August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೂ.30ರಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಅಭಿಯಾನ ಆರಂಭ

ಬೆಂಗಳೂರು : ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಎಸ್‌ಐಆರ್‌ಗೆ (ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ) ದಿನಾಂಕ ಘೋಷಣೆ ಆಗಿದೆ. ಜೂನ್ 20ರಿಂದ ತರಬೇತಿ ಮತ್ತು ಮುದ್ರಣ ಕಾರ್ಯ ಶುರುವಾಗುತ್ತದೆ. ಜೂ.30 ರಿಂದ ಜು.29 ರ ವರೆಗೆ ಮನೆ ಮನೆಗೆ ಭೇಟಿ ನೀಡಿ ಪರಿಷ್ಕರಣೆ ನಡೆಸಲಾಗುತ್ತದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತರಾದ ಅದ್ಭುಕುಮಾರ್ ಮಾಹಿತಿ ನೀಡಿದ್ದಾರೆ.

ಕೇಂದ್ರ ಚುನಾವಣಾ ಆಯೋಗದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಈಗಾಗಲೇ ಎಸ್‌ಐಆ‌ರ್ ಗಾಗಿ ಮ್ಯಾಪ್ ಕಾರ್ಯ ಮಾಡಲಾಗಿದೆ. ಎಸ್‌ಐಆರ್‌ಗೆ ಈಗಾಗಲೇ ಚುನಾವಣಾ ಆಯೋಗ ದಿನಾಂಕ ಘೋಷಿಸಿದೆ. ಜೂನ್ 20ರಿಂದ ತರಬೇತಿ ಮತ್ತು ಮುದ್ರಣ ಕಾರ್ಯ ಶುರುವಾಗುತ್ತದೆ. ಜೂ.30 ರಿಂದ ಜು.29 ರ ವರೆಗೆ ಮನೆ ಮನೆಗೆ ಭೇಟಿ ನೀಡಿ ಪರಿಷ್ಕರಣೆ ಮಾಡಲಾಗುವುದು. ಮತದಾರರ ಪಟ್ಟಿಯಲ್ಲಿ ಸೇರಲು 18 ವರ್ಷ ಪೂರ್ಣವಾಗಿರಬೇಕು. ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುತ್ತದೆ” ಎಂದರು. “5.55 ಕೋಟಿ ಮತದಾರರನ್ನ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಗೆ ಒಳಪಡಿಸಲಾಗುತ್ತೆ. ಎಸ್‌ಐಆರ್ ಫಾರಂನಲ್ಲಿ ಗಣತಿ ನಮೂನೆಯೇ ಅತ್ಯಂತ ಮುಖ್ಯ ಬೂತ್ ಮಟ್ಟದ ಅಧಿಕಾರಿಗಳು ಪ್ರತಿ ಮನೆಗೆ ಭೇಟಿ ನೀಡಿ 2 ಸೆಟ್ ಗಣತಿ ನಮೂನೆಗಳನ್ನ ತಲುಪಿಸಲಿದ್ದಾರೆ. ವಿಶೇಷವೆಂದರೆ, ಗಣತಿ ನಮೂನೆಯಲ್ಲಿರುವ ಪ್ರತಿ ಮತದಾರರಿಗೂ ಪ್ರತ್ಯೇಕ ಕ್ಯೂಆರ್ ಕೋಡ್ ಇರಲಿದೆ. ಬೂತ್‌ ಮಟ್ಟದ ಅಧಿಕಾರಿಗಳು ಗಣತಿ ನಮೂನೆಯನ್ನ ಮನೆಗೆ ತಂದಾಗ ಸಾರ್ವಜನಿಕರು ಅದರಲ್ಲಿ 1 ಸೆಟ್ ಅನ್ನು ಸಂಪೂರ್ಣವಾಗಿ ಭರ್ತಿ ಮಾಡಿ ಅಧಿಕಾರಿಗಳಿಗೆ ಮರಳಿ ನೀಡಬೇಕು. ಮತ್ತೊಂದು ಸೆಟ್ ಗಣತಿ ನಮೂನೆಯನ್ನು ಭವಿಷ್ಯದ ಸಾಕ್ಷಿಗಾಗಿ ಮತದಾರರೇ ತಮ್ಮ ಬಳಿ ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು” ಎಂದು ಹೇಳಿದರು. “ಇನ್ನು 2002ರ ಮತದಾರರ ಪಟ್ಟಿಯಲ್ಲಿ ಯಾರ ಹೆಸರು ದಾಖಲಾಗಿದೆಯೋ, ಅಂತಹವರ ಹೆಸರುಗಳನ್ನ ಕಡ್ಡಾಯವಾಗಿ ಪರಿಶೀಲನೆಗೆ ಒಳಪಡಿಸಲಾಗುತ್ತದೆ. ಗ್ರಾಮ ಪಂಚಾಯತಿ ಮಟ್ಟದಲ್ಲಿ ವೋಟರ್ ಫೆಸಿಲಿಟಿ ಸೆಂಟರ್ ಓಪನ್ ಮಾಡಲಾಗುತ್ತೆ ಮತದಾರರು ಡೌಟ್ ಇದ್ರೆ ಪರಿಹಾರ ಕಂಡುಕೊಳ್ಳಬಹುದು. ಆಗಸ್ಟ್ 8 ರಂದು ಕರುಡು ಮತದಾರರ ಪಟ್ಟಿ ರಿಲೀಸ್ ಮಾಡಲಾಗುತ್ತೆ ಆಕ್ಷೇಪಣೆಗಳನ್ನ ಸಲ್ಲಿಸಬಹುದು” ಎಂದು ತಿಳಿಸಿದರು.

Related posts

ವೇಣೂರು: ಶ್ರೀ ಬಾಹುಬಲಿ ಸಭಾಭವನದ ಉದ್ಘಾಟನೆ

Suddi Udaya

ಬಿಎಂಎಸ್ ಸಂಘದ ದಕ್ಷಿಣ ಮತ್ತು ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ವಿ. ರಾಧಾಕೃಷ್ಣನ್ ದ.ಕ. ಜಿಲ್ಲೆಗೆ ಆಗಮನ

Suddi Udaya

ಪರೀಕ ಸೌಖ್ಯವನ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸುವರ್ಣ ಮಹೋತ್ಸವ: ಸವಿ ನೆನಪಿನ ಕೇಂದ್ರ ಕಚೇರಿಯ ನೂತನ ಕಟ್ಟಡ ‘ಪರಿಶ್ರಮ’ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಹಯಾತುಲ್ ಇಸ್ಲಾಂ ಸೆಕೆಂಡರಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಸೌಜನ್ಯ ಕೊಲೆ ಪ್ರಕರಣ: ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya
error: Content is protected !!