August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಶ್ರೀ ಪಾಂಡುರಂಗ ಶಾಖೆಯ ವಾರ್ಷಿಕೋತ್ಸವ ವೈಭವ

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಪಾಂಡುರಂಗ ಶಾಖೆಯ ವಾರ್ಷಿಕೋತ್ಸವವು ಅತ್ಯಂತ ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಪಣೆಜಾಲ್ ನ ಸಂಭ್ರಮ ಸಭಾ ಭವನದಲ್ಲಿ ನೆರವೇರಿತು. ಯೋಗದ ಮಹತ್ವವನ್ನು ಸಾರುವ ಈ ಕಾರ್ಯಕ್ರಮದಲ್ಲಿ ಅನೇಕ ಯೋಗಬಂಧುಗಳು, ಯೋಗೇತರ ಬಂಧುಗಳು ಹಾಗೂ ಗಣ್ಯರು ಭಾಗವಹಿಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಂಗಳೂರಿನ ಹಿರಿಯ ಯೋಗ ಶಿಕ್ಷಕರಾದ ರವೀಶ್ ಭಾಗವಹಿಸಿ, ಯೋಗವು ಆರೋಗ್ಯಕರ ಜೀವನಕ್ಕೆ ಅವಿಭಾಜ್ಯ ಅಂಗವಾಗಿದ್ದು, ಪ್ರತಿಯೊಬ್ಬರೂ ದಿನನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಸಭಾ ಅಧ್ಯಕ್ಷತೆಯನ್ನು ಪಾಂಡುರಂಗ ಶಾಖೆಯ ಸಂಚಾಲಕರಾದ ದಿನೇಶ್ ವಹಿಸಿಕೊಂಡು, ಶಾಖೆಯ ಬೆಳವಣಿಗೆ ಮತ್ತು ಮುಂದಿನ ಯೋಜನೆಗಳ ಬಗ್ಗೆ ವಿವರಿಸಿದರು. ವೇದಿಕೆಯಲ್ಲಿ ನಮ್ಮ ಮನೆ ಶಾಖೆಯ ಸಂಚಾಲಕರಾದ ಸುಮಲತಾ ಉಪಸ್ಥಿತರಿದ್ದರು.
ಪಾಂಡುರಂಗ ಶಾಖೆಯ ಆನಂದ ಸ್ವಾಗತಿಸಿ, ವಾರ್ಷಿಕ ವರಧಿಯನ್ನು ಪಾಂಡುರಂಗ ಶಾಖೆಯ ಶಿಕ್ಷಕ ದಯಾನಂದ ವಾಚಿಸಿದರು. ಪಾಂಡುರಂಗ ಶಾಖೆಯ ಜಯಂತಿ ಧನ್ಯವಾದವಿತ್ತರು. ಚಿದಾನಂದ ಇಡ್ಯಾ ರವರ ನಿರೂಪಿಸಿದರು.

ಸಭಾ ಕಾರ್ಯಕ್ರಮದ ನಂತರ ನಮ್ಮ ಮನೆ ಶಾಖೆ, ಶ್ರೀ ಪಾಂಡುರಂಗ ಶಾಖೆ ಹಾಗೂ ಮದ್ದಡ್ಕ ಶಾಖೆಯ ಯೋಗ ಬಂಧುಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಪಾಂಡುರಂಗ ಶಾಖೆಯ ಯೋಗ ಬಂಧು ವಿಧ್ಯಾ ವಿಶೇಷ ಮುತುವರ್ಜಿಯಿಂದ ಹಿರಿಯ ಯೋಗ ಬಂಧುಗಳಾದ ರಾಮಕೃಷ್ಣ , ಯೋಗೀಶ್ ರವರ ಸಲಹೆ ಸಹಕಾರದೊಂದಿಗೆ ಪಾಂಡುರಂಗ ಶಾಖೆ, ನಮ್ಮ ಮನೆ ಶಾಖೆ ಮದ್ದಡ್ಕ ಶಾಖೆಯ ಯೋಗ ಬಂಧುಗಳ ಒಗ್ಗೂಡುವಿಕೆಯಿಂದ ಶಿಕ್ಷಕರಾದ ಪ್ರದೀಪ್, ಆನಂದ ಸಹಕಾರದಿಂದ ನಡೆಯಿತು.

Related posts

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ 48ನೇ ವರ್ಷದ ಭಜನಾ ಸಪ್ತಾಹ : ಧಾರ್ಮಿಕ ಸಭೆ

Suddi Udaya

ಕೊಕ್ಕಡ: ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಬೆಳ್ತಂಗಡಿಯಲ್ಲಿ ಸಿಂಧೂರ ಟ್ರೇಡರ್ಸ್ ಶುಭಾರಂಭ

Suddi Udaya

ಪುದುವೆಟ್ಟು ಶ್ರೀ.ಧ.ಮಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ: ವಿನೋದ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಗೆ ಶೇ. 99.56 ಫಲಿತಾಂಶ

Suddi Udaya
error: Content is protected !!