August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ – ಮಾಹಿತಿ

ಬೆಳ್ತಂಗಡಿ: ರಾಜ್ಯ ಸರಕಾರದ ಆದೇಶದಂತೆ ರಾಜ್ಯದ ಎಲ್ಲ ಕಡೆಗಳಲ್ಲಿ ವ್ಯಾಪಾರ ವ್ಯವಹಾರ ಮಳಿಗೆಗಳಲ್ಲಿ ಅಳವಡಿಸಲಾಗುವ ನಾಮಫಲಕಗಳಲ್ಲಿ 60% ಕನ್ನಡ ಬರಹ ಇರಬೇಕಾಗಿದ್ದು; ಈ ಆದೇಶದ ಅನುಷ್ಠಾನಕ್ಕೆ ಆಡಳಿತ ವ್ಯವಸ್ಥೆಯನ್ನು ಸ್ಥಳೀಯವಾಗಿ ಸಜ್ಜುಗೊಳಿಸಲು ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಮೇ 15ರಂದು ನಡೆದ ತಾಲೂಕಿನ ಗ್ರಾಮ ಪಂಚಾಯತ್‌ಗಳ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಅಗತ್ಯ ಮಾಹಿತಿ ನೀಡಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಜಾಗೃತಿ ಸಮಿತಿಯ ಸದಸ್ಯರಾದ ಜೈಕನ್ನಡಮ್ಮ ಪತ್ರಿಕೆಯ ಸಂಪಾದಕ ದೇವಿಪ್ರಸಾದ್ ಸವಿವರವಾಗಿ ಮಾಹಿತಿ ನೀಡುತ್ತಾ ಬೆಳ್ತಂಗಡಿ ತಾಲೂಕಿನಲ್ಲಿ ಎಲ್ಲಕಡೆ ಕನ್ನಡ ನಾಮಫಲಕಗಳ ಕಡ್ಡಾಯ ಅಳವಡಿಕೆಗೆ ಎಲ್ಲ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಹಕಾರ ಕೋರಿದರಲ್ಲದೇ, ಗ್ರಾಮ ಪಂಚಾಯತ್ ಮಟ್ಟದಲ್ಲಿ ಈ ವಿಚಾರವಾಗಿ ಜಾಗೃತಿ ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳೋಣ ಎಂದರು.


ಮುಂದಿನ ದಿನಗಳಲ್ಲಿ ಅಗತ್ಯ ಇರುವ ಗ್ರಾಮ ಪಂಚಾಯತ್ ವ್ಯಾಪ್ತಿಗೆ ವ್ಯಾಪಾರಸ್ಥರಿಗೆ ನಾಮಫಲಕಗಳಲ್ಲಿ ಕನ್ನಡ ಭಾಷೆ ಅಳವಡಿಕೆ ಬಗ್ಗೆ ತಿಳುವಳಿಕೆ ನೀಡಿ ಜಾಗೃತಿ ಮೂಡಿಸಲು ನೀವು ತಿಳಿಸಿದ ದಿನದಂದು ಬಂದು ಜೊತೆ ಸೇರಲು ನಾನು ಸಿದ್ಧ ಎಂದ ದೇವಿಪ್ರಸಾದ್; ಎಲ್ಲರೂ ಒಟ್ಟು ಸೇರಿ ನಮ್ಮ ರಾಜ್ಯದ ಮಾತೃಭಾಷೆ ಕನ್ನಡವನ್ನು ನಮ್ಮ ದೈನಂದಿನ ವ್ಯವಹಾರದಲ್ಲಿ ಬಳಸಲು ನಮ್ಮಿಂದಾದ ಪ್ರಯತ್ನ ಮಾಡುವ ಮೂಲಕ‌ ಮಾತೃಭಾಷೆ ಋಣವನ್ನು ಕಿಂಚಿತ್ತಾದರೂ ತೀರಿಸೋಣ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಸ್ವಾಗತಿಸಿ, ವಂದಿಸಿದರು.

Related posts

ತಣ್ಣೀರುಪಂತ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 306.80ಕೋಟಿ ವ್ಯವಹಾರ, ರೂ. 1.09 ಕೋಟಿ ಲಾಭ, ಶೇ.12 ಡಿವಿಡೆಂಡ್

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ಕಾಮರ್ಸ್ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ಭಾರಿ ರಿಯಾಯಿತಿ

Suddi Udaya

2000 ರೂ ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ ಬಿಐ ಸೂಚನೆ

Suddi Udaya

ವಿವೇಕಾನಂದ ವಿದ್ಯಾವರ್ಧಕ ಸಂಘದ ಮಹತ್ವಾಕಾಂಕ್ಷಿ ವಾರ್ಷಿಕ ಯೋಜನೆಗಳ ಗ್ರಾಮ ವಿಕಾಸಕ್ಕೆ ಆಯ್ಕೆಯಾದ ಮೊಗ್ರು ಗ್ರಾಮ

Suddi Udaya

ಕೊಕ್ರಾಡಿ ಬೊಳ್ಳಕುಮೇರುನಲ್ಲಿ ಸುಲ್ಕೇರಿ ನದಿಯಲ್ಲಿ ಅಕ್ರಮ ಮರಳು ದಂಧೆ ವೇಣೂರು ಪೊಲೀಸರ ದಾಳಿ – ಡ್ರಜ್ಜಿಂಗ್ ಮಿಶನ್ ವಶ ಇಬ್ಬರ ಮೇಲೆ ಪ್ರಕರಣ ದಾಖಲು

Suddi Udaya

ಅರಸಿನಮಕ್ಕಿ ಶಿವಾನಿ ಸಂಜೀವಿನಿ ಒಕ್ಕೂಟದಲ್ಲಿ ಮೇಣದ ಬತ್ತಿ ಹಾಗೂ ದೀಪದ ಬತ್ತಿ ಮಾಡುವ ಪ್ರಾತ್ಯಕ್ಷಿಕೆ

Suddi Udaya
error: Content is protected !!