24.1 C
ಪುತ್ತೂರು, ಬೆಳ್ತಂಗಡಿ
August 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 17: ವೇಣೂರುನಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ವೇಣೂರು:ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಕುಂಟಿಕಾನ, ಮಂಗಳೂರು , ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ, ಮಂಗಳೂರು ವೇಣೂರು ಗ್ರಾಮ ಪಂಚಾಯತು ಸಹಯೋಗದೊಂದಿಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವು ಮೇ 17ರಂದು ವೇಣೂರು ಗ್ರಾಮ ಪಂಚಾಯತು ಸಭಾಂಗಣದಲ್ಲಿಬೆಳಿಗ್ಗೆ 09:30 ರಿಂದ ಮಧ್ಯಾಹ್ನ 1ರವರೆಗೆ ನಡೆಯಲಿದೆ.

ಕ್ಯಾನ್ಸ‌ರ್ ತಜ್ಞರು: ಸ್ತನದಲ್ಲಿ ಗೆಡ್ಡೆ ಅಥವಾ ಕಿಬ್ಬೊಟ್ಟೆಯಲ್ಲಿ ಮಾಂಸದ ಮುದ್ದೆಯಂತಹ ಊತ. ಮುಟ್ಟಿನ ಬಳಿಕ ದೀರ್ಘಕಾಲದ ರಕ್ತಸ್ರಾವ ಮತ್ತು ಬಿಳಿ ಮುಟ್ಟು. ಆಗಾಗ ಮರುಕಳಿಸುವ ಕೆಮ್ಮು, ಒರಟು ಧ್ವನಿ, ಆಹಾರ ನುಂಗಲು ಕಷ್ಟವಾಗುವುದು ಕೆನ್ನೆ / ನಾಲಿಗೆಯಲ್ಲಿ ಗುಣವಾಗದ ಹುಣ್ಣು ಅಥವಾ ಬೆಳವಣಿಗೆ. ಅಜೀರ್ಣ, ಹಸಿವು ಕಡಿಮೆಯಾಗುವುದು, ಹೊಟ್ಟೆಯಲ್ಲಿ ಕಸಿವಿಸಿ, ದೇಹತೂಕದಲ್ಲಿ ಗಣನೀಯ ಇಳಿತ. ರಕ್ತಹೀನತೆ, ಆಗಾಗ ಕಾಣುವ ಸೋಂಕುಗಳು, ಮೊಳೆ ನೋವು, ರಕ್ತಸ್ರಾವದ ಕುರುಹುಗಳು.

ಹೃದ್ರೋಗ ತಜ್ಞರು: ಹುಟ್ಟಿನಿಂದ ಬರುವ ಹೃದಯದ ಸಮಸ್ಯೆಯಿಂದ ಬಳಲುತ್ತಿರುವವರು. ಹೃದಯದ ರುಮ್ಯಾಟಿಕ್ ಕಾಯಿಲೆಯಿಂದ ಬಳಲುತ್ತಿರುವವರು. ಹೃದಯದ ಪರಿಧಮನಿಯ ಕಾಯಿಲೆಯಿಂದ ಬಳಲುತ್ತಿರುವವರು. ಬೈಪಾಸ್ ಅಥವಾ ತೆರೆದ ಹೃದಯದ ಶಸ್ತ್ರಚಿಕಿತ್ಸೆ ಅಗತ್ಯವಿರುವ ರೋಗಿಗಳು.

ಶಿಬಿರದಲ್ಲಿ ಚರ್ಮ ರೋಗ, ಕಣ್ಣಿನ ತಪಾಸಣೆ, ಮಕ್ಕಳ ತಪಾಸಣೆ, ಕಿವಿ, ಮೂಗು ಮತ್ತು ಗಂಟಲು ತಪಾಸಣೆಯನ್ನು ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕರೆಮಾಡಿ : 9741881399

Related posts

ಬೆಳ್ತಂಗಡಿ: ವಂಚನೆ ಪ್ರಕರಣದಲ್ಲಿ 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಬೆಳ್ತಂಗಡಿ: ಚಿನ್ನಯ್ಯ ಎಸ್.ಐ.ಟಿ ಕಚೇರಿಗೆ ಹಾಜರು

Suddi Udaya

ಮುಂಡಾಜೆಯ ಕವಯತ್ರಿ ಪದ್ಮಾ ಪಿ.ಬೇಡೇಕರ್ ರವರ ದರ್ಪಣ ಕವನ ಸಂಕಲನ ಬಿಡುಗಡೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ಧರ್ಮಸ್ಥಳ: ಕಾರನ್ನು ಅಡ್ಡಗಟ್ಟಿ ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಿಡ್ಲೆ: ದಿ. ಗಣಪತಿ ದೇವಧರ್ ಇವರ ಸ್ಮರಣಾರ್ಥದಲ್ಲಿ “ಪ್ರತಿ ಸ್ವರ್ಗ” ಯಕ್ಷಗಾನ ತಾಳಮದ್ದಳೆ

Suddi Udaya
error: Content is protected !!