August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುದ್ದಿ ಉದಯ ಫಲಶ್ರುತಿ: ಸರ್ವೀಸ್ ರಸ್ತೆಯಲ್ಲಿ ನಿರ್ಮಿಸಿದ್ದ ದಾರಿದೀಪಗಳ ಪಿಲ್ಲರ್ ತೆರವು

ಬೆಳ್ತಂಗಡಿ: ತಾಲೂಕಿನಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಭಿವೃದ್ದಿ ಕಾಮಗಾರಿ ನಡೆಯುತ್ತಿದ್ದು ಸರ್ವಿಸ್ ರಸ್ತೆಗಳಲ್ಲಿ ದಾರಿದೀಪಗಳಿಗಾಗಿ ಪಿಲ್ಲರ್ ಗಳನ್ನೂ ಅಳವಡಿಸಿದ್ದ ಕುರಿತು ಸುದ್ದಿ ಉದಯ ಪತ್ರಿಕೆಯಲ್ಲಿ ವರದಿ ಪ್ರಕಟಿಸಿದ ಬೆನ್ನಲ್ಲೇ ಇದೀಗ ಪಿಲ್ಲರ್ ಗಳ ತೆರವು ಕಾರ್ಯ ನಡೆಯುತ್ತಿದೆ.

ರಾಷ್ಟ್ರೀಯ ಹೆದ್ದಾರಿಯ ಅಭಿವೃದ್ದಿ ಕಾಮಗಾರಿ ನಡೆಯುತ್ತಿದ್ದ ಸಂದರ್ಭ ಉಜಿರೆಯಿಂದ ಚಾರ್ಮಾಡಿ ರಸ್ತೆಯ ಅನುಗ್ರಹ ಶಾಲೆಯ ತನಕ ಸರ್ವಿಸ್ ರಸ್ತೆ ಆಗಬೇಕು ಎಂಬ ವಿಚಾರಗಳಲ್ಲಿ ಹಲವು ಚರ್ಚೆಗಳು ನಡೆದು ಕೊನೆಗೂ ಉಜಿರೆ-ಚಾರ್ಮಾಡಿ ರಸ್ತೆಯ ಎಡ ಭಾಗದಲ್ಲಿ ಸರ್ವೀಸ್ ರಸ್ತೆಯ ನಿರ್ಮಾಣದ ದೃಷ್ಟಿಯಿಂದ ಅಭಿವೃದ್ಧಿ ಕಾಮಗಾರಿ ಪ್ರಾರಂಭಗೊಂಡಿದೆ.

ಈ ಸರ್ವಿಸ್ ರಸ್ತೆ ಸ್ಥಳೀಯ ನಾಗರಿಕರಿಗೆ ಹಾಗೂ ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ, ಪ್ರಾರ್ಥನಾ ಮಂದಿರಕ್ಕೆ ಬರುವಂತವರಿಗೆ ಅನುಕೂಲವಾದರೂ ಸಹ ಈ ರಸ್ತೆಯಲ್ಲಿ ದಾರಿದೀಪಗಳ ನಿರ್ಮಾಣಕ್ಕೆ ಎಂದು ಅಳವಡಿಸಿದ ಪಿಲ್ಲರ್‌ಗಳು ಅಪಘಾತಕ್ಕೆ ಎಡೆಮಾಡಿಕೊಡಬಹುದು ಎಂಬ ಮುನ್ಸೂಚನೆಯನ್ನು ಸುದ್ದಿ ಉದಯ ವರದಿಯಲ್ಲಿ ಪ್ರಕಟಿಸಿತ್ತು. ಇದೀಗ ವರದಿಯ ಫಲಶ್ರುತಿಯಾಗಿ ಪಿಲ್ಲರ್ ಗಳ ತೆರವು ಕಾರ್ಯ ನಡೆಯುತ್ತಿದ್ದು, ಈ ರಸ್ತೆಯಲ್ಲಿ ಮುಂಬರುವ ದಿನಗಳಲ್ಲಿ ಸಂಭವಿಸಬಹುದಾಗಿದ್ದ ಅನಾಹುತಗಳನ್ನು ತಪ್ಪಿಸಿದಂತಾಗಿದೆ.

Related posts

ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಅಳದಂಗಡಿಯಲ್ಲಿ ಲೋಕೋಪಯೋಗಿ ಇಲಾಖೆಯವರು ಅಳವಡಿಸಿದ ನಾಮಫಲಕದಲ್ಲಿ ಗೊಂದಲ

Suddi Udaya

ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅದ್ಭುತ ಸಾಧನೆ: ಸೈನ್ಸ್ ಒಲಿಂಪಿಯಾಡ್ ಫೌಂಡೇಶನ್ – 2ನೇ ಹಂತದ ಫಲಿತಾಂಶ ಅಮೋಘ ದಾಖಲೆ: ವಿದ್ಯಾರ್ಥಿಗಳ ಪರಿಶ್ರಮ,ಶಿಕ್ಷಕರ ಮಾರ್ಗದರ್ಶನ,ಪೋಷಕರ ಬೆಂಬಲದಿಂದ ಈ ಸಾಧನೆ: ಸುಮಂತ್ ಕುಮಾರ್ ಜೈನ್

Suddi Udaya

ತರ್ಬೀಯತುಲ್ ಇಸ್ಲಾಂ ದಮ್ಮಾಂ ಕರ್ನಾಟಕ ಮದ್ರಸದ ಮಿಹ್ರಜಾನುಲ್ ಬಿದಾಯ ವರ್ಷಾರಂಭ ಅಧ್ಯಯನ ಶಿಬಿರ

Suddi Udaya

ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ ಸವಣಾಲುವಿನ ಹಿತ್ತಿಲಪೇಲ ನಿವಾಸಿಗಳು; ಸಂಪರ್ಕ ಕೊಂಡಿಯಾಗಿರುವ ನದಿಯನ್ನೇ ದಾಟದಂತೆ ಬ್ಯಾನರ್ ಹಾಕುವ ಮೂಲಕ ಅಧಿಕಾರಿಗಳ ದಿಗ್ಬಂಧನ

Suddi Udaya

ಬೆಳ್ತಂಗಡಿ : ಆಭರಣ ಜ್ಯುವೆಲರಿಗೆ ಐಟಿ ದಾಳಿ ಪ್ರಕರಣ: ಬೆಳ್ತಂಗಡಿ ಆಭರಣ ಶಾಪ್ ನ ಐಟಿ ದಾಳಿ ಮುಕ್ತಾಯ

Suddi Udaya
error: Content is protected !!