August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ – ಮಾಹಿತಿ

ಬೆಳ್ತಂಗಡಿ: ರಾಜ್ಯ ಸರಕಾರದ ಆದೇಶದಂತೆ ರಾಜ್ಯದ ಎಲ್ಲ ಕಡೆಗಳಲ್ಲಿ ವ್ಯಾಪಾರ ವ್ಯವಹಾರ ಮಳಿಗೆಗಳಲ್ಲಿ ಅಳವಡಿಸಲಾಗುವ ನಾಮಫಲಕಗಳಲ್ಲಿ 60% ಕನ್ನಡ ಬರಹ ಇರಬೇಕಾಗಿದ್ದು; ಈ ಆದೇಶದ ಅನುಷ್ಠಾನಕ್ಕೆ ಆಡಳಿತ ವ್ಯವಸ್ಥೆಯನ್ನು ಸ್ಥಳೀಯವಾಗಿ ಸಜ್ಜುಗೊಳಿಸಲು ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಮೇ 15ರಂದು ನಡೆದ ತಾಲೂಕಿನ ಗ್ರಾಮ ಪಂಚಾಯತ್‌ಗಳ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಅಗತ್ಯ ಮಾಹಿತಿ ನೀಡಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಜಾಗೃತಿ ಸಮಿತಿಯ ಸದಸ್ಯರಾದ ಜೈಕನ್ನಡಮ್ಮ ಪತ್ರಿಕೆಯ ಸಂಪಾದಕ ದೇವಿಪ್ರಸಾದ್ ಸವಿವರವಾಗಿ ಮಾಹಿತಿ ನೀಡುತ್ತಾ ಬೆಳ್ತಂಗಡಿ ತಾಲೂಕಿನಲ್ಲಿ ಎಲ್ಲಕಡೆ ಕನ್ನಡ ನಾಮಫಲಕಗಳ ಕಡ್ಡಾಯ ಅಳವಡಿಕೆಗೆ ಎಲ್ಲ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಹಕಾರ ಕೋರಿದರಲ್ಲದೇ, ಗ್ರಾಮ ಪಂಚಾಯತ್ ಮಟ್ಟದಲ್ಲಿ ಈ ವಿಚಾರವಾಗಿ ಜಾಗೃತಿ ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳೋಣ ಎಂದರು.


ಮುಂದಿನ ದಿನಗಳಲ್ಲಿ ಅಗತ್ಯ ಇರುವ ಗ್ರಾಮ ಪಂಚಾಯತ್ ವ್ಯಾಪ್ತಿಗೆ ವ್ಯಾಪಾರಸ್ಥರಿಗೆ ನಾಮಫಲಕಗಳಲ್ಲಿ ಕನ್ನಡ ಭಾಷೆ ಅಳವಡಿಕೆ ಬಗ್ಗೆ ತಿಳುವಳಿಕೆ ನೀಡಿ ಜಾಗೃತಿ ಮೂಡಿಸಲು ನೀವು ತಿಳಿಸಿದ ದಿನದಂದು ಬಂದು ಜೊತೆ ಸೇರಲು ನಾನು ಸಿದ್ಧ ಎಂದ ದೇವಿಪ್ರಸಾದ್; ಎಲ್ಲರೂ ಒಟ್ಟು ಸೇರಿ ನಮ್ಮ ರಾಜ್ಯದ ಮಾತೃಭಾಷೆ ಕನ್ನಡವನ್ನು ನಮ್ಮ ದೈನಂದಿನ ವ್ಯವಹಾರದಲ್ಲಿ ಬಳಸಲು ನಮ್ಮಿಂದಾದ ಪ್ರಯತ್ನ ಮಾಡುವ ಮೂಲಕ‌ ಮಾತೃಭಾಷೆ ಋಣವನ್ನು ಕಿಂಚಿತ್ತಾದರೂ ತೀರಿಸೋಣ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಸ್ವಾಗತಿಸಿ, ವಂದಿಸಿದರು.

Related posts

ತುಳುವ ಮಹಾಸಭೆ ಬೆಳ್ತಂಗಡಿ ತಾಲೂಕು ಸಂಚಾಲಕರಾಗಿ ಡಾ. ದಿವ ಕೊಕ್ಕಡ ಆಯ್ಕೆ

Suddi Udaya

ಬಳಂಜ ಗ್ರಾ.ಪಂ. ನಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಯಲ್ಲಿ ಭಿತ್ತಿಪತ್ರಿಕೆ ಅನಾವರಣ

Suddi Udaya

ರುಡ್‌ಸೆಟ್ ಉಜಿರೆಯಲ್ಲಿ ಅಣಬೆ ಬೇಸಾಯ ತರಬೇತಿ ಸಮಾರೋಪ

Suddi Udaya

ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ಹೊಸ ಮನೆಯ ಆಶೀರ್ವಚನ ಮತ್ತು ಹಸ್ತಾಂತರ ಕಾರ್ಯಕ್ರಮ

Suddi Udaya
error: Content is protected !!