July 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 17: ವೇಣೂರುನಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ವೇಣೂರು:ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಕುಂಟಿಕಾನ, ಮಂಗಳೂರು , ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ, ಮಂಗಳೂರು ವೇಣೂರು ಗ್ರಾಮ ಪಂಚಾಯತು ಸಹಯೋಗದೊಂದಿಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವು ಮೇ 17ರಂದು ವೇಣೂರು ಗ್ರಾಮ ಪಂಚಾಯತು ಸಭಾಂಗಣದಲ್ಲಿಬೆಳಿಗ್ಗೆ 09:30 ರಿಂದ ಮಧ್ಯಾಹ್ನ 1ರವರೆಗೆ ನಡೆಯಲಿದೆ.

ಕ್ಯಾನ್ಸ‌ರ್ ತಜ್ಞರು: ಸ್ತನದಲ್ಲಿ ಗೆಡ್ಡೆ ಅಥವಾ ಕಿಬ್ಬೊಟ್ಟೆಯಲ್ಲಿ ಮಾಂಸದ ಮುದ್ದೆಯಂತಹ ಊತ. ಮುಟ್ಟಿನ ಬಳಿಕ ದೀರ್ಘಕಾಲದ ರಕ್ತಸ್ರಾವ ಮತ್ತು ಬಿಳಿ ಮುಟ್ಟು. ಆಗಾಗ ಮರುಕಳಿಸುವ ಕೆಮ್ಮು, ಒರಟು ಧ್ವನಿ, ಆಹಾರ ನುಂಗಲು ಕಷ್ಟವಾಗುವುದು ಕೆನ್ನೆ / ನಾಲಿಗೆಯಲ್ಲಿ ಗುಣವಾಗದ ಹುಣ್ಣು ಅಥವಾ ಬೆಳವಣಿಗೆ. ಅಜೀರ್ಣ, ಹಸಿವು ಕಡಿಮೆಯಾಗುವುದು, ಹೊಟ್ಟೆಯಲ್ಲಿ ಕಸಿವಿಸಿ, ದೇಹತೂಕದಲ್ಲಿ ಗಣನೀಯ ಇಳಿತ. ರಕ್ತಹೀನತೆ, ಆಗಾಗ ಕಾಣುವ ಸೋಂಕುಗಳು, ಮೊಳೆ ನೋವು, ರಕ್ತಸ್ರಾವದ ಕುರುಹುಗಳು.

ಹೃದ್ರೋಗ ತಜ್ಞರು: ಹುಟ್ಟಿನಿಂದ ಬರುವ ಹೃದಯದ ಸಮಸ್ಯೆಯಿಂದ ಬಳಲುತ್ತಿರುವವರು. ಹೃದಯದ ರುಮ್ಯಾಟಿಕ್ ಕಾಯಿಲೆಯಿಂದ ಬಳಲುತ್ತಿರುವವರು. ಹೃದಯದ ಪರಿಧಮನಿಯ ಕಾಯಿಲೆಯಿಂದ ಬಳಲುತ್ತಿರುವವರು. ಬೈಪಾಸ್ ಅಥವಾ ತೆರೆದ ಹೃದಯದ ಶಸ್ತ್ರಚಿಕಿತ್ಸೆ ಅಗತ್ಯವಿರುವ ರೋಗಿಗಳು.

ಶಿಬಿರದಲ್ಲಿ ಚರ್ಮ ರೋಗ, ಕಣ್ಣಿನ ತಪಾಸಣೆ, ಮಕ್ಕಳ ತಪಾಸಣೆ, ಕಿವಿ, ಮೂಗು ಮತ್ತು ಗಂಟಲು ತಪಾಸಣೆಯನ್ನು ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕರೆಮಾಡಿ : 9741881399

Related posts

ಲಾಯಿಲ: ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಅಳದಂಗಡಿಯ ನಿಯತಿ ಯು. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಅಪಾಯಕಾರಿಯಾಗಿ ವೀಲಿಂಗ್ ಮಾಡುತ್ತಿದ್ದವನ ಹೆಡೆಮುರಿ ಕಟ್ಟಿದ ಬೆಳ್ತಂಗಡಿ ಸಂಚಾರಿ ಪೊಲೀಸರು

Suddi Udaya

ಧರ್ಮಸ್ಥಳ: ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೊಕ್ಕಡ: ಶಾಲೆತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಚಾರ್ಮಾಡಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಗಣೇಶ್ ಕೋಟ್ಯಾನ್ ಆಯ್ಕೆ

Suddi Udaya
error: Content is protected !!