May 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

“ಬಂಟರ ಕ್ರೀಡಾಕೂಟ-2026” ಕ್ರಿಕೆಟ್ ಹಾಗೂ ತ್ರೋಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ

ಮೂಡುಪಡುಕೋಡಿ: ಕ್ರೀಡೆಯು ಕೇವಲ ದೈಹಿಕ ವ್ಯಾಯಾಮವಲ್ಲ, ಅದು ಮನುಷ್ಯರಲ್ಲಿ ಒಗ್ಗಟ್ಟು, ನಾಯಕತ್ವ ಗುಣ ಮತ್ತು ಏಕಾಗ್ರತೆಯನ್ನು ಮೂಡಿಸುವ ಶಕ್ತಿಯನ್ನು ಹೊಂದಿದೆ ಎಂದು ಬಂಟ್ವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷರಾದ ಶ್ರೀ ಜಗನ್ನಾಥ ಚೌಟ ಅವರು ಅಭಿಪ್ರಾಯಪಟ್ಟರು.

ಯುವ ಬಂಟರ ಸಂಘ ಮತ್ತು ಕಾವಳಕಟ್ಟೆ ವಲಯದ ಆಶ್ರಯದಲ್ಲಿ, ಇರ್ವತ್ತೂರು, ಮೂಡುಪಡುಕೋಡಿ, ಪಿಲಾತಬೆಟ್ಟು, ಕಾವಳಪಡೂರು, ಕಾವಳಮೂಡೂರು ಹಾಗೂ ಕಾಡಬೆಟ್ಟು ಗ್ರಾಮದ ತಂಡಗಳಿಗಾಗಿ ಆಯೋಜಿಸಲಾಗಿದ್ದ “ಬಂಟರ ಕ್ರೀಡಾಕೂಟ-2026” ಕ್ರಿಕೆಟ್ ಹಾಗೂ ತ್ರೋಬಾಲ್ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಇಂದು ಮೈದಾನದಲ್ಲಿ ಕಂಡುಬರುತ್ತಿರುವ ಶಿಸ್ತು ಮತ್ತು ಒಗ್ಗಟ್ಟು ನಮ್ಮ ಬಂಟರ ಸಂಘಟನೆ ನಮಗೆ ಕಲಿಸಿದ ಪಾಠ. ಹಿರಿಯರು ಹಾಕಿಕೊಟ್ಟ ಭದ್ರ ಬುನಾದಿಯ ಮೇಲೆ ನಾವೆಲ್ಲ ಇಂದು ಒಂದೇ ವೇದಿಕೆಯಲ್ಲಿ ನಿಂತಿದ್ದೇವೆ. ಯುವ ಪೀಳಿಗೆಯು ಹಿರಿಯರ ಮಾರ್ಗದರ್ಶನದಲ್ಲಿ ಸಾಗಿದಾಗ ಸಂಘಟನೆ ಮತ್ತಷ್ಟು ಬಲಿಷ್ಠವಾಗುತ್ತದೆ. ಕ್ರೀಡೆಯಲ್ಲಿ ಆರೋಗ್ಯಕರ ಪೈಪೋಟಿ ಇರಬೇಕೇ ಹೊರತು ದ್ವೇಷವಿರಬಾರದು. ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯ,” ಎಂದು ಹಾರೈಸಿದರು.

ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಕಾವಳಪಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಶ್ರೀ ಪ್ರಮೋದ್ ಕುಮಾರ್ ರೈ ಅವರು ಮಾತನಾಡಿ, “ದೀಪವು ಅಜ್ಞಾನದ ಕತ್ತಲೆಯನ್ನು ಓಡಿಸಿ ಜ್ಞಾನದ ಬೆಳಕು ನೀಡುವಂತೆ, ಈ ಕ್ರೀಡಾಕೂಟವು ಜನಾಂಗದ ಬಾಂಧವರ ನಡುವೆ ಸ್ನೇಹದ ಬೆಳಕನ್ನು ಹರಿಸಲಿ,” ಎಂದರು.
ಒಟ್ಟು 6 ತಂಡಗಳು ಪಾಲ್ಗೊಂಡಿದ್ದ ಈ ಕ್ರೀಡಾಕೂಟದಲ್ಲಿ ಅತ್ಯಂತ ರೋಚಕ ಹೋರಾಟ ಕಂಡುಬಂದಿತು. ಕ್ರಿಕೆಟ್ ಪಂದ್ಯಾಟದಲ್ಲಿ ಪ್ರಥಮ ಕಾಡಬೆಟ್ಟು ಗ್ರಾಮ ಹಾಗೂ ದ್ವಿತೀಯ ಸ್ಥಾನ ಮೂಡುಪಡುಕೋಡಿ ಗ್ರಾಮ ವಿಜೇತ ತಂಡಗಳು ಹಂಚಿಕೊಂಡವು. ಹಾಗೆಯೇ ಮಹಿಳೆಯರ ತ್ರೋಬಾಲ್ ಪಂದ್ಯಾಟದಲ್ಲಿ ಇರ್ವತ್ತೂರು ಗ್ರಾಮ ಪ್ರಥಮ, ಮೂಡುಪಡುಕೋಡಿ ದ್ವಿತೀಯ ಹಾಗೂ ಕಾಡಬೆಟ್ಟು ತೃತೀಯ ಸ್ಥಾನ ಪಡೆದ ತಂಡಗಳಿಗೆ ಜಗನ್ನಾಥ ಚೌಟ ಅವರು ಟ್ರೋಫಿ ಹಾಗೂ ನಗದು ಬಹುಮಾನ ನೀಡಿ ಗೌರವಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾವಳಕಟ್ಟೆ ವಲಯ ಬಂಟರ ಸಂಘದ ಅಧ್ಯಕ್ಷ ಮೋಹನ್ ಶೆಟ್ಟಿ ನರ್ವಲ್ದಡ್ಡ ವಹಿಸಿದ್ದರು. ವೇದಿಕೆಯಲ್ಲಿ ಬಂಟರ ಸಂಘ ಕಾವಳಕಟ್ಟೆ ಇದರ ಗೌರವಾಧ್ಯಕ್ಷ ಶ್ರೀ ಜಗನ್ನಾಥ ಶೆಟ್ಟಿ ಕೆದ್ದಳಿಕೆ, ಉಪಾಧ್ಯಕ್ಷ ಪ್ರದೀಪ್ ಕುಮಾರ್ ಬೀಯಂತಬೆಟ್ಟು, ಚಂದ್ರಶೇಖರ ಶೆಟ್ಟಿ ಪುಳಿಮಜಲು, ಕಾರ್ಯದರ್ಶಿ ಉದಯ್ ಕುಮಾರ್ ಶೆಟ್ಟಿ ಹಾಗೂ ಯುವ ವಿಭಾಗದ ಅಧ್ಯಕ್ಷ ಕಿಶೋರ್ ರೈ ಕಾಡಬೆಟ್ಟು ಕಾರ್ಯದರ್ಶಿ ವಿವೇಕ್ ಶೆಟ್ಟಿ ಅಂಕದಲ, ಕ್ರೀಡಾ ಕಾರ್ಯದರ್ಶಿ ರೋಹಿತ್ ಶೆಟ್ಟಿ ಉಪಸ್ಥಿತರಿದ್ದರು.

ನಿಧಿಶಾ ಶೆಟ್ಟಿ ಸ್ವಾಗತಿಸಿ, ಉದಯ ಕುಮಾರ್ ಶೆಟ್ಟಿ ಧನ್ಯವಾದ ನೀಡಿದರು, ಪುನೀತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಗಣೇಶ್ ಶೆಟ್ಟಿ , ಶ್ರೇಯಸ್ ಅಂಕದಲ,ಸಹನಾ ಎಂ ಶೆಟ್ಟಿ ನರ್ವಲ್ದಡ್ಡ, ಅದ್ವಿತಾ ಶೆಟ್ಟಿ ಮರಮ್ಮ ,ಸಮೀಕ್ಷಾ ಶೆಟ್ಟಿ, ಅಕ್ಷತಾ ರೈ , ಸಹನಾ ಶೆಟ್ಟಿ ಪಣೆಕಲ ಸಹಕರಿಸಿದರು.

Related posts

ಉಜಿರೆ ಎಸ್.ಡಿ.ಎಂ ಸಿ.ಬಿ.ಎಸ್.ಇ ಶಾಲೆಗೆ ಧರ್ಮಸ್ಥಳದ ಹೇಮಾವತಿ ವಿ ಹೆಗ್ಗಡೆ ಭೇಟಿ

Suddi Udaya

ಬೆಳ್ತಂಗಡಿ ಸರಕಾರಿ ಐ.ಟಿ.ಐ 2024ನೇ ಸಾಲಿನ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ಶಿರ್ಲಾಲು ಗರಡಿ – ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ

Suddi Udaya

ಬಜಿರೆ ಗ್ರಾಮದ ಪೆರ್ಮನು ಬೆಳ್ಳಿಬೆಟ್ಟು ಎಂಬಲ್ಲಿ ನಡೆದ ದುರ್ಘಟನೆ ವಿದ್ಯುತ್ ತಂತಿ ಸ್ಪರ್ಶಿಸಿ ವೀರಪ್ಪ ಎಂಬವರು ಮೃತ್ಯು

Suddi Udaya

ಅಳದಂಗಡಿ ಪ್ರಾದ್ವಿ ಚಾಲೆಂಜರ್ಸ್ ಅರ್ವ ಮತ್ತು ನಮ್ಮ ಜವನೆರ್ ಹವ್ಯಾಸಿ ಕ್ರೀಡಾ ತಂಡದಿಂದ ಕೆಸರ್ದ ಗೊಬ್ಬು : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್‌ ರಕ್ತದಾನ ಶಿಬಿರ

Suddi Udaya
error: Content is protected !!