33.6 C
ಪುತ್ತೂರು, ಬೆಳ್ತಂಗಡಿ
May 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿಸಿ ಕ್ಯಾಮೆರಾ ಮೂಲಕ ಸುಲಭ ಕಾರ್ಯಾಚರಣೆ: ಹೆದ್ದಾರಿ ಬದಿ ತಾತ್ಕಾಲಿಕ ಅಂಗಡಿಯನ್ನು ತೆರವುಗೊಳಿಸಿದ ಪಿಡಿಒ

ಬೆಳ್ತಂಗಡಿ: ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿಡಿಗಲ್- ಸೋಮಂತಡ್ಕ ರಸ್ತೆಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿರುವುದು ಸುಲಭ ಕಾರ್ಯಚರಣೆಯೊಂದಕ್ಕೆ ಸಾಕ್ಷಿಯಾಯಿತು.

ಇಂದು (ಮೇ16) ಬೆಳಗ್ಗೆ ಈ ರಾಷ್ಟ್ರೀಯ ಹೆದ್ದಾರಿ ಬದಿ ತಾತ್ಕಾಲಿಕ ಅಂಗಡಿಯೊಂದು ತಲೆ ಎತ್ತುತ್ತಿದ್ದಂತೆ ಸಿಸಿ ಕ್ಯಾಮೆರಾ ಮೂಲಕ ಈ ದೃಶ್ಯಗಳು ಸೆರೆಯಾದವು. ತಮ್ಮ ಮೊಬೈಲ್ ನಲ್ಲಿ ಇದನ್ನು ಗಮನಿಸಿದ ಪಿಡಿಒ ತಕ್ಷಣ ಅಂಗಡಿಯನ್ನು ತೆರವುಗೊಳಿಸುವ ಕಾರ್ಯಚರಣೆ ನಡೆಸಿದರು. ಜನ ವಾಹನ ದಟ್ಟಣೆ ಹೆಚ್ಚುವ ಮೊದಲೇ ಪಂಚಾಯಿತಿ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಅಂಗಡಿಯನ್ನು ತೆರವುಗೊಳಿಸುವ ಕ್ರಮಕೈಗೊಂಡರು. ಹೆದ್ದಾರಿ ಬದಿ ತಾತ್ಕಾಲಿಕ ಅಂಗಡಿಗಳನ್ನು ನಿರ್ಮಿಸಲು ಪಂಚಾಯಿತಿ ಯಾವುದೇ ಅವಕಾಶ ನೀಡುವುದಿಲ್ಲ. ಇಂತಹ ಅಂಗಡಿಗಳು ಗ್ರಾಮ ಪಂಚಾಯತಿ ವ್ಯಾಪ್ತಿಯ ರಸ್ತೆ ಬದಿ ಕಂಡು ಬಂದರೆ ತಕ್ಷಣ ಮಾಹಿತಿ ನೀಡುವಂತೆ ಪಿಡಿಒ ಗಾಯತ್ರಿ ತಿಳಿಸಿದ್ದಾರೆ.

ನಿಡಿಗಲ್-ಸೋಮಂತಡ್ಕ ಪ್ರದೇಶದ 4 ಕಿ.ಮೀ. ರಸ್ತೆ ವ್ಯಾಪ್ತಿಯಲ್ಲಿ 5 ಸಿಸಿ ಕ್ಯಾಮರಾಗಳು ಕಾರ್ಯನಿರ್ವಹಿಸುತ್ತಿದ್ದು ಇದು ಅನಗತ್ಯ ಚಟುವಟಿಕೆಗಳಿಗೆ ಕಡಿವಾಣ ಹಾಕಲು ತ್ಯಾಜ್ಯ ತಂದು ಹಾಕುವವರನ್ನು ಗಮನಿಸಲು ಸುಲಭವಾಗಿದೆ ಕಳೆದ ಮೂರು ದಿನಗಳ ಹಿಂದೆ ಅರಣ್ಯ ಪ್ರದೇಶದ ಮೂಲಕ ಹಾದು ಹೋಗುವ ಈ ರಸ್ತೆಯ 3 ಕಡೆಗಳಲ್ಲಿ ಹೊಸದಾಗಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.

Related posts

ಕುವೆಟ್ಟು: ಸ.ಹಿ.ಪ್ರಾ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಉರುವಾಲುಪದವು ಶಿವಾಜಿನಗರ ಶ್ರೀ ಮಹಮ್ಮಾಯಿ ಶ್ರೀ ದೇವಿಯ ಪ್ರತಿಷ್ಠಾ ಮಹೋತ್ಸವ: ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠೆ, ನವಕ ಕಲಶಾಭಿಷೇಕ

Suddi Udaya

ಬೆಳ್ತಂಗಡಿ ಹಳೆಕೋಟೆ ಸಮೀಪ ಧರೆಗುರುಳಿದ ಬೃಹತ್ ಮರ

Suddi Udaya

ಕಾವಳಕಟ್ಟೆ ವಲಯ ಬಂಟರ ಸಂಘದಿಂದ ಸಮಾಜಮುಖಿ ಚಿಂತನಾ ಕಾರ್ಯಕ್ರಮ

Suddi Udaya

ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯ ಹಳೆ ವಿದ್ಯಾರ್ಥಿನಿ ಡಾ| ಶಿವಾನಿ ಎಂ.ಡಿ ರವರಿಗೆ ಅಭಿನಂದನ ಕಾರ್ಯಕ್ರಮ

Suddi Udaya

ಶಿಶಿಲ ಅಂಗನವಾಡಿ ಕೇಂದ್ರಕ್ಕೆ ಬ್ಯಾಂಕ್ ಆಫ್ ಬರೋಡದಿಂದ ಕುರ್ಚಿ ಹಾಗೂ ಮೇಜು ಕೊಡುಗೆ

Suddi Udaya
error: Content is protected !!