33.6 C
ಪುತ್ತೂರು, ಬೆಳ್ತಂಗಡಿ
May 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ – ಮಾಹಿತಿ

ಬೆಳ್ತಂಗಡಿ: ರಾಜ್ಯ ಸರಕಾರದ ಆದೇಶದಂತೆ ರಾಜ್ಯದ ಎಲ್ಲ ಕಡೆಗಳಲ್ಲಿ ವ್ಯಾಪಾರ ವ್ಯವಹಾರ ಮಳಿಗೆಗಳಲ್ಲಿ ಅಳವಡಿಸಲಾಗುವ ನಾಮಫಲಕಗಳಲ್ಲಿ 60% ಕನ್ನಡ ಬರಹ ಇರಬೇಕಾಗಿದ್ದು; ಈ ಆದೇಶದ ಅನುಷ್ಠಾನಕ್ಕೆ ಆಡಳಿತ ವ್ಯವಸ್ಥೆಯನ್ನು ಸ್ಥಳೀಯವಾಗಿ ಸಜ್ಜುಗೊಳಿಸಲು ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಮೇ 15ರಂದು ನಡೆದ ತಾಲೂಕಿನ ಗ್ರಾಮ ಪಂಚಾಯತ್‌ಗಳ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಅಗತ್ಯ ಮಾಹಿತಿ ನೀಡಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಜಾಗೃತಿ ಸಮಿತಿಯ ಸದಸ್ಯರಾದ ಜೈಕನ್ನಡಮ್ಮ ಪತ್ರಿಕೆಯ ಸಂಪಾದಕ ದೇವಿಪ್ರಸಾದ್ ಸವಿವರವಾಗಿ ಮಾಹಿತಿ ನೀಡುತ್ತಾ ಬೆಳ್ತಂಗಡಿ ತಾಲೂಕಿನಲ್ಲಿ ಎಲ್ಲಕಡೆ ಕನ್ನಡ ನಾಮಫಲಕಗಳ ಕಡ್ಡಾಯ ಅಳವಡಿಕೆಗೆ ಎಲ್ಲ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಹಕಾರ ಕೋರಿದರಲ್ಲದೇ, ಗ್ರಾಮ ಪಂಚಾಯತ್ ಮಟ್ಟದಲ್ಲಿ ಈ ವಿಚಾರವಾಗಿ ಜಾಗೃತಿ ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳೋಣ ಎಂದರು.


ಮುಂದಿನ ದಿನಗಳಲ್ಲಿ ಅಗತ್ಯ ಇರುವ ಗ್ರಾಮ ಪಂಚಾಯತ್ ವ್ಯಾಪ್ತಿಗೆ ವ್ಯಾಪಾರಸ್ಥರಿಗೆ ನಾಮಫಲಕಗಳಲ್ಲಿ ಕನ್ನಡ ಭಾಷೆ ಅಳವಡಿಕೆ ಬಗ್ಗೆ ತಿಳುವಳಿಕೆ ನೀಡಿ ಜಾಗೃತಿ ಮೂಡಿಸಲು ನೀವು ತಿಳಿಸಿದ ದಿನದಂದು ಬಂದು ಜೊತೆ ಸೇರಲು ನಾನು ಸಿದ್ಧ ಎಂದ ದೇವಿಪ್ರಸಾದ್; ಎಲ್ಲರೂ ಒಟ್ಟು ಸೇರಿ ನಮ್ಮ ರಾಜ್ಯದ ಮಾತೃಭಾಷೆ ಕನ್ನಡವನ್ನು ನಮ್ಮ ದೈನಂದಿನ ವ್ಯವಹಾರದಲ್ಲಿ ಬಳಸಲು ನಮ್ಮಿಂದಾದ ಪ್ರಯತ್ನ ಮಾಡುವ ಮೂಲಕ‌ ಮಾತೃಭಾಷೆ ಋಣವನ್ನು ಕಿಂಚಿತ್ತಾದರೂ ತೀರಿಸೋಣ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಸ್ವಾಗತಿಸಿ, ವಂದಿಸಿದರು.

Related posts

ಕನ್ಯಾಡಿಯಲ್ಲಿ ‘ಸ್ಪೂರ್ತಿ’ ಹೊಸ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ

Suddi Udaya

ಕೆನರಾ ಸ್ಟೀಲ್ ಇಂಡಸ್ಟ್ರೀಸ್‌ನ ಸಂಸ್ಥೆ ಪಣೆಜಾಲುವಿನಲ್ಲಿ ವಿನಯ ಸ್ಟೀಲ್ & ಮೆಟಲ್ಸ್ ಶುಭಾರಂಭ

Suddi Udaya

ಬೆಳ್ತಂಗಡಿ: ದೀಪಾ ಗೋಲ್ಡ್ ವ್ಯವಸ್ಥಾಪಕ ಪ್ರಸಾದ್ ಪೈ ಪಾಣೆಮಂಗಳೂರು ನಿಧನ

Suddi Udaya

ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್‌ರಿಂದ ಹೇವಾಜೆ ಶಾಲೆಗೆ ಯಾವುದೇ ಅನುದಾನ ಮಂಜೂರಾಗಿಲ್ಲ: ಮಾಹಿತಿ ಹಕ್ಕಿನಲ್ಲಿ ಅಧಿಕಾರಿ ನೀಡಿದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್

Suddi Udaya

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 6 ಕ್ಷೇತ್ರಕ್ಕೆ ಅವಿರೋಧ ಆಯ್ಕೆ: 6 ಸ್ಥಾನ ಪದ್ಮಗೌಡ ನೇತೃತ್ವದ ತಂಡಕ್ಕೆ ಜಯ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ

Suddi Udaya
error: Content is protected !!