27.7 C
ಪುತ್ತೂರು, ಬೆಳ್ತಂಗಡಿ
May 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿಸಿ ಕ್ಯಾಮೆರಾ ಮೂಲಕ ಸುಲಭ ಕಾರ್ಯಾಚರಣೆ: ಹೆದ್ದಾರಿ ಬದಿ ತಾತ್ಕಾಲಿಕ ಅಂಗಡಿಯನ್ನು ತೆರವುಗೊಳಿಸಿದ ಪಿಡಿಒ

ಬೆಳ್ತಂಗಡಿ: ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿಡಿಗಲ್- ಸೋಮಂತಡ್ಕ ರಸ್ತೆಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿರುವುದು ಸುಲಭ ಕಾರ್ಯಚರಣೆಯೊಂದಕ್ಕೆ ಸಾಕ್ಷಿಯಾಯಿತು.

ಇಂದು (ಮೇ16) ಬೆಳಗ್ಗೆ ಈ ರಾಷ್ಟ್ರೀಯ ಹೆದ್ದಾರಿ ಬದಿ ತಾತ್ಕಾಲಿಕ ಅಂಗಡಿಯೊಂದು ತಲೆ ಎತ್ತುತ್ತಿದ್ದಂತೆ ಸಿಸಿ ಕ್ಯಾಮೆರಾ ಮೂಲಕ ಈ ದೃಶ್ಯಗಳು ಸೆರೆಯಾದವು. ತಮ್ಮ ಮೊಬೈಲ್ ನಲ್ಲಿ ಇದನ್ನು ಗಮನಿಸಿದ ಪಿಡಿಒ ತಕ್ಷಣ ಅಂಗಡಿಯನ್ನು ತೆರವುಗೊಳಿಸುವ ಕಾರ್ಯಚರಣೆ ನಡೆಸಿದರು. ಜನ ವಾಹನ ದಟ್ಟಣೆ ಹೆಚ್ಚುವ ಮೊದಲೇ ಪಂಚಾಯಿತಿ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಅಂಗಡಿಯನ್ನು ತೆರವುಗೊಳಿಸುವ ಕ್ರಮಕೈಗೊಂಡರು. ಹೆದ್ದಾರಿ ಬದಿ ತಾತ್ಕಾಲಿಕ ಅಂಗಡಿಗಳನ್ನು ನಿರ್ಮಿಸಲು ಪಂಚಾಯಿತಿ ಯಾವುದೇ ಅವಕಾಶ ನೀಡುವುದಿಲ್ಲ. ಇಂತಹ ಅಂಗಡಿಗಳು ಗ್ರಾಮ ಪಂಚಾಯತಿ ವ್ಯಾಪ್ತಿಯ ರಸ್ತೆ ಬದಿ ಕಂಡು ಬಂದರೆ ತಕ್ಷಣ ಮಾಹಿತಿ ನೀಡುವಂತೆ ಪಿಡಿಒ ಗಾಯತ್ರಿ ತಿಳಿಸಿದ್ದಾರೆ.

ನಿಡಿಗಲ್-ಸೋಮಂತಡ್ಕ ಪ್ರದೇಶದ 4 ಕಿ.ಮೀ. ರಸ್ತೆ ವ್ಯಾಪ್ತಿಯಲ್ಲಿ 5 ಸಿಸಿ ಕ್ಯಾಮರಾಗಳು ಕಾರ್ಯನಿರ್ವಹಿಸುತ್ತಿದ್ದು ಇದು ಅನಗತ್ಯ ಚಟುವಟಿಕೆಗಳಿಗೆ ಕಡಿವಾಣ ಹಾಕಲು ತ್ಯಾಜ್ಯ ತಂದು ಹಾಕುವವರನ್ನು ಗಮನಿಸಲು ಸುಲಭವಾಗಿದೆ ಕಳೆದ ಮೂರು ದಿನಗಳ ಹಿಂದೆ ಅರಣ್ಯ ಪ್ರದೇಶದ ಮೂಲಕ ಹಾದು ಹೋಗುವ ಈ ರಸ್ತೆಯ 3 ಕಡೆಗಳಲ್ಲಿ ಹೊಸದಾಗಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.

Related posts

ಪುದುವೆಟ್ಟು: ಅಕ್ರಮ ಮರಳು ಅಡ್ಡೆ‌ಗೆ ಧರ್ಮಸ್ಥಳ ಪೊಲೀಸ್ ದಾಳಿ

Suddi Udaya

ಉಜಿರೆ: ಶ್ರೀ ಧ.ಮಂ. ಸ್ನಾತಕೋತ್ತರ ಕಾಲೇಜಿನಲ್ಲಿ ಮಹಿಳಾ ಉದ್ಯಮಿಗಳ ಅವಕಾಶಗಳು ಹಾಗೂ ಅವರು ಎದುರಿಸುತ್ತಿರುವ ಸವಾಲುಗಳ ಕುರಿತು ಕ್ಯಾಂಡಿಡ್ ಟಾಕ್ ಕಾರ್ಯಕ್ರಮ

Suddi Udaya

ಭಾರತೀಯ ಭೂಸೇನೆ ತರಬೇತಿ ಮುಗಿಸಿ ಕಳೆಂಜಕ್ಕೆ ಆಗಮಿಸಿದ ಪುಷ್ಪರಾಜ್ ರವರಿಗೆ ಕೊಕ್ಕಡದಲ್ಲಿ ಸ್ವಾಗತ

Suddi Udaya

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲೆಯ ಶಿಕ್ಷಕಿ ಅಕ್ಕಮ್ಮ ರವರಿಗೆ ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ನಡೆದ ಕಣಿಯೂರು ಮಹಾಶಕ್ತಿ ಕೇಂದ್ರ ಸಭೆ

Suddi Udaya
error: Content is protected !!