August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮದುವೆ ಸಮಾರಂಭದಲ್ಲಿ ಮೊಳಗಿದ ವಿಷ್ಣು ಸಹಸ್ರನಾಮ

ಬೆಳ್ತಂಗಡಿ: ಇಂದಿನ ದಿನಗಳಲ್ಲಿ ಮದುವೆ ಸಮಾರಂಭಗಳಲ್ಲಿ ಪಾಶ್ಚಾತ್ಯ, ಸಿನಿಮಾ ಸಂಸ್ಕೃತಿ, ನೃತ್ಯ ಸಹಿತ ನಾನಾ ಆಡಂಬರಗಳು ಸಾಮಾನ್ಯವಾಗಿದ್ದಾರೆ ಮೇ 14 ರಂದು ನಡೆದ ವಿವಾಹ ಸಮಾರಂಭ ಒಂದರಲ್ಲಿ ಸಾಮೂಹಿಕ ವಿಷ್ಣು ಸಹಸ್ರ ನಾಮವನ್ನು ಪಠಿಸಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಬೆಂಗಳೂರಿನ ಪ್ರಮೀಳಾ ಹಾಗೂ ಅಂತ್ರ ಹರೀಶ್ ರಾವ್ ದಂಪತಿ ಪುತ್ರ ಶ್ರೀಹರಿದಾಸ ಅವರ ವಿವಾಹ ಬೆಂಗಳೂರಿನ ರಶ್ಮಿ ಹಾಗೂ ಶ್ರೀಧರ ಬಿ.ಎಸ್. ಅವರ ಪುತ್ರಿ ಸ್ವಾತಿ ಮನಸ್ವಿನಿಯ ಜತೆ ಜರಗಿತು. ಮಧ್ಯಾಹ್ನ 12.05ರ ಸುಮೂಹೂರ್ತದಲ್ಲಿ ನಡೆದ ವಿವಾಹ ಸಮಾರಂಭದ ಸುಮಾರು 25 ನಿಮಿಷಗಳ ಕಾಲ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ಇಲ್ಲಿನ ಸದಸ್ಯರು ಹಾಗೂ ಭಕ್ತರು ನಾವೂರಿನ ವೈದ್ಯ ಡಾ. ಪ್ರದೀಪ್ ಆಟಿಕುಕ್ಕೆಯವರ ನೇತೃತ್ವದಲ್ಲಿ ಮದುವೆಯಲ್ಲಿ ಪಾಲ್ಗೊಂಡಿದ್ದ 400ಕ್ಕಿಂತಲೂ ಅಧಿಕ ಮಂದಿಯ ಜೊತೆ ವಿಷ್ಣು ಸಹಸ್ರನಾಮವನ್ನು ಏಕಕಾಲದಲ್ಲಿ ಪಠಿಸಿದರು.

ಇಂದಿನ ಆಧುನಿಕ ಯುಗದಲ್ಲಿ ಹಳೆ ಪದ್ಧತಿಗಳು ನೇಪಥ್ಯಕ್ಕೆ ಸರಿಯುತ್ತಿವೆ. ನಮ್ಮ ಪದ್ಧತಿಗಳ ಹಿಂದೆ ಅನೇಕ ವೈಜ್ಞಾನಿಕ ಹಿನ್ನೆಲೆಗಳು ಇದ್ದು, ಇವುಗಳ ಮಹತ್ವ ಅರಿತು ಇದನ್ನು ಮುಂದಿನ ಪೀಳಿಗೆಗೂ ತಲುಪಿಸುವಂತೆ ಮಾಡಬೇಕಾಗಿರುವುದು ಅಗತ್ಯವಾಗಿದೆ ಎಂದು ವರನ ಸೋದರ ಮಾವ ಚಾರ್ಮಾಡಿಯ ಪ್ರಕಾಶ ನಾರಾಯಣ ರಾವ್ ಹೇಳಿದರು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರ ಹಾಗೂ ಚಿಂತನಾ ದಿನಾಚರಣೆ

Suddi Udaya

ಕುತ್ಯಾರು ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ: ಬೆಳ್ತಂಗಡಿ ಪೊಲೀಸ್ ರಿಂದ ತನಿಖೆ

Suddi Udaya

ನಾವೂರು ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಕೊಯ್ಯೂರು: ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಕೆಎಸ್ಆರ್ ಟಿಸಿ ಮಜ್ದೂರು ಸಂಘದ ವಾರ್ಷಿಕ ಸಭೆ

Suddi Udaya

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲಾ ಕಾಮಗಾರಿಗಳ ಹಸ್ತಾಂತರ, ನಿವೃತ್ತ ಶಿಕ್ಷಕರ ಸನ್ಮಾನ ಮತ್ತು ಶಾಲಾ ಪ್ರತಿಭಾ ಪುರಸ್ಕಾರ

Suddi Udaya
error: Content is protected !!