August 15, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಇಳಿಯೂರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನಕ್ಕೆ ಸಿಡಿಲು ಬಡಿದು ಹಾನಿ

ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಇಳಿಯೂರು ದೇವಸ್ಥಾನಕ್ಕೆ ಸಿಡಿಲು ಬಡಿದು ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ಮೇ. 16ರ ಶನಿವಾರ ಸಂಜೆ ನಡೆದಿದೆ.

ಮಣಿನಾಲ್ಕೂರು ಗ್ರಾಮದಲ್ಲಿರುವ ಇಳಿಯೂರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ಗರ್ಭಗುಡಿಯ ಪ್ರಾಕಾರಕ್ಕೆ ಸಿಡಿಲು ಬಡಿದಿದ್ದು, ಪರಿಣಾಮ ಸುಮಾರು1 ಕೋಟಿಯಷ್ಟು ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.ಸಂಜೆ ಸುಮಾರು 4.30 ರ ವೇಳೆಗೆ ಸುರಿದ ಗಾಳಿ, ಮಳೆಯ ಜೊತೆಗೆ ಸಿಡಿಲಿನ ಅಬ್ಬರವು ಜೋರಾಗಿತ್ತು. ಭಾರೀ ಪ್ರಮಾಣದಲ್ಲಿ ಬಂದ ಸಿಡಿಲಿನ ಇಳಿಯೂರು ಶ್ರೀವಿಷ್ಣಮೂರ್ತಿ ದೇವಸ್ಥಾನದ ಗರ್ಭ ಗುಡಿಯ ಮೇಲಿನ ಪ್ರಾಕಾರದ ಶಿಲಾ ಕಲ್ಲು ಛಿದ್ರ, ಛಿದ್ರಗೊಂಡು ನೆಲಕ್ಕಪ್ಪಳಿಸಿದೆ.

ಈ ಸಂದರ್ಭದಲ್ಲಿ ದೇವಳದ ಅರ್ಚಕರು ಹೊರಭಾಗದಲ್ಲಿದ್ದುದರಿಂದ ಅವರಿಗೆ ಯಾವುದೇ ರೀತಿಯ ಅಪಾಯವುಂಟಾಗಿಲ್ಲ.ಕಳೆದ ನಾಲ್ಕು ವರ್ಷಗಳ ಹಿಂದೆಯಷ್ಟೆ ದೇವಸ್ಥಾನ ನವೀಕರಣಗೊಂಡು ಬ್ರಹ್ಮಕಲಶೋತ್ಸವ ನಡೆದಿದ್ದು, ಸಿಡಿಲಿಗೆ ದೇವಸ್ಥಾನದ ದೇವರ ಗರ್ಭಗುಡಿಗೂ ಹಾನಿಯಾಗಿದ್ದು,ಕೋಟ್ಯಾಂತರ ರೂ.ನಷ್ಟ ಸಂಭವಿಸಿದೆ. ಸಿಡಿಲು ಬಡಿದ ಕಾರಣದಿಂದ ಮತ್ತೆ ದೇವರ ಗುಡಿಯ ನವೀಕರಣ ಕಾರ್ಯ ನಡೆಯಬೇಕಿದೆ ಎಂದು ಹೇಳಲಾಗುತ್ತಿದೆ. ದೇವಳದ ಆಡಳಿತ ಟ್ರಸ್ಟಿಗಳು ಸೇರಿದಂತೆ ಸ್ಥಳೀಯರು ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಈ ಬಗ್ಗೆ ಕಂದಾಯ ಇಲಾಖೆಗೂ ಮಾಹಿತಿ ನೀಡಲಾಗಿದೆ.

Related posts

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ, ಅಶಕ್ತ ಕುಟುಂಬಕ್ಕೆ ಆರ್ಥಿಕ ನೆರವು,ಮನೆ ಹಸ್ತಾಂತರ

Suddi Udaya

ಮಿತ್ತಬಾಗಿಲು: ಕೊಲ್ಲಿ ಸೇತುವೆ ಬಳಿ ನಿಂತಿದ್ದ ಸ್ಕೂಟಿಗೆ ಬೈಕ್ ಡಿಕ್ಕಿ

Suddi Udaya

ಮಾಲಾಡಿ: ಊರ್ಲ ರಸ್ತೆ ಕಾಂಕ್ರೀಟಿಕರಣಕ್ಕೆ ಒಂದು ಕೋಟಿ ರೂಪಾಯಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನ, ಹತ್ತು ದಿನದೊಳಗೆ ಕಾಮಗಾರಿ ಪ್ರಾರಂಭ

Suddi Udaya

ಬೆಳ್ತಂಗಡಿ ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ಸಂಸ್ಥೆಯಲ್ಲಿ ಆಟಿದ ರಂಗ್ ಕಾರ್ಯಕ್ರಮ

Suddi Udaya

ಧರ್ಮಸಂರಕ್ಷಣ ರಥ ಯಾತ್ರೆಗೆ ಸಾಕ್ಷಿಯಾದ ಸಾವಿರ ಸಾವಿರ ಸಂಖ್ಯೆಯ ಭಕ್ತಾದಿಗಳು: ಉಜಿರೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ದೇವರ ನಾಮಸ್ಮರಣೆಯೊಂದಿಗೆ ಪಾದಯಾತ್ರೆಗೆ ಅದ್ದೂರಿ ಚಾಲನೆ

Suddi Udaya

ಜಿಲ್ಲಾಮಟ್ಟದ ಕನ್ನಡ ಪ್ರಬಂಧ ಸ್ಪರ್ಧೆ: ವೇಣೂರು ಸ. ಪ್ರೌಢ ಶಾಲಾ ವಿದ್ಯಾರ್ಥಿ ಅನ್ವಿತಾ ಎ ಪ್ರಥಮ ಸ್ಥಾನ

Suddi Udaya
error: Content is protected !!