May 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುದ್ದಿ ಉದಯ ಫಲಶ್ರುತಿ: ಸರ್ವೀಸ್ ರಸ್ತೆಯಲ್ಲಿ ನಿರ್ಮಿಸಿದ್ದ ದಾರಿದೀಪಗಳ ಪಿಲ್ಲರ್ ತೆರವು

ಬೆಳ್ತಂಗಡಿ: ತಾಲೂಕಿನಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಭಿವೃದ್ದಿ ಕಾಮಗಾರಿ ನಡೆಯುತ್ತಿದ್ದು ಸರ್ವಿಸ್ ರಸ್ತೆಗಳಲ್ಲಿ ದಾರಿದೀಪಗಳಿಗಾಗಿ ಪಿಲ್ಲರ್ ಗಳನ್ನೂ ಅಳವಡಿಸಿದ್ದ ಕುರಿತು ಸುದ್ದಿ ಉದಯ ಪತ್ರಿಕೆಯಲ್ಲಿ ವರದಿ ಪ್ರಕಟಿಸಿದ ಬೆನ್ನಲ್ಲೇ ಇದೀಗ ಪಿಲ್ಲರ್ ಗಳ ತೆರವು ಕಾರ್ಯ ನಡೆಯುತ್ತಿದೆ.

ರಾಷ್ಟ್ರೀಯ ಹೆದ್ದಾರಿಯ ಅಭಿವೃದ್ದಿ ಕಾಮಗಾರಿ ನಡೆಯುತ್ತಿದ್ದ ಸಂದರ್ಭ ಉಜಿರೆಯಿಂದ ಚಾರ್ಮಾಡಿ ರಸ್ತೆಯ ಅನುಗ್ರಹ ಶಾಲೆಯ ತನಕ ಸರ್ವಿಸ್ ರಸ್ತೆ ಆಗಬೇಕು ಎಂಬ ವಿಚಾರಗಳಲ್ಲಿ ಹಲವು ಚರ್ಚೆಗಳು ನಡೆದು ಕೊನೆಗೂ ಉಜಿರೆ-ಚಾರ್ಮಾಡಿ ರಸ್ತೆಯ ಎಡ ಭಾಗದಲ್ಲಿ ಸರ್ವೀಸ್ ರಸ್ತೆಯ ನಿರ್ಮಾಣದ ದೃಷ್ಟಿಯಿಂದ ಅಭಿವೃದ್ಧಿ ಕಾಮಗಾರಿ ಪ್ರಾರಂಭಗೊಂಡಿದೆ.

ಈ ಸರ್ವಿಸ್ ರಸ್ತೆ ಸ್ಥಳೀಯ ನಾಗರಿಕರಿಗೆ ಹಾಗೂ ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ, ಪ್ರಾರ್ಥನಾ ಮಂದಿರಕ್ಕೆ ಬರುವಂತವರಿಗೆ ಅನುಕೂಲವಾದರೂ ಸಹ ಈ ರಸ್ತೆಯಲ್ಲಿ ದಾರಿದೀಪಗಳ ನಿರ್ಮಾಣಕ್ಕೆ ಎಂದು ಅಳವಡಿಸಿದ ಪಿಲ್ಲರ್‌ಗಳು ಅಪಘಾತಕ್ಕೆ ಎಡೆಮಾಡಿಕೊಡಬಹುದು ಎಂಬ ಮುನ್ಸೂಚನೆಯನ್ನು ಸುದ್ದಿ ಉದಯ ವರದಿಯಲ್ಲಿ ಪ್ರಕಟಿಸಿತ್ತು. ಇದೀಗ ವರದಿಯ ಫಲಶ್ರುತಿಯಾಗಿ ಪಿಲ್ಲರ್ ಗಳ ತೆರವು ಕಾರ್ಯ ನಡೆಯುತ್ತಿದ್ದು, ಈ ರಸ್ತೆಯಲ್ಲಿ ಮುಂಬರುವ ದಿನಗಳಲ್ಲಿ ಸಂಭವಿಸಬಹುದಾಗಿದ್ದ ಅನಾಹುತಗಳನ್ನು ತಪ್ಪಿಸಿದಂತಾಗಿದೆ.

Related posts

ಶಾಲಾ ವಾಹನ ಡಿಕ್ಕಿ: ಪಾದಾಚಾರಿ ಕಡಿರುದ್ಯಾವರ ನಿವಾಸಿ ಸುರೇಶ್‌ ನಾಯ್ಕ ಮೃತ್ಯು

Suddi Udaya

ಎಕ್ಸೆಲ್ ನ ವಿದ್ಯಾರ್ಥಿಗಳು ಬನಾರಸ್ ಹಿಂದೂ ವಿ.ವಿ, ಎ ಐ ಐ ಎಂ ಎಸ್ ಭೋಪಾಲ್ ಸೇರಿ, ದೇಶದ ಅತ್ಯುನ್ನತ ಮೆಡಿಕಲ್ ಕಾಲೇಜುಗಳಲ್ಲಿ ಓದಿಗೆ ಆಯ್ಕೆ

Suddi Udaya

ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ರಿಗೆ ದಿ| ಬೋಳೂರು ಹರಿಶ್ಚಂದ್ರ ಆಚಾರ್ಯ ಪುರಸ್ಕಾರ

Suddi Udaya

ಗೇರುಕಟ್ಟೆ ಶ್ರೀ ನಾಗಬ್ರಹ್ಮ ಸ್ವಾಮಿ ಸೇವಾ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

Suddi Udaya

ಕಣಿಯೂರು ಬಿಜೆಪಿ ಬೂತ್ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಕಾಂಗ್ರೇಸ್ ಸೇರ್ಪಡೆ

Suddi Udaya

ಸ್ಪಂದನ ಪಾಲಿಕ್ಲಿನಿಕ್ ವತಿಯಿಂದ ಮನೆ ಬಾಗಿಲಿಗೆ ಬಂದು ರಕ್ತದ ಸ್ಯಾಂಪಲ್ ಸಂಗ್ರಹಿಸುವ ವ್ಯವಸ್ಥೆ

Suddi Udaya
error: Content is protected !!