July 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 17: ವೇಣೂರುನಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ವೇಣೂರು:ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಕುಂಟಿಕಾನ, ಮಂಗಳೂರು , ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ, ಮಂಗಳೂರು ವೇಣೂರು ಗ್ರಾಮ ಪಂಚಾಯತು ಸಹಯೋಗದೊಂದಿಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವು ಮೇ 17ರಂದು ವೇಣೂರು ಗ್ರಾಮ ಪಂಚಾಯತು ಸಭಾಂಗಣದಲ್ಲಿಬೆಳಿಗ್ಗೆ 09:30 ರಿಂದ ಮಧ್ಯಾಹ್ನ 1ರವರೆಗೆ ನಡೆಯಲಿದೆ.

ಕ್ಯಾನ್ಸ‌ರ್ ತಜ್ಞರು: ಸ್ತನದಲ್ಲಿ ಗೆಡ್ಡೆ ಅಥವಾ ಕಿಬ್ಬೊಟ್ಟೆಯಲ್ಲಿ ಮಾಂಸದ ಮುದ್ದೆಯಂತಹ ಊತ. ಮುಟ್ಟಿನ ಬಳಿಕ ದೀರ್ಘಕಾಲದ ರಕ್ತಸ್ರಾವ ಮತ್ತು ಬಿಳಿ ಮುಟ್ಟು. ಆಗಾಗ ಮರುಕಳಿಸುವ ಕೆಮ್ಮು, ಒರಟು ಧ್ವನಿ, ಆಹಾರ ನುಂಗಲು ಕಷ್ಟವಾಗುವುದು ಕೆನ್ನೆ / ನಾಲಿಗೆಯಲ್ಲಿ ಗುಣವಾಗದ ಹುಣ್ಣು ಅಥವಾ ಬೆಳವಣಿಗೆ. ಅಜೀರ್ಣ, ಹಸಿವು ಕಡಿಮೆಯಾಗುವುದು, ಹೊಟ್ಟೆಯಲ್ಲಿ ಕಸಿವಿಸಿ, ದೇಹತೂಕದಲ್ಲಿ ಗಣನೀಯ ಇಳಿತ. ರಕ್ತಹೀನತೆ, ಆಗಾಗ ಕಾಣುವ ಸೋಂಕುಗಳು, ಮೊಳೆ ನೋವು, ರಕ್ತಸ್ರಾವದ ಕುರುಹುಗಳು.

ಹೃದ್ರೋಗ ತಜ್ಞರು: ಹುಟ್ಟಿನಿಂದ ಬರುವ ಹೃದಯದ ಸಮಸ್ಯೆಯಿಂದ ಬಳಲುತ್ತಿರುವವರು. ಹೃದಯದ ರುಮ್ಯಾಟಿಕ್ ಕಾಯಿಲೆಯಿಂದ ಬಳಲುತ್ತಿರುವವರು. ಹೃದಯದ ಪರಿಧಮನಿಯ ಕಾಯಿಲೆಯಿಂದ ಬಳಲುತ್ತಿರುವವರು. ಬೈಪಾಸ್ ಅಥವಾ ತೆರೆದ ಹೃದಯದ ಶಸ್ತ್ರಚಿಕಿತ್ಸೆ ಅಗತ್ಯವಿರುವ ರೋಗಿಗಳು.

ಶಿಬಿರದಲ್ಲಿ ಚರ್ಮ ರೋಗ, ಕಣ್ಣಿನ ತಪಾಸಣೆ, ಮಕ್ಕಳ ತಪಾಸಣೆ, ಕಿವಿ, ಮೂಗು ಮತ್ತು ಗಂಟಲು ತಪಾಸಣೆಯನ್ನು ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕರೆಮಾಡಿ : 9741881399

Related posts

ಹೊಕ್ಕಾಡಿಗೋಳಿ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಭಾರತೀಯ ಜೀವ ವಿಮಾ ನಿಗಮದ ಬೆಳ್ತಂಗಡಿ ಉಪಗ್ರಹ ಶಾಖಾಧಿಕಾರಿಯಾಗಿ ಸಂತೋಷ್ ರೆಡ್ಡಿ

Suddi Udaya

ಕಳೆಂಜ ಗ್ರಾ.ಪಂ. ನಲ್ಲಿ ನೌಕರರು ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಇಂದಬೆಟ್ಟು: ಕುಡಿಯುವ ನೀರಿಗಾಗಿ ಗ್ರಾ.ಪಂ. ಮಾಜಿ ಸದಸ್ಯ ವೆಂಕಪ್ಪ ಕೋಟ್ಯಾನ್ ರಿಂದ ಪಂಚಾಯತ್ ಎದುರು ಪ್ರತಿಭಟನೆ: ಶೀಘ್ರವಾಗಿ ದುರಸ್ತಿ ಮಾಡಿಸಿಕೊಡುವುದಾಗಿ ಗ್ರಾ.ಪಂ. ಅಧ್ಯಕ್ಷೆ ಭರವಸೆ

Suddi Udaya

ಶಿರ್ಲಾಲು ಗರಡಿ – ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ

Suddi Udaya
error: Content is protected !!