿಎಮ್ , ಮಂಗಳೂರು ರೀಜಿನಲ್ ಮೆನೇಜರ್ ಹಾಗೂ ರುಡ್ ಸೆಟ್ ಅಧಿಕಾರಿಗಳು ಭೇಟಿ: ದೇವರಿಗೆ ರಂಗಪೂಜೆ ಸೇವೆ

Suddi Udaya

ಜು.9: ಸೋಮಂತಡ್ಕ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 22 ನೇ ಶಾಖೆ ಉದ್ಘಾಟನೆ

Suddi Udaya

ಸ್ವಾತಂತ್ರ್ಯ ಸಿಕ್ಕಿ 75 ವರ್ಷ ಕಳೆದರೂ ಹಲವಾರು ಕುಟುಂಬಗಳಿಗೆ ಇನ್ನೂ ವಿದ್ಯುತ್ ಭಾಗ್ಯವಿಲ್ಲ: ವಿದ್ಯುತ್ ವ್ಯವಸ್ಥೆ ಕಲ್ಪಿಸಲು ಅಳದಂಗಡಿ ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!