July 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೂ.30ರಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಅಭಿಯಾನ ಆರಂಭ

ಬೆಂಗಳೂರು : ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಎಸ್‌ಐಆರ್‌ಗೆ (ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ) ದಿನಾಂಕ ಘೋಷಣೆ ಆಗಿದೆ. ಜೂನ್ 20ರಿಂದ ತರಬೇತಿ ಮತ್ತು ಮುದ್ರಣ ಕಾರ್ಯ ಶುರುವಾಗುತ್ತದೆ. ಜೂ.30 ರಿಂದ ಜು.29 ರ ವರೆಗೆ ಮನೆ ಮನೆಗೆ ಭೇಟಿ ನೀಡಿ ಪರಿಷ್ಕರಣೆ ನಡೆಸಲಾಗುತ್ತದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತರಾದ ಅದ್ಭುಕುಮಾರ್ ಮಾಹಿತಿ ನೀಡಿದ್ದಾರೆ.

ಕೇಂದ್ರ ಚುನಾವಣಾ ಆಯೋಗದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಈಗಾಗಲೇ ಎಸ್‌ಐಆ‌ರ್ ಗಾಗಿ ಮ್ಯಾಪ್ ಕಾರ್ಯ ಮಾಡಲಾಗಿದೆ. ಎಸ್‌ಐಆರ್‌ಗೆ ಈಗಾಗಲೇ ಚುನಾವಣಾ ಆಯೋಗ ದಿನಾಂಕ ಘೋಷಿಸಿದೆ. ಜೂನ್ 20ರಿಂದ ತರಬೇತಿ ಮತ್ತು ಮುದ್ರಣ ಕಾರ್ಯ ಶುರುವಾಗುತ್ತದೆ. ಜೂ.30 ರಿಂದ ಜು.29 ರ ವರೆಗೆ ಮನೆ ಮನೆಗೆ ಭೇಟಿ ನೀಡಿ ಪರಿಷ್ಕರಣೆ ಮಾಡಲಾಗುವುದು. ಮತದಾರರ ಪಟ್ಟಿಯಲ್ಲಿ ಸೇರಲು 18 ವರ್ಷ ಪೂರ್ಣವಾಗಿರಬೇಕು. ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುತ್ತದೆ” ಎಂದರು. “5.55 ಕೋಟಿ ಮತದಾರರನ್ನ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಗೆ ಒಳಪಡಿಸಲಾಗುತ್ತೆ. ಎಸ್‌ಐಆರ್ ಫಾರಂನಲ್ಲಿ ಗಣತಿ ನಮೂನೆಯೇ ಅತ್ಯಂತ ಮುಖ್ಯ ಬೂತ್ ಮಟ್ಟದ ಅಧಿಕಾರಿಗಳು ಪ್ರತಿ ಮನೆಗೆ ಭೇಟಿ ನೀಡಿ 2 ಸೆಟ್ ಗಣತಿ ನಮೂನೆಗಳನ್ನ ತಲುಪಿಸಲಿದ್ದಾರೆ. ವಿಶೇಷವೆಂದರೆ, ಗಣತಿ ನಮೂನೆಯಲ್ಲಿರುವ ಪ್ರತಿ ಮತದಾರರಿಗೂ ಪ್ರತ್ಯೇಕ ಕ್ಯೂಆರ್ ಕೋಡ್ ಇರಲಿದೆ. ಬೂತ್‌ ಮಟ್ಟದ ಅಧಿಕಾರಿಗಳು ಗಣತಿ ನಮೂನೆಯನ್ನ ಮನೆಗೆ ತಂದಾಗ ಸಾರ್ವಜನಿಕರು ಅದರಲ್ಲಿ 1 ಸೆಟ್ ಅನ್ನು ಸಂಪೂರ್ಣವಾಗಿ ಭರ್ತಿ ಮಾಡಿ ಅಧಿಕಾರಿಗಳಿಗೆ ಮರಳಿ ನೀಡಬೇಕು. ಮತ್ತೊಂದು ಸೆಟ್ ಗಣತಿ ನಮೂನೆಯನ್ನು ಭವಿಷ್ಯದ ಸಾಕ್ಷಿಗಾಗಿ ಮತದಾರರೇ ತಮ್ಮ ಬಳಿ ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು” ಎಂದು ಹೇಳಿದರು. “ಇನ್ನು 2002ರ ಮತದಾರರ ಪಟ್ಟಿಯಲ್ಲಿ ಯಾರ ಹೆಸರು ದಾಖಲಾಗಿದೆಯೋ, ಅಂತಹವರ ಹೆಸರುಗಳನ್ನ ಕಡ್ಡಾಯವಾಗಿ ಪರಿಶೀಲನೆಗೆ ಒಳಪಡಿಸಲಾಗುತ್ತದೆ. ಗ್ರಾಮ ಪಂಚಾಯತಿ ಮಟ್ಟದಲ್ಲಿ ವೋಟರ್ ಫೆಸಿಲಿಟಿ ಸೆಂಟರ್ ಓಪನ್ ಮಾಡಲಾಗುತ್ತೆ ಮತದಾರರು ಡೌಟ್ ಇದ್ರೆ ಪರಿಹಾರ ಕಂಡುಕೊಳ್ಳಬಹುದು. ಆಗಸ್ಟ್ 8 ರಂದು ಕರುಡು ಮತದಾರರ ಪಟ್ಟಿ ರಿಲೀಸ್ ಮಾಡಲಾಗುತ್ತೆ ಆಕ್ಷೇಪಣೆಗಳನ್ನ ಸಲ್ಲಿಸಬಹುದು” ಎಂದು ತಿಳಿಸಿದರು.

Related posts

ತೋಟತ್ತಾಡಿ ಚರ್ಚ್ ನಲ್ಲಿ ಯುವಕರಿಂದ ತಯಾರಿಸಲ್ಪಟ್ಟ ೨೨ ಅಡಿ ಎತ್ತರದ ಕ್ರಿಸ್‌ಮಸ್ ನಕ್ಷತ್ರ

Suddi Udaya

ಕರಾಟೆ ಸ್ಪರ್ಧೆ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬಂದಾರು: ಪಾಣೆಕಲ್ಲು ಶಿರಾಡಿ ಗ್ರಾಮ ದೈವ ಸಪರಿವಾರ ದೈವಸ್ಥಾನ ಕಾಲಾವಧಿ ನೇಮೋತ್ಸವದ ಸಮಾಲೋಚನಾ ಸಭೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ..ಹಿ.ಪ್ರಾ. ಶಾಲಾ ಸಂಸತ್ತು ರಚನೆ

Suddi Udaya

ಗರ್ಡಾಡಿ: ಹಳ್ಳಿಂಜದಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ, ಅಧಿಕಾರಿಗಳ ಭೇಟಿ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವರ ಸಂಭ್ರಮದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!