August 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 17: ವೇಣೂರುನಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ವೇಣೂರು:ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಕುಂಟಿಕಾನ, ಮಂಗಳೂರು , ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ, ಮಂಗಳೂರು ವೇಣೂರು ಗ್ರಾಮ ಪಂಚಾಯತು ಸಹಯೋಗದೊಂದಿಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವು ಮೇ 17ರಂದು ವೇಣೂರು ಗ್ರಾಮ ಪಂಚಾಯತು ಸಭಾಂಗಣದಲ್ಲಿಬೆಳಿಗ್ಗೆ 09:30 ರಿಂದ ಮಧ್ಯಾಹ್ನ 1ರವರೆಗೆ ನಡೆಯಲಿದೆ.

ಕ್ಯಾನ್ಸ‌ರ್ ತಜ್ಞರು: ಸ್ತನದಲ್ಲಿ ಗೆಡ್ಡೆ ಅಥವಾ ಕಿಬ್ಬೊಟ್ಟೆಯಲ್ಲಿ ಮಾಂಸದ ಮುದ್ದೆಯಂತಹ ಊತ. ಮುಟ್ಟಿನ ಬಳಿಕ ದೀರ್ಘಕಾಲದ ರಕ್ತಸ್ರಾವ ಮತ್ತು ಬಿಳಿ ಮುಟ್ಟು. ಆಗಾಗ ಮರುಕಳಿಸುವ ಕೆಮ್ಮು, ಒರಟು ಧ್ವನಿ, ಆಹಾರ ನುಂಗಲು ಕಷ್ಟವಾಗುವುದು ಕೆನ್ನೆ / ನಾಲಿಗೆಯಲ್ಲಿ ಗುಣವಾಗದ ಹುಣ್ಣು ಅಥವಾ ಬೆಳವಣಿಗೆ. ಅಜೀರ್ಣ, ಹಸಿವು ಕಡಿಮೆಯಾಗುವುದು, ಹೊಟ್ಟೆಯಲ್ಲಿ ಕಸಿವಿಸಿ, ದೇಹತೂಕದಲ್ಲಿ ಗಣನೀಯ ಇಳಿತ. ರಕ್ತಹೀನತೆ, ಆಗಾಗ ಕಾಣುವ ಸೋಂಕುಗಳು, ಮೊಳೆ ನೋವು, ರಕ್ತಸ್ರಾವದ ಕುರುಹುಗಳು.

ಹೃದ್ರೋಗ ತಜ್ಞರು: ಹುಟ್ಟಿನಿಂದ ಬರುವ ಹೃದಯದ ಸಮಸ್ಯೆಯಿಂದ ಬಳಲುತ್ತಿರುವವರು. ಹೃದಯದ ರುಮ್ಯಾಟಿಕ್ ಕಾಯಿಲೆಯಿಂದ ಬಳಲುತ್ತಿರುವವರು. ಹೃದಯದ ಪರಿಧಮನಿಯ ಕಾಯಿಲೆಯಿಂದ ಬಳಲುತ್ತಿರುವವರು. ಬೈಪಾಸ್ ಅಥವಾ ತೆರೆದ ಹೃದಯದ ಶಸ್ತ್ರಚಿಕಿತ್ಸೆ ಅಗತ್ಯವಿರುವ ರೋಗಿಗಳು.

ಶಿಬಿರದಲ್ಲಿ ಚರ್ಮ ರೋಗ, ಕಣ್ಣಿನ ತಪಾಸಣೆ, ಮಕ್ಕಳ ತಪಾಸಣೆ, ಕಿವಿ, ಮೂಗು ಮತ್ತು ಗಂಟಲು ತಪಾಸಣೆಯನ್ನು ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕರೆಮಾಡಿ : 9741881399

Related posts

ಬಂಗ್ವಾಡಿ ಬಸದಿ ಶ್ರೀ ಶಾಂತಿನಾಥ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ಮಹಾರಥೋತ್ಸವ: ಧ್ವಜಾರೋಹಣ

Suddi Udaya

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಶ್ರೀನಿವಾಸ್ ಭಟ್ ನಿಧನ

Suddi Udaya

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ : ಇಬ್ಬರು ವಿದ್ಯಾರ್ಥಿಗಳು Quest Global ಸಂಸ್ಥೆಯ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ಧರ್ಮಸ್ಥಳದ ಬುರುಡೆ ಷಡ್ಯಂತ್ರದಲ್ಲಿ ಯೂಟ್ಯೂಬರ್ ಗಳ ಕೈವಾಡ : ಪ್ರಶಾಂತ್ ಸಂಬರಗಿಯಿಂದ ಎಸ್.ಐ.ಟಿಗೆ ದೂರು

Suddi Udaya

ನಾಳೆಯಿಂದ ಬಂಡಾಜೆ ಜಲಪಾತ ವೀಕ್ಷಣೆಗೆ ಅವಕಾಶ

Suddi Udaya

ಡಿ.13-14: ಅಮೃತ ಮಹೋತ್ಸವದ ಸಂಭ್ರಮದಲ್ಲಿರುವ ಕೊಯ್ಯೂರು ಶಾಲೆ: ಮೋಹನ್ ಕುಮಾರ್ ನೇತೃತ್ವದಲ್ಲಿ ಬದುಕು ಕಟ್ಟೋಣ ಬನ್ನಿ ತಂಡದಿಂದ ಕೊಡುಗೆಗಳ ಹಸ್ತಾಂತರ

Suddi Udaya
error: Content is protected !!