August 15, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಇಳಿಯೂರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನಕ್ಕೆ ಸಿಡಿಲು ಬಡಿದು ಹಾನಿ

ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಇಳಿಯೂರು ದೇವಸ್ಥಾನಕ್ಕೆ ಸಿಡಿಲು ಬಡಿದು ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ಮೇ. 16ರ ಶನಿವಾರ ಸಂಜೆ ನಡೆದಿದೆ.

ಮಣಿನಾಲ್ಕೂರು ಗ್ರಾಮದಲ್ಲಿರುವ ಇಳಿಯೂರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ಗರ್ಭಗುಡಿಯ ಪ್ರಾಕಾರಕ್ಕೆ ಸಿಡಿಲು ಬಡಿದಿದ್ದು, ಪರಿಣಾಮ ಸುಮಾರು1 ಕೋಟಿಯಷ್ಟು ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.ಸಂಜೆ ಸುಮಾರು 4.30 ರ ವೇಳೆಗೆ ಸುರಿದ ಗಾಳಿ, ಮಳೆಯ ಜೊತೆಗೆ ಸಿಡಿಲಿನ ಅಬ್ಬರವು ಜೋರಾಗಿತ್ತು. ಭಾರೀ ಪ್ರಮಾಣದಲ್ಲಿ ಬಂದ ಸಿಡಿಲಿನ ಇಳಿಯೂರು ಶ್ರೀವಿಷ್ಣಮೂರ್ತಿ ದೇವಸ್ಥಾನದ ಗರ್ಭ ಗುಡಿಯ ಮೇಲಿನ ಪ್ರಾಕಾರದ ಶಿಲಾ ಕಲ್ಲು ಛಿದ್ರ, ಛಿದ್ರಗೊಂಡು ನೆಲಕ್ಕಪ್ಪಳಿಸಿದೆ.

ಈ ಸಂದರ್ಭದಲ್ಲಿ ದೇವಳದ ಅರ್ಚಕರು ಹೊರಭಾಗದಲ್ಲಿದ್ದುದರಿಂದ ಅವರಿಗೆ ಯಾವುದೇ ರೀತಿಯ ಅಪಾಯವುಂಟಾಗಿಲ್ಲ.ಕಳೆದ ನಾಲ್ಕು ವರ್ಷಗಳ ಹಿಂದೆಯಷ್ಟೆ ದೇವಸ್ಥಾನ ನವೀಕರಣಗೊಂಡು ಬ್ರಹ್ಮಕಲಶೋತ್ಸವ ನಡೆದಿದ್ದು, ಸಿಡಿಲಿಗೆ ದೇವಸ್ಥಾನದ ದೇವರ ಗರ್ಭಗುಡಿಗೂ ಹಾನಿಯಾಗಿದ್ದು,ಕೋಟ್ಯಾಂತರ ರೂ.ನಷ್ಟ ಸಂಭವಿಸಿದೆ. ಸಿಡಿಲು ಬಡಿದ ಕಾರಣದಿಂದ ಮತ್ತೆ ದೇವರ ಗುಡಿಯ ನವೀಕರಣ ಕಾರ್ಯ ನಡೆಯಬೇಕಿದೆ ಎಂದು ಹೇಳಲಾಗುತ್ತಿದೆ. ದೇವಳದ ಆಡಳಿತ ಟ್ರಸ್ಟಿಗಳು ಸೇರಿದಂತೆ ಸ್ಥಳೀಯರು ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಈ ಬಗ್ಗೆ ಕಂದಾಯ ಇಲಾಖೆಗೂ ಮಾಹಿತಿ ನೀಡಲಾಗಿದೆ.

Related posts

ಶ್ರೀ ರಾಮ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಕೊಯ್ಯೂರು ಸರಕಾರಿ ಪದವಿಪೂರ್ವ ಕಾಲೇಜು ಅಭಿವೃದ್ಧಿ ಬಗ್ಗೆ ಸಮಾಲೋಚನೆ ಸಭೆ

Suddi Udaya

ಮೇಲಂತಬೆಟ್ಟು ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya

ತಾಲೂಕಿನಲ್ಲಿ ಮಾಜಿ ಸೈನಿಕರ ಸಂಘ ಬೆಳ್ತಂಗಡಿ ಇದಕ್ಕೆ ಪರ್ಯಾಯವಾದ ಯಾವುದೇ ಮಾಜಿ ಸೈನಿಕರ ಸಂಘವಿರುವುದಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಮಹಮ್ಮದ್ ರಫೀ ಸ್ವಷ್ಟನೆ

Suddi Udaya

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಬಿರುಸಿನ ಮತ ಪ್ರಚಾರ

Suddi Udaya

ಕುಣಿತ ಭಜನಾ ತರಬೇತುದಾರರಾದ ವಿ ಹರೀಶ್ ನೆರಿಯ ರವರಿಗೆ ಗೌರವದ ಸನ್ಮಾನ

Suddi Udaya
error: Content is protected !!