26.3 C
ಪುತ್ತೂರು, ಬೆಳ್ತಂಗಡಿ
June 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುದ್ದಿ ಉದಯ ಫಲಶ್ರುತಿ: ಸರ್ವೀಸ್ ರಸ್ತೆಯಲ್ಲಿ ನಿರ್ಮಿಸಿದ್ದ ದಾರಿದೀಪಗಳ ಪಿಲ್ಲರ್ ತೆರವು

ಬೆಳ್ತಂಗಡಿ: ತಾಲೂಕಿನಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಭಿವೃದ್ದಿ ಕಾಮಗಾರಿ ನಡೆಯುತ್ತಿದ್ದು ಸರ್ವಿಸ್ ರಸ್ತೆಗಳಲ್ಲಿ ದಾರಿದೀಪಗಳಿಗಾಗಿ ಪಿಲ್ಲರ್ ಗಳನ್ನೂ ಅಳವಡಿಸಿದ್ದ ಕುರಿತು ಸುದ್ದಿ ಉದಯ ಪತ್ರಿಕೆಯಲ್ಲಿ ವರದಿ ಪ್ರಕಟಿಸಿದ ಬೆನ್ನಲ್ಲೇ ಇದೀಗ ಪಿಲ್ಲರ್ ಗಳ ತೆರವು ಕಾರ್ಯ ನಡೆಯುತ್ತಿದೆ.

ರಾಷ್ಟ್ರೀಯ ಹೆದ್ದಾರಿಯ ಅಭಿವೃದ್ದಿ ಕಾಮಗಾರಿ ನಡೆಯುತ್ತಿದ್ದ ಸಂದರ್ಭ ಉಜಿರೆಯಿಂದ ಚಾರ್ಮಾಡಿ ರಸ್ತೆಯ ಅನುಗ್ರಹ ಶಾಲೆಯ ತನಕ ಸರ್ವಿಸ್ ರಸ್ತೆ ಆಗಬೇಕು ಎಂಬ ವಿಚಾರಗಳಲ್ಲಿ ಹಲವು ಚರ್ಚೆಗಳು ನಡೆದು ಕೊನೆಗೂ ಉಜಿರೆ-ಚಾರ್ಮಾಡಿ ರಸ್ತೆಯ ಎಡ ಭಾಗದಲ್ಲಿ ಸರ್ವೀಸ್ ರಸ್ತೆಯ ನಿರ್ಮಾಣದ ದೃಷ್ಟಿಯಿಂದ ಅಭಿವೃದ್ಧಿ ಕಾಮಗಾರಿ ಪ್ರಾರಂಭಗೊಂಡಿದೆ.

ಈ ಸರ್ವಿಸ್ ರಸ್ತೆ ಸ್ಥಳೀಯ ನಾಗರಿಕರಿಗೆ ಹಾಗೂ ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ, ಪ್ರಾರ್ಥನಾ ಮಂದಿರಕ್ಕೆ ಬರುವಂತವರಿಗೆ ಅನುಕೂಲವಾದರೂ ಸಹ ಈ ರಸ್ತೆಯಲ್ಲಿ ದಾರಿದೀಪಗಳ ನಿರ್ಮಾಣಕ್ಕೆ ಎಂದು ಅಳವಡಿಸಿದ ಪಿಲ್ಲರ್‌ಗಳು ಅಪಘಾತಕ್ಕೆ ಎಡೆಮಾಡಿಕೊಡಬಹುದು ಎಂಬ ಮುನ್ಸೂಚನೆಯನ್ನು ಸುದ್ದಿ ಉದಯ ವರದಿಯಲ್ಲಿ ಪ್ರಕಟಿಸಿತ್ತು. ಇದೀಗ ವರದಿಯ ಫಲಶ್ರುತಿಯಾಗಿ ಪಿಲ್ಲರ್ ಗಳ ತೆರವು ಕಾರ್ಯ ನಡೆಯುತ್ತಿದ್ದು, ಈ ರಸ್ತೆಯಲ್ಲಿ ಮುಂಬರುವ ದಿನಗಳಲ್ಲಿ ಸಂಭವಿಸಬಹುದಾಗಿದ್ದ ಅನಾಹುತಗಳನ್ನು ತಪ್ಪಿಸಿದಂತಾಗಿದೆ.

Related posts

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ರಾಜೇಶ್ವರಿ ರವರನ್ನು ಸನ್ಮಾನಿಸಿದ ಶಾಸಕ ಹರೀಶ್ ಪೂಂಜ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ನೀಲೇಶ್ವರದ ತಂತ್ರಿವರ್ಯರಾದ ಉಚ್ಚಿಲ ಪದ್ಮನಾಭ ತಂತ್ರಿಗಳ ಭೇಟಿ

Suddi Udaya

ಧರ್ಮಸ್ಥಳ ಮಂಜುಷಾ ವಸ್ತು ಸಂಗ್ರಹಾಲಯದಲ್ಲಿ ಶತಮಾನದ ಅದ್ಭುತ ದಂತದ ಶಿಲ್ಪಕಲೆ ಮತ್ತು ಕಲಾಕೃತಿಗಳ ಗ್ಯಾಲರಿಯ ಉದ್ಘಾಟನೆ

Suddi Udaya

ಉಡುಪಿ ಹಾಗೂ ದ.ಕ. ಜಿಲ್ಲಾ ಭಾರತೀಯ ಅರಸೇನಾಪಡೆಗಳ ಮಾಜಿ ಯೋಧರ ಸಂಘದ ವಾರ್ಷಿಕ ಸಭೆ, ಪ್ರತಿಭಾ ಪುರಸ್ಕಾರ, ಮಾಜಿ ಯೋಧರ ಕುಟುಂಬ ಸಮ್ಮಿಲನ ಹಾಗೂ ಮನೋರಂಜನಾ ಕಾರ್ಯಕ್ರಮ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ವೃತ್ತಿಯೊಂದಿಗಿನ ಜೀವನದ ಸುಮತೋಲನ” ಕಾರ್ಯಾಗಾರ

Suddi Udaya

ದ್ವಿಚಕ್ರ ವಾಹನದಿಂದ ರಸ್ತೆಗೆ ಎಸೆಯಲ್ಪಟ್ಟು ಮಹಿಳೆಗೆ ಗಂಭೀರ ಗಾಯ: ಮಂಗಳೂರು ಆಸ್ಪತ್ರೆಗೆ ದಾಖಲು

Suddi Udaya
error: Content is protected !!