23.4 C
ಪುತ್ತೂರು, ಬೆಳ್ತಂಗಡಿ
June 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮದುವೆ ಸಮಾರಂಭದಲ್ಲಿ ಮೊಳಗಿದ ವಿಷ್ಣು ಸಹಸ್ರನಾಮ

ಬೆಳ್ತಂಗಡಿ: ಇಂದಿನ ದಿನಗಳಲ್ಲಿ ಮದುವೆ ಸಮಾರಂಭಗಳಲ್ಲಿ ಪಾಶ್ಚಾತ್ಯ, ಸಿನಿಮಾ ಸಂಸ್ಕೃತಿ, ನೃತ್ಯ ಸಹಿತ ನಾನಾ ಆಡಂಬರಗಳು ಸಾಮಾನ್ಯವಾಗಿದ್ದಾರೆ ಮೇ 14 ರಂದು ನಡೆದ ವಿವಾಹ ಸಮಾರಂಭ ಒಂದರಲ್ಲಿ ಸಾಮೂಹಿಕ ವಿಷ್ಣು ಸಹಸ್ರ ನಾಮವನ್ನು ಪಠಿಸಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಬೆಂಗಳೂರಿನ ಪ್ರಮೀಳಾ ಹಾಗೂ ಅಂತ್ರ ಹರೀಶ್ ರಾವ್ ದಂಪತಿ ಪುತ್ರ ಶ್ರೀಹರಿದಾಸ ಅವರ ವಿವಾಹ ಬೆಂಗಳೂರಿನ ರಶ್ಮಿ ಹಾಗೂ ಶ್ರೀಧರ ಬಿ.ಎಸ್. ಅವರ ಪುತ್ರಿ ಸ್ವಾತಿ ಮನಸ್ವಿನಿಯ ಜತೆ ಜರಗಿತು. ಮಧ್ಯಾಹ್ನ 12.05ರ ಸುಮೂಹೂರ್ತದಲ್ಲಿ ನಡೆದ ವಿವಾಹ ಸಮಾರಂಭದ ಸುಮಾರು 25 ನಿಮಿಷಗಳ ಕಾಲ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ಇಲ್ಲಿನ ಸದಸ್ಯರು ಹಾಗೂ ಭಕ್ತರು ನಾವೂರಿನ ವೈದ್ಯ ಡಾ. ಪ್ರದೀಪ್ ಆಟಿಕುಕ್ಕೆಯವರ ನೇತೃತ್ವದಲ್ಲಿ ಮದುವೆಯಲ್ಲಿ ಪಾಲ್ಗೊಂಡಿದ್ದ 400ಕ್ಕಿಂತಲೂ ಅಧಿಕ ಮಂದಿಯ ಜೊತೆ ವಿಷ್ಣು ಸಹಸ್ರನಾಮವನ್ನು ಏಕಕಾಲದಲ್ಲಿ ಪಠಿಸಿದರು.

ಇಂದಿನ ಆಧುನಿಕ ಯುಗದಲ್ಲಿ ಹಳೆ ಪದ್ಧತಿಗಳು ನೇಪಥ್ಯಕ್ಕೆ ಸರಿಯುತ್ತಿವೆ. ನಮ್ಮ ಪದ್ಧತಿಗಳ ಹಿಂದೆ ಅನೇಕ ವೈಜ್ಞಾನಿಕ ಹಿನ್ನೆಲೆಗಳು ಇದ್ದು, ಇವುಗಳ ಮಹತ್ವ ಅರಿತು ಇದನ್ನು ಮುಂದಿನ ಪೀಳಿಗೆಗೂ ತಲುಪಿಸುವಂತೆ ಮಾಡಬೇಕಾಗಿರುವುದು ಅಗತ್ಯವಾಗಿದೆ ಎಂದು ವರನ ಸೋದರ ಮಾವ ಚಾರ್ಮಾಡಿಯ ಪ್ರಕಾಶ ನಾರಾಯಣ ರಾವ್ ಹೇಳಿದರು.

Related posts

ಗ್ರಾ.ಪಂ. ನೌಕರರ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಬಗ್ಗೆ ಮಾರ್ಚ್ 1ರಿಂದ ರಾಜ್ಯಾದ್ಯಂತ ಪ್ರತಿಭಟನೆ: ಸಾರ್ವಜನಿಕ ಮಹತ್ವದ ವಿಚಾರದ ಬಗ್ಗೆ ವಿಧಾನಸಭೆ ಸಭಾಪತಿಯವರಿಗೆ ಪತ್ರ

Suddi Udaya

ಶಿರ್ಲಾಲು: ಭಾಸ್ಕರ್ ಸಾಲಿಯನ್ ರವರ ಮನೆ ಹಿಂದೆ ಗುಡ್ಡ ಕುಸಿತ

Suddi Udaya

ತೆಲಿಕೆದ ಬೊಳ್ಳಿ ಅರವಿಂದ್ ಬೋಳಾರ್ ರವರಿಗೆ ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ಸನ್ಮಾನ

Suddi Udaya

ಬೆಳ್ತಂಗಡಿ ಮಹಿಳಾ ಜೆಸಿ ವಿಭಾಗದಿಂದ ಧ್ವನಿವರ್ಧಕ ಕೊಡುಗೆ

Suddi Udaya

ಆರಂಬೋಡಿ: ರಸ್ತೆಯ ಬದಿ ನಿಲ್ಲಿಸಿದ ಬೈಕ್ ಕಳವು

Suddi Udaya

“ಆಪರೇಶನ್ ಸಿಂಧೂರ” ಸರಿಯಾದ ಉತ್ತರವಾಗಿದೆ: ಸುಮಂತ್ ಕುಮಾರ್ ಜೈನ್

Suddi Udaya
error: Content is protected !!