August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂಡಿಂಜೆ ಗ್ರಾಮ ಪಂಚಾಯತ್ ಹಾಗೂ ಒಕ್ಕೂಟದ ವತಿಯಿಂದ ರೈತ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ : ಕೃಷಿ ಇಲಾಖೆ ಬೆಳ್ತಂಗಡಿ , ಗ್ರಾಮ ಪಂಚಾಯತ್ ಅಂಡಿಂಜೆ , ನಿಸರ್ಗ ಸಂಜೀವಿನಿ ಗ್ರಾಮ್ ಪಂಚಾಯತ್ ಮಟ್ಟದ ಒಕ್ಕೂಟ ಅಂಡಿಂಜೆ ಇದರ ಸಂಯುಕ್ತ ಆಶ್ರಯದಲ್ಲಿ “ಸಮತೋಲನ ರಸ ಗೊಬ್ಬರಗಳ ಬಳಕೆ ಹಾಗೂ ಮಣ್ಣು ಪರೀಕ್ಷೆಯ ಮಹತ್ವದ ಬಗ್ಗೆ “ಒಂದು ದಿನದ ರೈತ ತರಬೇತಿಯನ್ನು ಮೇ 15 ರಂದು ಅಂಡಿಂಜೆ ಪಂಚಾಯಿತಿ ಸಭಾಂಗಣದಲ್ಲಿ ಒಕ್ಕೂಟದ ಉಪಾಧ್ಯಕ್ಷೆ ರಮಣಿ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ತರಬೇತಿ ಕಾರ್ಯಾಗಾರವನ್ನು ಪ್ರಗತಿಪರ ಕೃಷಿಕರು ಸಾವ್ಯ ಬಾಲಕೃಷ್ಣ ಭಟ್ ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಕೃಷಿ ಅಧಿಕಾರಿ ಗಣೇಶ್ ಆಡಿಗ ಪ್ರಾಸ್ತಾವಿಕವಾಗಿ ಮಾತನಾಡಿ ಕೃಷಿ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿಯಾದ ವಿಜ್ಞಾನಿ ಡಾI ಮಲ್ಲಿಕಾರ್ಜುನ ತರಬೇತಿಯನ್ನು ಪ್ರಾರಂಭಿಸಿ ಸಮತೋಲನ ರಸಗೊಬ್ಬರಗಳ ಬಳಕೆ ಹಾಗೂ ಮಣ್ಣು ಪರೀಕ್ಷೆಯ ಮಹತ್ವದ ಬಗ್ಗೆ ಮಾಹಿತಿ ನೀಡಿದರು.

ಸಹಾಯ ಕೃಷಿ ನಿರ್ದೇಶಕರಾದ ವೀರಭದ್ರಪ್ಪ ಮಾತನಾಡಿ ರಸಗೊಬ್ಬರದ ಬಳಕೆ , ಮಣ್ಣು ಪರೀಕ್ಷೆಗೆ ಮಣ್ಣು ತೆಗೆಯುವ ವಿಧಾನ , ಸರ್ಕಾರದಿಂದ ರೈತರಿಗೆ ಸಿಗುವ ಸೌಲಭ್ಯ, ವಿವಿಧ ರೀತಿಯ ಕಾಳು ಬೆಳೆಗಳನ್ನು ಬೆಳೆಯಲು ರೈತರಿಗೆ ಪ್ರೋತ್ಸಾಹಿಸಿದರು. ಕಳೆನಾಶಕಗಳನ್ನು ಬೆಳೆಗನುಗುಣವಾಗಿ ಬಳೆಸಬೇಕು, ಪೊಟ್ಯಾಶಿಯಂನ ಮಹತ್ವ, ಮುಂತಾದ ವಿಷಯದ ಬಗ್ಗೆ ಮಾಹಿತಿ ನೀಡಿದರು.

ತರಬೇತಿಯಲ್ಲಿ ಸಂಜೀವಿನಿ ಅಭಿಯಾನ ಘಟಕದ ವ್ಯವಸ್ಥಾಪಕರು ಕೃಷಿ ಬಂಗಾರಪ್ಪ , ಒಕ್ಕೂಟದ ಅಧ್ಯಕ್ಷರು, ಆತ್ಮ ಯೋಜನೆಯ ಸಿಬ್ಬಂದಿ ಅಭಿಲಾಶ್, ಪ್ರಗತಿಪರ ಕೃಷಿಕರಾದ ಸಾವ್ಯ ಬಾಲಕೃಷ್ಣ ಭಟ್ ಉಪಸ್ಥಿತರಿದ್ದರು. ಅಂಡಿಂಜೆ, ಸಾವ್ಯ, ಕೊಕ್ರಾಡಿ ಗ್ರಾಮದ ರೈತರು , ಒಕ್ಕೂಟದ ಪದಾಧಿಕಾರಿಗಳು, ಒಕ್ಕೂಟದ ಸಿಬ್ಬಂದಿಗಳು, ಪಂಚಾಯತ್ ಸಿಬ್ಬಂದಿಗಳು ಭಾಗವಹಿಸಿದ್ದರು.

ಕೃಷಿ ಸಖಿ ಶ್ರೀಮತಿ ವತ್ಸಲಾ ಸ್ವಾಗತಿಸಿದರು. ಪಂಚಾಯತ್ ಸಿಬ್ಬಂದಿ ಶೀನ ಕಾರ್ಯಕ್ರಮ ನಿರೂಪಿಸಿದರು. ಪಶು ಸಖಿ ಶ್ವೇತಾ ಧನ್ಯವಾದ ನೀಡಿದರು.

Related posts

ನಾಳ ಭಜನಾ ಮಂಡಳಿ ಸದಸ್ಯರು ಅಯೋಧ್ಯೆ ಕ್ಷೇತ್ರಕ್ಕೆ ಭೇಟಿ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಹಳ್ಳಿ ಸಂತೆ

Suddi Udaya

ಜ.15: ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರ 79ನೇ ಹುಟ್ಟುಹಬ್ಬದ ಪ್ರಯುಕ್ತ ‘ಬೃಹತ್ ರಕ್ತದಾನ’ ಶಿಬಿರ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದ್ವೇಷ ರಾಜಕೀಯ ಹಾಗೂ ಬೆಲೆ ಏರಿಕೆ ಖಂಡಿಸಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಯಕ್ಷಸಂಭ್ರಮ ಉದ್ಘಾಟನೆ: ನಾಲ್ವರು ಯಕ್ಷಗಾನ ತರಬೇತಿ ಗುರುಗಳಿಗೆ ಗೌರವಾರ್ಪಣೆ: 8 ಶಾಲೆಗಳು 480 ಯಕ್ಷ ವಿದ್ಯಾರ್ಥಿಗಳಿಂದ ಯಕ್ಷಗಾನ ರಂಗಪ್ರವೇಶ

Suddi Udaya
error: Content is protected !!