May 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮದುವೆ ಸಮಾರಂಭದಲ್ಲಿ ಮೊಳಗಿದ ವಿಷ್ಣು ಸಹಸ್ರನಾಮ

ಬೆಳ್ತಂಗಡಿ: ಇಂದಿನ ದಿನಗಳಲ್ಲಿ ಮದುವೆ ಸಮಾರಂಭಗಳಲ್ಲಿ ಪಾಶ್ಚಾತ್ಯ, ಸಿನಿಮಾ ಸಂಸ್ಕೃತಿ, ನೃತ್ಯ ಸಹಿತ ನಾನಾ ಆಡಂಬರಗಳು ಸಾಮಾನ್ಯವಾಗಿದ್ದಾರೆ ಮೇ 14 ರಂದು ನಡೆದ ವಿವಾಹ ಸಮಾರಂಭ ಒಂದರಲ್ಲಿ ಸಾಮೂಹಿಕ ವಿಷ್ಣು ಸಹಸ್ರ ನಾಮವನ್ನು ಪಠಿಸಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಬೆಂಗಳೂರಿನ ಪ್ರಮೀಳಾ ಹಾಗೂ ಅಂತ್ರ ಹರೀಶ್ ರಾವ್ ದಂಪತಿ ಪುತ್ರ ಶ್ರೀಹರಿದಾಸ ಅವರ ವಿವಾಹ ಬೆಂಗಳೂರಿನ ರಶ್ಮಿ ಹಾಗೂ ಶ್ರೀಧರ ಬಿ.ಎಸ್. ಅವರ ಪುತ್ರಿ ಸ್ವಾತಿ ಮನಸ್ವಿನಿಯ ಜತೆ ಜರಗಿತು. ಮಧ್ಯಾಹ್ನ 12.05ರ ಸುಮೂಹೂರ್ತದಲ್ಲಿ ನಡೆದ ವಿವಾಹ ಸಮಾರಂಭದ ಸುಮಾರು 25 ನಿಮಿಷಗಳ ಕಾಲ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ಇಲ್ಲಿನ ಸದಸ್ಯರು ಹಾಗೂ ಭಕ್ತರು ನಾವೂರಿನ ವೈದ್ಯ ಡಾ. ಪ್ರದೀಪ್ ಆಟಿಕುಕ್ಕೆಯವರ ನೇತೃತ್ವದಲ್ಲಿ ಮದುವೆಯಲ್ಲಿ ಪಾಲ್ಗೊಂಡಿದ್ದ 400ಕ್ಕಿಂತಲೂ ಅಧಿಕ ಮಂದಿಯ ಜೊತೆ ವಿಷ್ಣು ಸಹಸ್ರನಾಮವನ್ನು ಏಕಕಾಲದಲ್ಲಿ ಪಠಿಸಿದರು.

ಇಂದಿನ ಆಧುನಿಕ ಯುಗದಲ್ಲಿ ಹಳೆ ಪದ್ಧತಿಗಳು ನೇಪಥ್ಯಕ್ಕೆ ಸರಿಯುತ್ತಿವೆ. ನಮ್ಮ ಪದ್ಧತಿಗಳ ಹಿಂದೆ ಅನೇಕ ವೈಜ್ಞಾನಿಕ ಹಿನ್ನೆಲೆಗಳು ಇದ್ದು, ಇವುಗಳ ಮಹತ್ವ ಅರಿತು ಇದನ್ನು ಮುಂದಿನ ಪೀಳಿಗೆಗೂ ತಲುಪಿಸುವಂತೆ ಮಾಡಬೇಕಾಗಿರುವುದು ಅಗತ್ಯವಾಗಿದೆ ಎಂದು ವರನ ಸೋದರ ಮಾವ ಚಾರ್ಮಾಡಿಯ ಪ್ರಕಾಶ ನಾರಾಯಣ ರಾವ್ ಹೇಳಿದರು.

Related posts

ಮಚ್ಚಿನ: ಕುತ್ತಿನ ಶಾಲೆಯಲ್ಲಿ ಬೀಳ್ಕೊಡುಗೆ ಮತ್ತು ಮಕ್ಕಳ ಹಬ್ಬ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನಗಳ ‘ಪ್ರತಿಭಾ ಪ್ರದರ್ಶನಕ್ಕೆ ಚಾಲನೆ

Suddi Udaya

ಪಿಲ್ಯ: ನಿನ್ನಿಕಲ್ಲಿನಲ್ಲಿ ಅಡಿಕೆ ತೋಟದಲ್ಲಿ ಅಕ್ರಮ ಮಾರಾಟಕ್ಕೆ ದಾಸ್ತಾನು ಇರಿಸಲಾಗಿದ್ದಮದ್ಯ ಪತ್ತೆ, ಅಬಕಾರಿ ಇಲಾಖೆಯಿಂದ ದಾಳಿ, ಸೊತ್ತುಗಳು ವಶಕ್ಕೆ

Suddi Udaya

ಬದ್ಯಾರಿನಲ್ಲಿ ನೂತನವಾಗಿ ನಿರ್ಮಿಸಿದ ದಿ| ಬಿ. ಲಕ್ಕಣ್ಣ ಶೆಟ್ಟಿ ಸ್ಮಾರಕ ಸಾರ್ವಜನಿಕ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ

Suddi Udaya

ಮಡಂತ್ಯಾರು ಸಿಎ ಬ್ಯಾಂಕ್‌ ವತಿಯಿಂದ ಮಡಂತ್ಯಾರು ಗ್ರಾ.ಪಂ. ಹಾಗೂ ಮಾಲಾಡಿ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಅಭಿನಂದನಾ ಸಮಾರಂಭ

Suddi Udaya

ತೋಟತ್ತಾಡಿ ಪರಿಸರದಲ್ಲಿ ಚಿರತೆ ಓಡಾಟ, ಭಯಭೀತರಾದ ಗ್ರಾಮಸ್ಥರು: ಚಿರತೆ ಸೆರೆಹಿಡಿಯಲು ಸ್ಥಳೀಯರ ಸಹಕಾರದಲ್ಲಿ ಇಲಾಖೆ ವತಿಯಿಂದ ಬೋನು ಅಳವಡಿಕೆ

Suddi Udaya
error: Content is protected !!