33.6 C
ಪುತ್ತೂರು, ಬೆಳ್ತಂಗಡಿ
May 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನಾವೂರು: ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್ ನಿಂದ ನೋಟ್ ಪುಸ್ತಕ ವಿತರಣೆ, ಅಪ್ಪೆ ಕಲ್ಲುರ್ಟಿ ದೈವದ ದೊಂದಿ ಕೋಲ

ನಾವೂರು: ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್ ನಿಂದ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮವು ಮೇ 15ರಂದು ನಡೆಯಿತು.

ಸಂಜೆ ದೈವ ದೇವರ ಪ್ರಸಾದ ರೂಪದಲ್ಲಿ ನಾವೂರು ಗ್ರಾಮದ 1ನೇ ತರಗತಿಯಿಂದ ಪದವಿ ವಿದ್ಯಾರ್ಥಿಗಳಿಗೆ ಕಲಿಕೆಗೆ ಅಗತ್ಯವಿರುವ ಎಲ್ಲಾ ರೀತಿಯ ಬರಹ ಪುಸ್ತಕಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಇಂದಬೆಟ್ಟು ಅರ್ಧನಾರೀಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಲಕ್ಷ್ಣಣ ಗೌಡ, ಪ್ರಮುಖರಾದ ಭುಜಬಲಿ ಧರ್ಮಸ್ಥಳ, ಜಾರಪ್ಪ, ಅರುಣ್, ವಿಜಯ್, ಪತ್ರಕರ್ತ ಮನೀಶ್ ವಿ. ಅಂಚನ್ ಪಾಲೇದು, ರವಿರಾಜ್ ಜೈನ್ ಬಡೆಕ್ಕಾವು ಗುತ್ತು, ವಸಂತ ಇಡ್ಯಲ, ರವಿ, ರಕ್ಷಿತ್ ಅಜಿಲ ಬಡೆಕ್ಕಾವು ಗುತ್ತು ಉಪಸ್ಥಿತರಿದ್ದರು.

ಇಂದಬೆಟ್ಟು ಅರ್ಧನಾರೀಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ದಿನೇಶ್ ಕಾರ್ಯಕ್ರಮ ನಿರ್ವಹಿಸಿದರು. ರತ್ನಾಕರ ಬಿ. ನಾವೂರು ಪ್ರಾಸ್ತಾವಿಕವಾಗಿ ಮಾತನಾಡಿ ಧನ್ಯವಾದವಿತ್ತರು.

ಬಳಿಕ ಕೊರಗಜ್ಜ ದೈವಕ್ಕೆ ಅಗೇಲು ಸೇವೆ ನಡೆದು ಅಪ್ಪೆ ಕಲ್ಲುರ್ಟಿ ದೈವದ ದೊಂದಿ ಕೋಲ ಸೇವೆ ನಡೆಯಿತು. ನೂರಾರು ಮಂದಿ ಭಾಗವಹಿಸಿ ದೈವದ ಕೃಪೆಗೆ ಪಾತ್ರರಾದರು. ಬಡೆಕ್ಕಾವು ಗುತ್ತು ಹಿರಿಯರು, ಚಾಕಿರಿ ವರ್ಗದವರು, ಊರಿನ ಮತ್ತು ಗುತ್ತು ಬರ್ಕೆಯವರು, ದೈವಗಳ ಪರಿಚಾರಕರು, ವಿಲಯದವರು ಉಪಸ್ಥಿತರಿದ್ದರು.

Related posts

ದೈವ, ಶ್ರೀ ಕೊಡಮಣಿತ್ತಾಯ, ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ- ಶ್ರೀ ಬ್ರಹ್ಮ ಬೈದರ್ಕಳ ಗರಡಿ ಪೊಸರಡ್ಕ ಕ್ಷೇತ್ರದ ಬ್ರಹ್ಮಕುಂಭಾಭಿಷೇಕ: ಉಮಾಮಹೇಶ್ವರ ದೇವಸ್ಥಾನದಿಂದ ಪೊಸರಡ್ಕ ಕ್ಷೇತ್ರಕ್ಕೆ ಭವ್ಯ ಶೋಭಾಯಾತ್ರೆ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಐವತ್ತು ವಿದ್ಯಾರ್ಥಿಗಳಿಗೆ ಸಂಸ್ಕೃತಭಾಷಾ ವಿದ್ಯಾರ್ಥಿವೇತನ

Suddi Udaya

ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಮಹಿಳಾ – ಯುವ ಬಿಲ್ಲವ ವೇದಿಕೆ ವತಿಯಿಂದ ಗುರುಪೂಜೆ, ಸಾಧಕರಿಗೆ ಸನ್ಮಾನ – ಸಾಂಸ್ಕೃತಿಕ ಝೇಂಕಾರ

Suddi Udaya

ಬೆಳ್ತಂಗಡಿ ಕೇಂದ್ರ ಖಿಳರ್ ಜುಮ್ಮಾ ಮಸೀದಿಯಲ್ಲಿ ವಿಜೃಂಭಣೆಯ ಬಕ್ರೀದ್ ಆಚರಣೆ

Suddi Udaya

ಬೆಳ್ತಂಗಡಿ: ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಣೆ

Suddi Udaya
error: Content is protected !!