August 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿಶ್ರುತಿ 2k26’ ಕಾರ್ಯಕ್ರಮ

ಬೆಳ್ತಂಗಡಿ: ಕಾಲೇಜಿನ ಐಕ್ಯುಎಸಿ ಮತ್ತು ಮಾನವಿಕ ಸಂಘ ಇವುಗಳ ಆಶ್ರಯದಲ್ಲಿ ಕಲಾವಿದ ವಿದ್ಯಾರ್ಥಿಗಳಿಗಾಗಿ ವಿಶೃತಿ 2k26 ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಉದ್ಘಾಟನೆಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಕಲಾ ವಿಭಾಗದ ಡೀನ್ ಹಾಗೂ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ. ಭಾಸ್ಕರ್ ಹೆಗಡೆ ಉದ್ಘಾಟಿಸಿ ಮಾತನಾಡಿ ಕಲಾವಿಭಾಗದ ವಿದ್ಯಾರ್ಥಿಗಳಿಗೆ ಉತ್ತೇಜನವನ್ನು ನೀಡಲು ಹಾಗೂ ಅವರ ಪ್ರತಿಭೆಗಳಿಗೆ ರಚನಾತ್ಮಕ ದೃಷ್ಟಿಕೋನವನ್ನು ನೀಡಲು ಈ ರೀತಿಯ ಕಾರ್ಯಕ್ರಮಗಳು ಅತ್ಯಂತ ಉಪಕಾರಿ. ಕಲಾವಿಭಾಗದ ವಿದ್ಯಾರ್ಥಿಗಳು ವಾಣಿಜ್ಯ ಮತ್ತು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಿಂತಲೂ ಹೆಚ್ಚಿನ ಅವಕಾಶಗಳನ್ನು ಹೊಂದಿದ್ದಾರೆ ಅವುಗಳನ್ನು ಸದುಪಯೋಗಪಡಿಸಿಕೊಳ್ಳಲು ಈ ರೀತಿಯ ಕಾರ್ಯಕ್ರಮ ಸಹಕಾರಿಯಾಗಿದೆ ಎಂಬುದನ್ನು ಅನೇಕ ಉದಾಹರಣೆಗಳ ಮುಖಾಂತರ ತಿಳಿಸಿದರು.

ಮಾನವಿಕ ಸಂಘದ ಸಂಯೋಜಕರಾದ ಪ್ರೊ. ರೊನಾಲ್ಡ್ ಪ್ರವೀಣ್ ಕೊರಾಯ ಇವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ ನಾವು ವಿದ್ಯಾರ್ಥಿಗಳಿಗೆ ಉತ್ತಮವಾದ ಶೈಕ್ಷಣಿಕ ವಾತಾವರಣವನ್ನು ನಿರ್ಮಿಸಿದಾಗ ಅವರು ಉತ್ತಮ ಸಾಧನೆಗಳನ್ನು ಮಾಡಲು ಅನುಕೂಲವಾಗುತ್ತದೆ ಹಾಗಾಗಿ ಈ ರೀತಿಯ ಕಾರ್ಯಕ್ರಮಗಳ ಮುಖಾಂತರ ವಿದ್ಯಾರ್ಥಿಗಳಿಗೆ ಉತ್ತಮವಾದ ಕಲಿಕೆಯ ವಾತಾವರಣವನ್ನು ನಿರ್ಮಾಣ ಮಾಡಲು ಸಾಧ್ಯ ಎಂದು ತಿಳಿಸಿದರು.

ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನ ಅಧಿಕಾರಿ ಪ್ರೊ. ಪದ್ಮನಾಭ ಕೆ., ಅಧ್ಯಕ್ಷತೆಯನ್ನು ವಹಿಸಿ ಇಂದಿನ ಅನೇಕ ಅಧಿಕಾರಿ ವರ್ಗದವರು ಐಎಎಸ್ ಮತ್ತು ಕೆಎಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವವರು ಕಲಾವಿಭಾಗದ ವಿದ್ಯಾರ್ಥಿಗಳು ಹೆಚ್ಚು. ಹಾಗಾಗಿ ಕಲಾವಿಭಾಗದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಮಾಡಲು ಈ ರೀತಿಯ ಕಾರ್ಯಕ್ರಮಗಳು ಅನುಕೂಲಕರ ಎಂದು ತಿಳಿಸಿದರು.

