July 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 17: ವೇಣೂರುನಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ವೇಣೂರು:ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಕುಂಟಿಕಾನ, ಮಂಗಳೂರು , ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ, ಮಂಗಳೂರು ವೇಣೂರು ಗ್ರಾಮ ಪಂಚಾಯತು ಸಹಯೋಗದೊಂದಿಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವು ಮೇ 17ರಂದು ವೇಣೂರು ಗ್ರಾಮ ಪಂಚಾಯತು ಸಭಾಂಗಣದಲ್ಲಿಬೆಳಿಗ್ಗೆ 09:30 ರಿಂದ ಮಧ್ಯಾಹ್ನ 1ರವರೆಗೆ ನಡೆಯಲಿದೆ.

ಕ್ಯಾನ್ಸ‌ರ್ ತಜ್ಞರು: ಸ್ತನದಲ್ಲಿ ಗೆಡ್ಡೆ ಅಥವಾ ಕಿಬ್ಬೊಟ್ಟೆಯಲ್ಲಿ ಮಾಂಸದ ಮುದ್ದೆಯಂತಹ ಊತ. ಮುಟ್ಟಿನ ಬಳಿಕ ದೀರ್ಘಕಾಲದ ರಕ್ತಸ್ರಾವ ಮತ್ತು ಬಿಳಿ ಮುಟ್ಟು. ಆಗಾಗ ಮರುಕಳಿಸುವ ಕೆಮ್ಮು, ಒರಟು ಧ್ವನಿ, ಆಹಾರ ನುಂಗಲು ಕಷ್ಟವಾಗುವುದು ಕೆನ್ನೆ / ನಾಲಿಗೆಯಲ್ಲಿ ಗುಣವಾಗದ ಹುಣ್ಣು ಅಥವಾ ಬೆಳವಣಿಗೆ. ಅಜೀರ್ಣ, ಹಸಿವು ಕಡಿಮೆಯಾಗುವುದು, ಹೊಟ್ಟೆಯಲ್ಲಿ ಕಸಿವಿಸಿ, ದೇಹತೂಕದಲ್ಲಿ ಗಣನೀಯ ಇಳಿತ. ರಕ್ತಹೀನತೆ, ಆಗಾಗ ಕಾಣುವ ಸೋಂಕುಗಳು, ಮೊಳೆ ನೋವು, ರಕ್ತಸ್ರಾವದ ಕುರುಹುಗಳು.

ಹೃದ್ರೋಗ ತಜ್ಞರು: ಹುಟ್ಟಿನಿಂದ ಬರುವ ಹೃದಯದ ಸಮಸ್ಯೆಯಿಂದ ಬಳಲುತ್ತಿರುವವರು. ಹೃದಯದ ರುಮ್ಯಾಟಿಕ್ ಕಾಯಿಲೆಯಿಂದ ಬಳಲುತ್ತಿರುವವರು. ಹೃದಯದ ಪರಿಧಮನಿಯ ಕಾಯಿಲೆಯಿಂದ ಬಳಲುತ್ತಿರುವವರು. ಬೈಪಾಸ್ ಅಥವಾ ತೆರೆದ ಹೃದಯದ ಶಸ್ತ್ರಚಿಕಿತ್ಸೆ ಅಗತ್ಯವಿರುವ ರೋಗಿಗಳು.

ಶಿಬಿರದಲ್ಲಿ ಚರ್ಮ ರೋಗ, ಕಣ್ಣಿನ ತಪಾಸಣೆ, ಮಕ್ಕಳ ತಪಾಸಣೆ, ಕಿವಿ, ಮೂಗು ಮತ್ತು ಗಂಟಲು ತಪಾಸಣೆಯನ್ನು ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕರೆಮಾಡಿ : 9741881399

Related posts

ಕನ್ಯಾಡಿ ಸೇವಾಭಾರತಿಯಿಂದ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

Suddi Udaya

ಕಾಂಕ್ರೀಟ್ ರಸ್ತೆಯಲ್ಲಿ ಶೇಖರಣೆಗೊಂಡ ಮಣ್ಣು ತೆರವುಗೊಳಿಸಿದ ಯುವಕರು: ಸಾರ್ವಜನಿಕರಿಂದ ಪ್ರಶಂಸೆ

Suddi Udaya

ಉಜಿರೆ ಎಸ್.ಡಿ.ಎಂ. ಪ.ಪೂ. ಕಾಲೇಜು: ಎನ್ಎಸ್ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಮದ್ದಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆ

Suddi Udaya

ವಕೀಲರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಮ್ ಭೇಟಿ

Suddi Udaya
error: Content is protected !!