ಕಾರ್ಕಳ : ಬಜಗೋಳಿಯಲ್ಲಿ ವಲಯ ಮಟ್ಟದ ಭಜನಾ ತರಬೇತಿ ಮತ್ತು ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರ ಕಾರ್ಯಕ್ರಮವನ್ನು ಮೇ16 ರಂದು ಗಣಪತಿ ಸಭಾ ಭವನದಲ್ಲಿ ನಡೆಯಿತು.

ಶಿಬಿರದಲ್ಲಿ 142 ಮಂದಿ ಶಿಬಿರಾರ್ಥಿಗಳು ಭಾಗವಹಿಸಿದ್ದರು.
ಹರಿಶ್ಚಂದ್ರ ತೆಂಡೂಲ್ಕರ್ ರವರು ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರೂಪಾ ಶೆಟ್ಟಿ ಪ್ರವೀಣ್ ಹೆಗ್ಡೆ, ಅನಿಲ್ ಎಸ್ ಪೂಜಾರಿ, ಶ್ರೀಮತಿ ಸೌಮ್ಯ, ಶ್ರೀಮತಿ ಜಯಶ್ರೀ, ಹಿತೇಶ್ ಶೆಟ್ಟಿ, ಶ್ರೀಮತಿ ಸರಸ್ವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳ ಪೋಷಕರು, ಸೇವಾಪ್ರತಿನಿಧಿಗಳು, ಗ್ರಾಮಸ್ಥರು ಗ್ರಾಮಾಭಿವೃದ್ಧಿ ಯೋಜನೆಯ, ಜನಜಾಗ್ರತಿ ವೇದಿಕೆಯ, ಭಜನಾ ಪರಿಷತ್ತಿನ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಸದಾನಂದ ಕೋಟ್ಯಾಯನ್ ಸ್ವಾಗತಿಸಿದರು. ಶ್ರೀಮತಿ ಸುಮಿತ್ರ ಧನ್ಯವಾದವಿತ್ತರು. ಭಜನಾ ಪರಿಷತ್ತಿನ ಜಿಲ್ಲಾ ಸಮನ್ವಯಾಧಿಕಾರಿ ಸಂತೋಷ್ ಪಿ ಕಾರ್ಯಕ್ರಮ ನಿರೂಪಿಸಿದರು.