ವೇದಿಕೆಯಲ್ಲಿ ಇತಿಹಾಸ ವಿಭಾಗದ ಮುಖ್ಯಸ್ಥರಾದ ಪ್ರೊ. ಕವಿತಾ ಹಾಗೂ ಸ್ನಾತ್ತಕೋತ್ತರ ವಿಭಾಗದ ಸಂಚಾಲಕರಾದ ಡಾ. ರವಿ ಎಂ ಎನ್. ಉಪಸ್ಥಿತರಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ಮಾರುತಿ ಅತಿಥಿಗಳನ್ನು ಸ್ವಾಗತಿಸಿ ಉದ್ಘಾಟಕರ ಪರಿಚಯ ಮಾಡಿದರು. ಅಂತಿಮ ಬಿಎ ವಿದ್ಯಾರ್ಥಿ ಜಗದೀಶ್ ಹಾಗೂ ದ್ವಿತೀಯ ಬಿಎ ವಿದ್ಯಾರ್ಥಿನಿ ನಸೀಬಾ ಕಾರ್ಯಕ್ರಮವನ್ನು ನಿರೂಪಿಸಿದರು. ಮಾನವಿಕ ಸಂಘದ ಪದಾಧಿಕಾರಿಗಳಾದ ಚೇತನ್ ಹಾಗೂ ಅರ್ಪಿತ ವೇದಿಕೆಯಲ್ಲಿದ್ದರು. ಅರ್ಪಿತ ವಂದಿಸಿದರು.
ಕಾರ್ಯಕ್ರಮದಲ್ಲಿ ಅಂತರ್ತರಗತಿ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ದ್ವಿತೀಯ ಬಿಕಾಂನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡು, ದ್ವಿತೀಯ ಬಿಎ ವಿದ್ಯಾರ್ಥಿಗಳು ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದರು.

Related posts

ಗುರುವಾಯನಕೆರೆ ಶ್ರೀ ಪತಂಜಲಿ ಯೋಗ ಶಿಕ್ಷಣ ಶಾಖೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಕುಮಾರವ್ಯಾಸ ನಮನ, ಮುದ್ದಣ ಸ್ಮರಣೆ

Suddi Udaya

ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ಪ್ರಾರ್ಥನ ಶೆಟ್ಟಿ ರಾಜ್ಯಕ್ಕೆ ಎರಡನೇ ಸ್ಥಾನ, ವಾಣಿಜ್ಯ ವಿಭಾಗದಲ್ಲಿ ಪ್ರೇರಣ ರಾಮಚಂದ್ರ ಹೆಗಡೆ ರಾಜ್ಯಕ್ಕೆ ತೃತೀಯ ಸ್ಥಾನ

Suddi Udaya

ಸಿಎ ಪರೀಕ್ಷೆಯಲ್ಲಿ ಕಿನ್ನಿಗೋಳಿ ರಾಹುಲ್ ಉತ್ತೀರ್ಣ

Suddi Udaya

ಧರ್ಮಸ್ಥಳ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆಯ ಶ್ರೀ ರಾಮ ಮಂದಿರದ ಉದ್ಘಾಟನೆಯ ಆಹ್ವಾನ ಪತ್ರಿಕೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಮಂಡಳಿಗೆ ಸದಸ್ಯರ ನೇಮಕ : ದಾಖಲೆಗಳನ್ನು ಹಾಜರು ಪಡಿಸುವಂತೆ ಹೈಕೋರ್ಟ್ ಸೂಚನೆ

Suddi Udaya
error: Content is protected !!