33.6 C
ಪುತ್ತೂರು, ಬೆಳ್ತಂಗಡಿ
May 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿಸಿ ಕ್ಯಾಮೆರಾ ಮೂಲಕ ಸುಲಭ ಕಾರ್ಯಾಚರಣೆ: ಹೆದ್ದಾರಿ ಬದಿ ತಾತ್ಕಾಲಿಕ ಅಂಗಡಿಯನ್ನು ತೆರವುಗೊಳಿಸಿದ ಪಿಡಿಒ

ಬೆಳ್ತಂಗಡಿ: ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿಡಿಗಲ್- ಸೋಮಂತಡ್ಕ ರಸ್ತೆಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿರುವುದು ಸುಲಭ ಕಾರ್ಯಚರಣೆಯೊಂದಕ್ಕೆ ಸಾಕ್ಷಿಯಾಯಿತು.

ಇಂದು (ಮೇ16) ಬೆಳಗ್ಗೆ ಈ ರಾಷ್ಟ್ರೀಯ ಹೆದ್ದಾರಿ ಬದಿ ತಾತ್ಕಾಲಿಕ ಅಂಗಡಿಯೊಂದು ತಲೆ ಎತ್ತುತ್ತಿದ್ದಂತೆ ಸಿಸಿ ಕ್ಯಾಮೆರಾ ಮೂಲಕ ಈ ದೃಶ್ಯಗಳು ಸೆರೆಯಾದವು. ತಮ್ಮ ಮೊಬೈಲ್ ನಲ್ಲಿ ಇದನ್ನು ಗಮನಿಸಿದ ಪಿಡಿಒ ತಕ್ಷಣ ಅಂಗಡಿಯನ್ನು ತೆರವುಗೊಳಿಸುವ ಕಾರ್ಯಚರಣೆ ನಡೆಸಿದರು. ಜನ ವಾಹನ ದಟ್ಟಣೆ ಹೆಚ್ಚುವ ಮೊದಲೇ ಪಂಚಾಯಿತಿ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಅಂಗಡಿಯನ್ನು ತೆರವುಗೊಳಿಸುವ ಕ್ರಮಕೈಗೊಂಡರು. ಹೆದ್ದಾರಿ ಬದಿ ತಾತ್ಕಾಲಿಕ ಅಂಗಡಿಗಳನ್ನು ನಿರ್ಮಿಸಲು ಪಂಚಾಯಿತಿ ಯಾವುದೇ ಅವಕಾಶ ನೀಡುವುದಿಲ್ಲ. ಇಂತಹ ಅಂಗಡಿಗಳು ಗ್ರಾಮ ಪಂಚಾಯತಿ ವ್ಯಾಪ್ತಿಯ ರಸ್ತೆ ಬದಿ ಕಂಡು ಬಂದರೆ ತಕ್ಷಣ ಮಾಹಿತಿ ನೀಡುವಂತೆ ಪಿಡಿಒ ಗಾಯತ್ರಿ ತಿಳಿಸಿದ್ದಾರೆ.

ನಿಡಿಗಲ್-ಸೋಮಂತಡ್ಕ ಪ್ರದೇಶದ 4 ಕಿ.ಮೀ. ರಸ್ತೆ ವ್ಯಾಪ್ತಿಯಲ್ಲಿ 5 ಸಿಸಿ ಕ್ಯಾಮರಾಗಳು ಕಾರ್ಯನಿರ್ವಹಿಸುತ್ತಿದ್ದು ಇದು ಅನಗತ್ಯ ಚಟುವಟಿಕೆಗಳಿಗೆ ಕಡಿವಾಣ ಹಾಕಲು ತ್ಯಾಜ್ಯ ತಂದು ಹಾಕುವವರನ್ನು ಗಮನಿಸಲು ಸುಲಭವಾಗಿದೆ ಕಳೆದ ಮೂರು ದಿನಗಳ ಹಿಂದೆ ಅರಣ್ಯ ಪ್ರದೇಶದ ಮೂಲಕ ಹಾದು ಹೋಗುವ ಈ ರಸ್ತೆಯ 3 ಕಡೆಗಳಲ್ಲಿ ಹೊಸದಾಗಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.

Related posts

ಲೂಮೋಸ್ – ಟೆಸರಾಕ್ಟ್ ಫಿಲ್ಮ್ ಸೊಸೈಟಿ ವಾರ್ಷಿಕ ಸಮಾರೋಪ ; ನಮ್ಮ ಕಲ್ಪನೆಯೇ ನಮ್ಮ ಮಿತಿ: ಡಾ. ರಾಘವೇಂದ್ರ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಸಮ್ಮೇಳನ 2025

Suddi Udaya

ಗೇರುಕಟ್ಟೆ:52 ವರ್ಷದ ಗಣೇಶೋತ್ಸವ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ವೈ. ಸದಾನಂದ ಶೆಟ್ಟಿ, ಕಾರ್ಯದರ್ಶಿಯಾಗಿ ರಂಜನ್ ಹೆಚ್. ಆಯ್ಕೆ

Suddi Udaya

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ ಡಿ.4 ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ : ಹಿಂದೂ ಹಿತ ರಕ್ಷಣಾ ಸಮಿತಿಯ ಕರೆಗೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ತಾಲೂಕು ಘಟಕ ಸಂಪೂರ್ಣ ಬೆಂಬಲ

Suddi Udaya

ವೇಣೂರು ಐಟಿಐ ಕಾಲೇಜಿನಲ್ಲಿ ಯುವ ಮತ್ತು ಭವಿಷ್ಯದ ಮತದಾರರೊಂದಿಗೆ ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ ಸಂವಾದ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಪ್ರಸಿದ್ದ ಉದ್ಯಮಿ ಮೋಹನ್ ಕುಮಾರ್ ಅವರನ್ನು ಭೇಟಿಯಾದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಮೋಹಿತ್

Suddi Udaya
error: Content is protected !!