August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿಸಿ ಕ್ಯಾಮೆರಾ ಮೂಲಕ ಸುಲಭ ಕಾರ್ಯಾಚರಣೆ: ಹೆದ್ದಾರಿ ಬದಿ ತಾತ್ಕಾಲಿಕ ಅಂಗಡಿಯನ್ನು ತೆರವುಗೊಳಿಸಿದ ಪಿಡಿಒ

ಬೆಳ್ತಂಗಡಿ: ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿಡಿಗಲ್- ಸೋಮಂತಡ್ಕ ರಸ್ತೆಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿರುವುದು ಸುಲಭ ಕಾರ್ಯಚರಣೆಯೊಂದಕ್ಕೆ ಸಾಕ್ಷಿಯಾಯಿತು.

ಇಂದು (ಮೇ16) ಬೆಳಗ್ಗೆ ಈ ರಾಷ್ಟ್ರೀಯ ಹೆದ್ದಾರಿ ಬದಿ ತಾತ್ಕಾಲಿಕ ಅಂಗಡಿಯೊಂದು ತಲೆ ಎತ್ತುತ್ತಿದ್ದಂತೆ ಸಿಸಿ ಕ್ಯಾಮೆರಾ ಮೂಲಕ ಈ ದೃಶ್ಯಗಳು ಸೆರೆಯಾದವು. ತಮ್ಮ ಮೊಬೈಲ್ ನಲ್ಲಿ ಇದನ್ನು ಗಮನಿಸಿದ ಪಿಡಿಒ ತಕ್ಷಣ ಅಂಗಡಿಯನ್ನು ತೆರವುಗೊಳಿಸುವ ಕಾರ್ಯಚರಣೆ ನಡೆಸಿದರು. ಜನ ವಾಹನ ದಟ್ಟಣೆ ಹೆಚ್ಚುವ ಮೊದಲೇ ಪಂಚಾಯಿತಿ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಅಂಗಡಿಯನ್ನು ತೆರವುಗೊಳಿಸುವ ಕ್ರಮಕೈಗೊಂಡರು. ಹೆದ್ದಾರಿ ಬದಿ ತಾತ್ಕಾಲಿಕ ಅಂಗಡಿಗಳನ್ನು ನಿರ್ಮಿಸಲು ಪಂಚಾಯಿತಿ ಯಾವುದೇ ಅವಕಾಶ ನೀಡುವುದಿಲ್ಲ. ಇಂತಹ ಅಂಗಡಿಗಳು ಗ್ರಾಮ ಪಂಚಾಯತಿ ವ್ಯಾಪ್ತಿಯ ರಸ್ತೆ ಬದಿ ಕಂಡು ಬಂದರೆ ತಕ್ಷಣ ಮಾಹಿತಿ ನೀಡುವಂತೆ ಪಿಡಿಒ ಗಾಯತ್ರಿ ತಿಳಿಸಿದ್ದಾರೆ.

ನಿಡಿಗಲ್-ಸೋಮಂತಡ್ಕ ಪ್ರದೇಶದ 4 ಕಿ.ಮೀ. ರಸ್ತೆ ವ್ಯಾಪ್ತಿಯಲ್ಲಿ 5 ಸಿಸಿ ಕ್ಯಾಮರಾಗಳು ಕಾರ್ಯನಿರ್ವಹಿಸುತ್ತಿದ್ದು ಇದು ಅನಗತ್ಯ ಚಟುವಟಿಕೆಗಳಿಗೆ ಕಡಿವಾಣ ಹಾಕಲು ತ್ಯಾಜ್ಯ ತಂದು ಹಾಕುವವರನ್ನು ಗಮನಿಸಲು ಸುಲಭವಾಗಿದೆ ಕಳೆದ ಮೂರು ದಿನಗಳ ಹಿಂದೆ ಅರಣ್ಯ ಪ್ರದೇಶದ ಮೂಲಕ ಹಾದು ಹೋಗುವ ಈ ರಸ್ತೆಯ 3 ಕಡೆಗಳಲ್ಲಿ ಹೊಸದಾಗಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.

Related posts

ಸರಕಾರಿ/ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಿ.ಎ. ತರಗತಿಗಳಲ್ಲಿ ಭಾಗವಹಿಸಲು ಸುವರ್ಣಾವಕಾಶ: ಎಕ್ಸೆಲ್ ಕಾಲೇಜಿನಲ್ಲಿ ಸಿ.ಎ ಫೌಂಡೇಶನ್ ತರಗತಿಗಳು ಪ್ರತಿ ಆದಿತ್ಯವಾರ ನಡೆಯಲಿದೆ

Suddi Udaya

ಇಂದಬೆಟ್ಟು ಸ. ಹಿ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಮನಶ್ರೀ ರವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಸನ್ಮಾನ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಅನ್ವಿತ್ ತೃತೀಯ ಸ್ಥಾನ

Suddi Udaya

ನೆರಿಯ ಆರೋಗ್ಯ ಕೇಂದ್ರದ ವತಿಯಿಂದ ಈಡಿಸ್ ಲಾರ್ವ ಸಮೀಕ್ಷ ಕಾರ್ಯ ಮತ್ತು ಲಾರ್ವ ನಿರ್ಮೂಲನ ಕಾರ್ಯಕ್ರಮ

Suddi Udaya

ಕೆಎಸ್‌ಆರ್‌ಟಿಸಿ ಧರ್ಮಸ್ಥಳ -ಮಂಗಳೂರು ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸು ಸಂಚಾರ ಪ್ರಾರಂಭ

Suddi Udaya
error: Content is protected !!